MS Satyu to collaborate with director Sudhir Attavar for the movie "Koragajja"

“ಕೊರಗಜ್ಜ” ಸಿನಿಮಾಗೆ ಎಂ ಎಸ್ ಸತ್ಯು ಸಹಕಾರ: ನಿರ್ದೇಶಕ ಸುಧೀರ್ ಅತ್ತಾವರ್ - CineNewsKannada.com

“ಕೊರಗಜ್ಜ” ಸಿನಿಮಾಗೆ ಎಂ ಎಸ್ ಸತ್ಯು ಸಹಕಾರ: ನಿರ್ದೇಶಕ ಸುಧೀರ್ ಅತ್ತಾವರ್

ಪದ್ಮಶ್ರೀ ಪ್ರಶಸ್ತಿ ವಿಜೇತ ಎಂ ಎಸ್ ಸತ್ಯು ರವರಿಗೆ ಜುಲೈ 6 ರಂದು 96ನೇ ಹುಟ್ಟುಹಬ್ಬದ ಸಂಭ್ರಮ. ಈ ಸಡಗರವನ್ನು “ಕೊರಗಜ್ಜ” ಸಿನಿಮಾದ ನಿರ್ದೇಶಕ ಸುಧೀರ್ ಅತ್ತಾವರ್ ಮತ್ತು ಚಿತ್ರ ತಂಡ ಹೆಚ್ಚು ಸಂಭ್ರಮಿಸುತ್ತಿದೆ. ಇದಕ್ಕೆ ಕಾರಣ ಈ ಚಿತ್ರದಲ್ಲಿ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಸತ್ಯುರವರು ನೀಡಿರುವ ಕೊಡುಗೆ.

ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಮ್ಸ್ ಬ್ಯಾನರ್ ಅಡಿಯ ಬಹು ನಿರೀಕ್ಷಿತ ಪಾನ್ ಇಂಡಿಯಾ ಸಿನಿಮಾ “ಕೊರಗಜ್ಜ” ಇನ್ನೇನು ಬಿಡುಗಡೆಗೆ ಸಿದ್ಧವಾಗುತ್ತಿದೆ. ದೇಶದ ಬಲು ದೊಡ್ದ ಆಡಿಯೋ ಕಂಪೆನಿ ಆಡಿಯೋ ರೈಟ್ ಪಡೆದುಕೊಂಡಿದೆ. ಈ ನಡುವೆ ಸಿನಿಮಾದ ಅತ್ಯಂತ ವಿಶಿಷ್ಟ ಎನಿಸುವ ಕಾಸ್ಟ್ಯೂಮ್‍ನ್ನು ದೇಶದ ಖ್ಯಾತ ಕಲಾ ವಿನ್ಯಾಸಗಾರ, ರಂಗ ಕರ್ಮಿ-ನಿರ್ದೇಶಕ ಎಂ ಎಸ್ ಸತ್ಯುರವರ ಬಳಿ ಸಾಕಷ್ಟು ಚರ್ಚಿಸಿ, ವಸ್ತ್ರ ವಿನ್ಯಾಸ ಗೊಳಿಸಿರುವ ವಿಚಾರವನ್ನು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ನಿರ್ದೇಶಕರು, ಸತ್ಯು ರವರು ತನ್ನ 96ನೇ ಹುಟ್ಟು ಹಬ್ಬವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಬಹಿರಂಗ ಪಡಿಸಿರುತ್ತಾರೆ.

ಸುಮಾರು ಎಂಟುನೂರು ವರ್ಷಗಳ ಹಿಂದಿನ ಕಥೆಯಾದ್ದರಿಂದ ಕಾಲಘಟ್ಟಕ್ಕೆ ಸರಿ ಹೊಂದುವ ಕಾಸ್ಟ್ಯೂಮ್‍ನ್ನು ವಿನ್ಯಾಸಗೊಳಿಸಲು ಆಳವಾದ ಜ್ಞಾನ ಮತ್ತು ಪರಿಕಲ್ಪನೆ ಬೇಕಾಗಿರುತ್ತದೆ. ಸತ್ಯು ಮಾಡಿರುವ ಕಲಾ ವಿನ್ಯಾಸಗಳು ಲಂಡನಿನ ಷೇಕ್ಸ್ ಪಿಯರ್ ಮ್ಯೂಸಿಯಂ ನಲ್ಲೂ ಸಂಗ್ರಹವಾಗಿದೆ. ಗುರುಗಳಾದ ಸತ್ಯು ರವರ ಹತ್ರ “ಕೊರಗಜ್ಜ ” ಮತ್ತು ನನ್ನ ಮುಂಬರುವ ಸಿನಿಮಾದ ವಸ್ತ್ರ ವಿನ್ಯಾಸ ಮತ್ತು ಕಲಾ ವಿಭಾಗದ ಬಗ್ಗೆ ಹಲವಾರು ಬಾರಿ ಫೆÇೀನ್ ನಲ್ಲಿ ಚರ್ಚಿಸಿದೆ. ಸಂಪೂರ್ಣ ಮಾಹಿತಿ ಪಡೆದುಕೊಳ್ಳುವಷ್ಟರಲ್ಲಿ ಸತ್ಯು ವಯೋ ಸಹಜ ಖಾಯಿಲೆಯಿಂದ ಸೊರಗಿ ಹೋಗತೊಡಗಿದರು. ನಂತರ ಸ್ವತಃ ಆಳವಾದ ಅಭ್ಯಾಸ ಮಾಡಿ ಉಡುಗೆ- ತೊಡುಗೆ ಮತ್ತು ಕಲಾ ವಿನ್ಯಾಸ ಮಾಡಿದೆ. ಆದರೆ ನನ್ನ “ಪರಿ” ಸಿನಿಮಾದ ಕಲಾ ನಿರ್ದೇಶನವನ್ನು ಸತ್ಯು ರವರೇ ಮಾಡಿದ್ದರು ಎಂದು ಸುಧೀರ್ ತಿಳಿಸಿದ್ದಾರೆ

“ಕೊರಗಜ್ಜ” ಸಿನಿಮಾದ ಕಲಾ ನಿರ್ದೇಶನವನ್ನೂ ನಿರ್ದೇಶಕರೇ ಮಾಡಿರುತ್ತಾರೆ. ಸುಧೀರ್ ಅತ್ತಾವರ್ ಎಂ ಎಸ್ ಸತ್ಯುರವರ ಜೊತೆ ಸಿನಿಮಾ,ರಂಗಭೂಮಿ ಮತ್ತು ಟಿವಿ ಮಾಧ್ಯಮದಲ್ಲಿ ಸುಮರು 10 ವರ್ಷ ಕೆಲಸ ಮಾಡಿದ್ದಾರೆ. “ಇಜ್ಜೋಡು” ಚಿತ್ರಕ್ಕೆ ಎಲ್ಲಾ ಹಾಡುಗಳನ್ನೂ ಸುಧೀರ್ ರಚಿಸಿದ್ದಾರೆ. ಎಂ ಎಸ್ ಸತ್ಯು “ಕೊರಗಜ್ಜ” ಸಿನಿಮಾದ ಕಥೆ ಕೇಳಿ ಬಹಳ ಇಷ್ಟ ಪಟ್ಟಿದ್ದರು. ಸಿನಿಮಾ ಮಾಡಲು ಅತ್ಯಂತ ಚಾಲೆಂಜಿಂಗ್ ಮತ್ತು ಕಠಿಣ ಎಂಬ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು. ಸಿನಿಮಾದ ಕಾಸ್ಟ್ಯೂಮನ್ನು ಖ್ಯಾತ ಹಾಲಿವುಡ್-ಬಾಲಿವುಡ್ ಮತ್ತು ಯುರೋಪಿಯನ್ ಸಿನಿಮಾಗಳ ನಟ, ಕೊರಗಜ್ಜ ” ಸಿನಿಮಾದಲ್ಲಿ ಉದ್ಯಾವರ ಅರಸರ ಪಾತ್ರ ನಿಭಾಯಿಸಿರುವ ಕಬೀರ್ ಬೇಡಿ ಬಹಳವಾಗಿ ಮೆಚ್ಚಿಕೊಂಡು ತನ್ನ ಇನ್ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿದ್ದರು.

ತ್ರಿವಿಕ್ರಮ ಸಪಲ್ಯ ನಿರ್ಮಿಸುತ್ತಿರುವ “ಕೊರಗಜ್ಜ” ಸಿನಿಮಾವನ್ನು ದೇಶಾದ್ಯಂತ ತೆರೆ ಕಾಣಲು ಕಾರ್ಯ ತಂತ್ರ ರೂಪುಗೊಳ್ಳುತ್ತಿದೆ ಚಿತ್ರದಲ್ಲಿ ಶ್ರೇಯಾ ಘೋಷಾಲ್, ಸುನಿಧಿ ಚೌಹಾನ್, ಶಂಕರ್ ಮಹದೇವನ್, ಜಾವೆದ್ ಆಲಿ, ಶರೋನ್ ಪ್ರಭಾಕರ್, ಸ್ವರೂಪ್ ಖಾನ್, ಅರ್ಮನ್ ಮಲಿಕ್ ಜೊತೆಗೆ ದಕ್ಷಿಣ ಭಾರತದ ಪ್ರತಿಭೆಗಳಾದ ರಮೇಶ್ ಚಂದ್ರ, ಅನಿಲ ರಾಜಿವ್, ಸನ್ನಿದಾನಂದನಮ್, ವಿಜೇಶ್ ಗೋಪಾಲ್, ಪ್ರತಿಮ ಭಟ್, ಕಾಂಜನ ಮೊದಲಾದವರ ಕಂಠ ಸಿರಿಯಲ್ಲಿ ವಿನೂತನ ಗೀತೆಗಳು ಮೂಡಿಬಂದಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin