Kiccha Sudeep's elder son Sanchith's film debut: Celebrities attend the muhurta

ಕಿಚ್ಚ ಸುದೀಪ್ ಅಕ್ಕನ ಮಗನ ಸಂಚಿತ್ ಚಿತ್ರರಂಗ ಪ್ರವೇಶ: ಮುಹೂರ್ತದಲ್ಲಿ ಗಣ್ಯರು ಭಾಗಿ - CineNewsKannada.com

ಕಿಚ್ಚ ಸುದೀಪ್ ಅಕ್ಕನ ಮಗನ ಸಂಚಿತ್ ಚಿತ್ರರಂಗ ಪ್ರವೇಶ: ಮುಹೂರ್ತದಲ್ಲಿ ಗಣ್ಯರು ಭಾಗಿ

ನಟ ಕಿಚ್ಚ ಸುದೀಪ ಅವರ ಅಕ್ಕನ ಮಗ ಸಂಚಿ ಹೀರೋ ಆಗಿ ಸ್ಯಾಂಡಲ್‍ವುಡ್‍ಗೆ ಅಧಿಕೃತ ಎಂಟ್ರಿ ಕೊಟ್ಟಿದ್ದಾರೆ. ಒಂದೊಳ್ಳೆ ವಿಭಿನ್ನ ಕಾನ್ಸೆಪ್ಟ್ ಸಿನಿಮಾ ಮೂಲಕ ಸಂಚಿ ಚಂದನವನಕ್ಕೆ ಕಾಲಿಟ್ಟಿದ್ದಾರೆ. ಸಂಚಿಗೆ ನಾಯಕಿಯಾಗಿ ಪೆಪೆ ಸಿನಿಮಾ ಖ್ಯಾತಿಯ ನಟಿ ಕಾಜಲ್ ಕುಂದರ್ ಕಾಣಿಸಿಕೊಳ್ಳುತ್ತಿದ್ದಾರೆ.

ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಸಂಚಿ ಚೊಚ್ಚಲ ಸಿನಿಮಾಗೆ ಅದ್ದೂರಿ ಚಾಲನೆ ಸಿಕ್ಕಿದೆ. ಅಳಿಯನ ಮೊದಲ ಸಿನಿಮಾಗೆ ಕಿಚ್ಚ ಸುದೀ¥ ಕ್ಲ್ಯಾಪ್ ಮಾಡುವ ಮೂಲಕ ಸಿನಿಮಾತಂಡಕ್ಕೆ ಶುಭಕೋರಿದರು.

ಅಶ್ವಿನಿ ಪುನೀತ್ ರಾಜ್ ಕುಮಾರ್ ಕ್ಯಾಮರಾ ಆನ್ ಮಾಡುವ ಕಿಚ್ಚನ ಅಳಿಯನ ಸಿನಿಮಾಗೆ ಆಲ್ ದಿ ಬೆಸ್ಟ್ ಹೇಳಿದರು. ಸುದೀಪ ಅವರ ಇಡೀ ಕುಟುಂಬ ಹಾಜರಿದ್ದು ಮನೆ ಮಗನ ಚೊಚ್ಚಲ ಚಿತ್ರದ ಮುಹೂರ್ತ ಸಮಾರಂಭಕ್ಕೆ ಜೊತೆಯಾಗಿದ್ದು ವಿಶೇಷವಾಗಿತ್ತು.

ಸುದೀಪ್ ಅಕ್ಕ ಹಾಗೂ ನಾಯಕ ಸಂಚಿ ಅವರ ತಾಯಿ, ಸುದೀಪ್ ಅವರ ತಂದೆ ಸರೋವರ್ ಸಂಜೀವ್ ಮಗಳು ಸಾನ್ವಿ ಸೇರಿದಂತೆ ಇಡೀ ಕುಟುಂಬ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಂಚಿ ಮೊದಲ ಸಿನಿಮಾಗೆ ವಿವೇಕ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಿವೇಕ ಅವರಿಗೂ ಇದು ಮೊದಲ ಸಿನಿಮಾ. ಮೊದಲು ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ ಕೆಲಸ ಮಾಡಿದ್ದ ವಿವೇಕ ಈ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸಂಚಿ ಮೊದಲ ಸಿನಿಮಾಗೆ ಕೆಆರ್‍ಜಿ ಮತ್ತು ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ವಿಶೇಷ.

ನಿರ್ದೇಶಕ ವಿವೇಕ ಮಾತನಾಡಿ ‘ಇದು ಮೈಸೂರು ಮೂಲದ ಕಥೆ. 2001 ರಿಂದ 2011ರ ವರೆಗೂ ನಡೆಯುವ ಕಥೆಯಾಗಿದೆ. ಅವಧಿಯಲ್ಲಿ ನಡೆದ ಪ್ರಮುಖ ಘಟನೆಗಳು ಈ ಸಿನಿಮಾದಲ್ಲಿದೆ. ಕಥೆ ಕೇಳಿ ಇಂಪ್ರೆಸ್ ಆದ ಸಂಚಿ ಮೊದಲ ಮೀಟಿಂಗ್‍ನಲ್ಲೇ ಒಪ್ಪಿಕೊಂಡರು. ಆದರೆ ಸುದೀಪ್ ಅವರಿಗೆ ಕಥೆ ಹೇಳಿದ್ದು ಥ್ರಿಲ್ಲಿಂಗ್ ಅನುಭವ’ ಎಂದರು.

ನಾಯಕಿ ಕಾಜಲ್ ಮಾತನಾಡಿ ‘ನನಗೆ ಈ ಅವಕಾಶ ಕೊಟ್ಟಿದ್ದಕ್ಕೆ ಇಡೀ ಸಿನಿಮಾತಂಡಕ್ಕೆ ಹಾಗೂ ನಿರ್ದೇಶಕ ವಿವೇಕ ಅವರಿಗೆ ಧನ್ಯವಾಗಳು. ಸಂಚಿ ಅವರ ಜೊತೆ ಕೆಲಸ ಮಾಡಲು ಎಕ್ಸಾಯಿಟ್ ಆಗಿದ್ದೀನಿ. ನಮ್ಮ ತಂಡಿದಿಂದ ಉತ್ತಮ ಸಿನಿಮಾ ನಿರೀಕ್ಷೆ ಮಾಡಬಹುದು’ ಎಂದರು.

ನಟ ಮಯೂರ್ ಪಟೇಲ್ ಮಾತನಾಡಿ `ನನ್ನ ಸಿನಿಮಾ ಜೀವನದಲ್ಲೇ ಮೊದಲ ಬಾರಿಗೆ ಇಂತಹ ಪಾತ್ರ ಮಾಡುತ್ತಿದ್ದೇನೆ’ ಎಂದರು.

ನಿರ್ಮಾಪಕ ಯೋಗಿ ಜಿ ರಾಜ್ ಮಾತನಾಡಿ ಹೊಸ ಪ್ರತಿಭೆಯನ್ನು ಲಾಂಚ್ ಮಾಡುತ್ತಿರುವ ಖುಷಿ ಇದೆ. ಕನ್ನಡ ಇಂಡಸ್ಟ್ರಿಗೆ ಅನೇಕ ನಾಯಕರ ಅವಶ್ಯಕತೆ ಇದೆ ಹಾಗಾಗಿ ಸಂಚಿ ಅವರನ್ನು ಲಾಂಚ್ ಮಾಡುತ್ತಿರುವುದು ಹೆಮ್ಮೆ ಇದೆ. ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜೊತೆ ಸೇರಿ ಸಿನಿಮಾ ಮಾಡುತ್ತಿರುವುದು ಖುಷಿಯಿದೆ’ ಎಂದು ಅವರು ಹೇಳಿದರು.

ನಿರ್ಮಾಪಕ ಕಾರ್ತಿಕ್ ಗೌಡ ಮಾತನಾಡಿ, `ನಿರ್ದೇಶಕ ವಿವೇಕ ಅವರನ್ನು ಕರೆದುಕೊಂಡು ಬಂದಿದ್ದು ನಟ ಧನಂಜಯ. ಬಳಿಕ ಈ ಕಥೆಯನ್ನು ಸಂಚಿ ಮಾಡಬೇಕು ಅಂತ ಅಂದುಕೊಂಡು ಸುದೀಪ್ ಅವರ ಬಳಿ ಕಥೆ ಹೇಳಿದೆವು. ಬಳಿಕ ಸುದೀಪ್ ಸರ್ ಒಪ್ಪಿಕೊಂಡು ಅವರು ಕೂಡ ಈ ಸಿನಿಮಾಗಾಗಿ ಸಿಕ್ಕಾಪಟ್ಟೆ ಕೆಲಸ ಮಾಡಿದ್ದಾರೆ’ ಎಂದರು.

ನಾಯಕ ಸಂಚಿ ಮಾತನಾಡಿ, ‘ಸಿನಿಮಾ ಕಥೆ ಕೇಳಿದ ಪ್ರಾರಂಭದಲ್ಲೇ ಇಂಪ್ರೆಸ್ ಆದೆ. ಈ ಸಿನಿಮಾ ಮೂಲಕ ನಾನು ಅದ್ಭುತವಾದ ಮೈಸೂರು ಸಿಟಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದೇನೆ. ಕಥೆ ತುಂಬಾ ವಿಭಿನ್ನವಾಗಿದೆ. ಧನಂಜಯ ಸರ್ ಅವರಿಗೆ ತುಂಬಾ ಧನ್ಯಾವಾದ ಹೇಳಲೇಬೇಕು. ಈ ಸಿನಿಮಾಗೆ ನನ್ನ ಹೆಸರನ್ನು ಸೂಚಿಸಿದ್ದೇ ಅವರು. ಬಳಿಕ ಕಾರ್ತಿಕ್ ಸರ್ ಮತ್ತು ಯೋಗಿ ಸರ್ ನನ್ನ ಮೇಲೆ ನಂಬಿಕೆ ಇಟ್ಟು ನನಗೆ ಸಿನಿಮಾ ಮಾಡುತ್ತಿದ್ದಾರೆ, ಆ ನಂಬಿಕೆ ನಾನು ಉಳಿಸಿಕೊಳ್ಳುತ್ತೇನೆ. ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ನ ಮೊದಲ ಸಿನಿಮಾ. ಕನ್ನಡದಲ್ಲಿ ನಡೆಯುತ್ತಿರುವ ಈ ಕೊಲಬ್ರೇಷನ್ ತುಂಬಾ ಖುಷಿಯಾಗುತ್ತದೆ’ ಎಂದರು.

ಮೈಸೂರು ಮೂಲಕ ಕ್ರೈಂ ಥ್ರಿಲ್ಲರ್. ಸ್ಟೋರಿಯಾಗಿದೆ. ಈ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಸಂಚಿ ಹುಟ್ಟುಹಬ್ಬಕ್ಕೆ ಅಂದರೆ ಫೆಬ್ರವರಿ 5ಕ್ಕೆ ರಿವೀಲ್ ಮಾಡಲು ಪ್ಲಾನ್ ಮಾಡಿಕೊಂಡಿದೆ ಸಿನಿಮಾತಂಡ.

ಸಿನಿಮಾದಲ್ಲಿ ನಟ ಮಯೂರ್ ಪಟೇಲ್, ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜೇಯ್, ಬಿಗ್ ಬಾಸ್ ಖ್ಯಾತಿಯ ಹಂಸ, ಮಾಲಾಶ್ರೀ ಸೇರಿದಂತೆ ದೊಡ್ಡ ತಾರಾಬಳಗವೆ ಇದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಶೇಖರ್ ಚಂದ್ರ ಛಾಯಾಗ್ರಾಹಣ, ವಿಶ್ವಾಸ್ ಆರ್ಟ್ ವರ್ಕ್ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin