ವಿಭಿನ್ನ ಕಥೆಯ ‘ಪಪ್ಪಿ’ ಚಿತ್ರಕ್ಕೆ 50 ದಿನದ ಸಂಭ್ರಮ
ಕನ್ನಡದಲ್ಲಿ ವಿಭಿನ್ನ ಮಾದರಿ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ “ಪಪ್ಪಿ’ ಚಿತ್ರಕ್ಕೆ ಶಿವರಾಜ್ ಕುಮಾರ್, ರಮ್ಯಾ ಹಾಗು ದೃವ ಸರ್ಜಾ ಸಾಥ್ ನೀಡಿದ್ದರು.ಈ ಚಿತ್ರಬಿಡುಗಡೆಯಾಗಿ 50 ದಿನ ಪೂರೈಸಿದೆ. ನಿರ್ಮಾಪಕರಾದ ಯೋಗಿ ಜಿ ರಾಜ್, ನಾಯಕಿ ಸಂಜನಾ ಆನಂದ್ ಸಾಥ್ ಕೊಟ್ಟರು
ಕೆ ಆರ್ ಜಿ ಸ್ಟುಡಿಯೋದ ಯೋಗಿ ಜಿ ರಾಜ್ ಮಾತನಾಡಿ , ಪಪ್ಪಿ ಸಿನಿಮಾ ಒಂದೊಳ್ಳೆ ಜರ್ನಿ. ಚಿತ್ರದ ಟ್ರೇಲರ್ ನ್ನು ಸತ್ಯಹೆಗ್ಡೆ ಕಳಿಸಿದ್ದರು. ಟ್ರೇಲರ್ ಕಂಟೆಂಟ್ ಇಷ್ಟವಾಗಿ ಡೈರೆಕ್ಟರ್ ನಂಬರ್ ತೆಗೆದುಕೊಂಡು ಮಾತನಾಡಿದೆ. ಬಳಿಕ ಸಿನಿಮಾ ನೋಡಿದೆ. ಮಾಸ್ ಕಂಟೆಂಟ್ ಇಲ್ಲದೇ ಎಮೋಷನ್ ಇಟ್ಕೊಂಡು ಬರೆದ ಸಿನಿಮಾ. ಆ ಜಾನರ್ ಯಾರು ಟಚ್ ಮಾಡಿರಲಿಲ್ಲ. ಉತ್ತರ ಕರ್ನಾಟಕದ ಭಾಷೆ ಎಷ್ಟು ಸೊಗಸು ಅನ್ನೋದು ಸಿನಿಮಾದಲ್ಲಿದೆ. ನಿರ್ದೇಶಕರು ಯೋಚನೆಮಾಡಿ ಸಿನಿಮಾ ಮಾಡಿದ್ದಾರೆ. ಈ ಕಾಲಘಟ್ಟದಲ್ಲಿ ಐವತ್ತು ದಿನ ಸಿನಿಮಾ ಓಡುವುದು ಕಷ್ಟ. ಪಪ್ಪಿ ಚಿತ್ರ 50 ದಿನ ಓಡಿದೆ. ನನ್ನ ಕೆಆರ್ ಜಿ ಕಡೆಯಿಂದ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ನಿರ್ದೇಶಕರಾದ ಆಯುಷ್ ಮಲ್ಲಿ ಮಾತನಾಡಿ, ಪಪ್ಪಿ ಸಿನಿಮಾ ಐವತ್ತು ದಿನ ಆಗುತ್ತದೆ ಎಂದು ಕನಸ್ಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಜನ ಮೆಚ್ಚಿಕೊಂಡಿರುವುದು ಖುಷಿ ಕೊಟ್ಟಿದೆ. ಕೆಆರ್ ಜಿ ಸಂಸ್ಥೆ ನಮಗೆ ಬಹಳ ಬೆಂಬಲವಾಗಿ ನಿಂತರು. ಈ ಐವತ್ತು ದಿನ ನಡೆಯಲು ಅವರು ಕೂಡ ಕಾರಣ ಎಂದು ಸಂತಸ ಹಂಚಿಕೊಂಡರು.

ಈ ಹಿಂದೆ ಫಸ್ಟ್ ಲವ್ ಸಿನಿಮಾ ಮಾಡಿದ್ದ ಆಯುಷ್ ಮಲ್ಲಿ ಪಪ್ಪಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಬ್ಬರು ಬಾಲಕರು ಹಾಗೂ ಶಾನ್ವದ ಸುತ್ತ ಸಾಗುವ ಚಿತ್ರವನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅರ್ಪಿಸುತ್ತಿದ್ದರು. ಮೇ 1ಕ್ಕೆ ಈ ಚಿತ್ರ ತೆರೆಗೆ ಬಂದಿದ್ದ ಪಪ್ಪಿಯನ್ನು ಶಿವಣ್ಣ, ರಮ್ಯಾ ಸೇರಿದಂತೆ ಚಿತ್ರರಂಗದ ಹಲವರು ನೋಡಿ ಮೆಚ್ಚಿಕೊಂಡಿದ್ದರು. ಉತ್ತರ ಕರ್ನಾಟಕ ಭಾಷೆಯಲ್ಲಿ ಸ್ಥಳೀಯ ಕಲಾವಿರಾದ ಜಗದೀಶ್ ಕೊಪ್ಪಳ, ಆದಿತ್ಯ ಸಿಂಧನೂರು, ಅದ್ರುಷ್ಟ ಸಂಕನೂರು, ಋತ್ವಿಕ್ ಬಳ್ಳಾರಿ, ದುರುಗಪ್ಪ ಕಾಂಬ್ಳಿ, ರೇಣುಕಾ, ಆರಾವ ಲೋಹಿತ್ ನಾಗರಾಜ್ ಚಿತ್ರದಲ್ಲಿ ನಟಿಸಿದ್ದಾರೆ.
ಶ್ರೀಧರ್ ಕಶ್ಯಪ್, ರವಿ ಬಿಲ್ಲೂರ್ ಚಿತ್ರಕ್ಕೆ ಸಂಗೀತ ಒದಗಿಸಿದ್ದು, ಬಿ ಸುರೇಶ್ ಬಾಬು ಕ್ಯಾಮೆರಾ ಹಿಡಿದಿದ್ದು, ವಿಶ್ವ ಎನ್ ಎಂ ಸಂಕಲನ ಪಪ್ಪಿ ಚಿತ್ರಕ್ಕಿದೆ. ಹಾಸ್ಯದ ಜೊತೆಗೆ ಗಂಭೀರ ವಿಷಯದ ಮೇಲೆ ಬೆಳಕು ಚೆಲ್ಲುವ ಪಪ್ಪಿಗೆ ಅಂದಪ್ಪ ಸಂಕನೂರು ಬಂಡವಾಳ ಹೂಡಿದ್ದಾರೆ.

ಕೆ ಆರ್ ಜಿ ಪಪ್ಪಿ ಚಿತ್ರವನ್ನು ರಾಜ್ಯಾದ್ಯಂತ ವಿತರಣೆ ಮಾಡಿತ್ತು. ಪಪ್ಪಿಗೆ ಕನ್ನಡ ಚಿತ್ರರಂಗದ ಅನೇಕರು ಬೆಂಬಲ ನೀಡಿದ್ದರು. ರಮ್ಯಾ, ಧ್ರುವ ಸರ್ಜಾ, ವಿನಯ್ ರಾಜ್ ಕುಮಾರ್, ರಾಜ್ ಬಿ ಶೆಟ್ಟಿ, ನವೀನ್ ಶಂಕರ್ ಮುಂತಾದವರು ಈ ಸಿನಿಮಾಗೆ ನೀಡಿದ ಬೆಂಬಲಕ್ಕೆ ಚಿತ್ರತಂಡದವರು ಧನ್ಯವಾದ ತಿಳಿಸಿದೆ.

