ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿಗೆ ಗಣ್ಯರ ಆಯ್ಕೆ: ಜನವರಿ 26 ರಂದು ಪ್ರಶಸ್ತಿ ಪ್ರದಾನ
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದ್ದರುಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ.
ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 26ರ ಭಾನುವಾರ ಸಂಜೆ 5.30ಕ್ಕೆ ಮಾಗಡಿ ರಸ್ತೆಯ ಎಂಎಂಬಿ ಲೆಗಸಿಯಲ್ಲಿ ಚಿತ್ರರಂಗದ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಈ ವೇಳೆ ಹಲವು ಸಾಧಕರಿಗೆ ಪ್ರಶಸ್ತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಶ್ರೀ ರಾಘವೇಂದ್ರ ಚಿತ್ರವಾಣಿಯ ಸುಧೀಂದ್ರ ವೆಂಕಟೇಶ್ , ಸುನೀಲ್ ಸುಧೀಂದ್ರ ಮತ್ತು ಡಿ.ಜಿ ವಾಸುದೇವ್ ಮಾಹಿತಿ ಹಂಚಿಕೊಂಡಿದ್ದಾರೆ
ಈ ಬಾರಿಯ ಪ್ರಶಸ್ತಿಗಳ ವಿವರ

• ಮೀನಾಕ್ಷಿ ಕೆ.ವಿ. ಜಯರಾಂ (ಹಿರಿಯ ಚಲನಚಿತ್ರ ನಿರ್ಮಾಪಕರು) : ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
• ಕೆ.ಜೆ. ಕುಮಾರ್ ( ಹಿರಿಯ ಪತ್ರಕರ್ತರು ): ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
• ಕುಮಾರಿ ಅನುರಾಧಾ ಭಟ್ (ಗಾಯಕಿ) : ಡಾ. ರಾಜಕುಮಾರ್ ಪ್ರಶಸ್ತಿ, ಪಾರ್ವತಮ್ಮ ರಾಜಕುಮಾರ್ ಕುಟುಂಬದವರಿಂದ (ಖ್ಯಾತ ಹಿನ್ನೆಲೆ ಗಾಯಕರಿಗೆ ನೀಡುವ ಪ್ರಶಸ್ತಿ)
• ಓಂಪ್ರಕಾಶ್ ರಾವ್ (ಹಿರಿಯ ನಿರ್ದೇಶಕರು) : ಯಜಮಾನ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಶ್ರೀಮತಿ ಭಾರತಿ ವಿಷ್ಣುವರ್ಧನ ಅವರಿಂದ ನಿರ್ದೇಶಕರಿಗೆ ನೀಡುವ ಪ್ರಶಸ್ತಿ
• ರೇಖಾರಾವ್ (ಹಿರಿಯ ನಟಿ) : ನಟಿ ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ ಹಿರಿಯ ನಟಿ ಅವರಿಗೆ ನೀಡುವ ಪ್ರಶಸ್ತಿ
• ಅರ್ಜುನ್ ಜನ್ಯ (ಸಂಗೀತ ನಿರ್ದೇಶಕ) : ಎಂ.ಎಸ್. ರಾಮಯ್ಯ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಪ್ರೈ ಲಿ ಪ್ರಶಸ್ತಿ (ಅತ್ಯುತ್ತಮ ಸಂಗೀತ ನಿರ್ದೇಶನ, `ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕಾಗಿ)

• ಜಯಶಂಕರ್ ಆರ್ಯರ್ (ಕಥಾ ಲೇಖಕ ಹಾಗೂ ನಿರ್ದೇಶಕ) : ಖ್ಯಾತ ನಿರ್ದೇಶಕ-ನಿರ್ಮಾಪಕ ಶ್ರೀ ಕೆ.ವಿ. ಜಯರಾಂ ಪ್ರಶಸ್ತಿ, ಶ್ರೀಮತಿ ಮೀನಾಕ್ಷಿ ಜಯರಾಂ ಅವರಿಂದ (ಅತ್ಯುತ್ತಮ ಕಥಾಲೇಖಕರು, `ಶಿವಮ್ಮ’ ಚಿತ್ರಕ್ಕಾಗಿ)
• ಚಂದ್ರಜಿತ್ ಬೆಳ್ಳಿಯಪ್ಪ (ಸಂಭಾಷಣೆಕಾರ ಹಾಗೂ ನಿರ್ದೇಶಕ ) : ಚಿತ್ರಸಾಹಿತಿ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ, ಡಾ.ಎಸ್.ಕೆ. ನರಹರಿ ಅವರಿಂದ (ಅತ್ಯುತ್ತಮ ಸಂಭಾಷಣೆ, `ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕಾಗಿ) –
- ಉತ್ಸವ್ ಗೋನ್ವಾರ್ (ನಿರ್ದೇಶಕ) : ಬಿ. ಸುರೇಶ ಪ್ರಶಸ್ತಿ ಅವರಿಂದ (ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ) – (ಫೋಟೋ ಚಲನಚಿತ್ರಕ್ಕಾಗಿ)
• ಡಾ. ವಿ.ನಾಗೇಂದ್ರ ಪ್ರಸಾದ್ (ಗೀತರಚನೆಕಾರ) : ಹಿರಿಯ ಪತ್ರಕರ್ತರಾದ ಶ್ರೀ.ಪಿ.ಜಿ. ಶ್ರೀನಿವಾಸಮೂರ್ತಿ ಸ್ಮರಣಾರ್ಥ ಪ್ರಶಸ್ತಿ ಪತ್ರಕರ್ತ ವಿನಾಯಕರಾಮ್ ಕಲಗಾರು ಅವರಿಂದ (ಕೃಷ್ಣಂ ಪ್ರಣಯ ಸಖಿ' ಚಿತ್ರದದ್ವಾಪರ’)

