“ಮರಳಿ ಮನಸಾಗಿದೆ” ಚಿತ್ರದ ಹಾಡು ಬಿಡುಗಡೆ ಮಾಡಿದ ಹಿರಿಯ ನಟಿ ಪ್ರೇಮಾ - CineNewsKannada.com

“ಮರಳಿ ಮನಸಾಗಿದೆ” ಚಿತ್ರದ ಹಾಡು ಬಿಡುಗಡೆ ಮಾಡಿದ ಹಿರಿಯ ನಟಿ ಪ್ರೇಮಾ

ಮುದೇಗೌಡ್ರು,ನವೀನ್ ಕುಮಾರ್ ಆರ್.ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ಚೊಚ್ಚಲ ಬಾರಿಗೆ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ “ಮರಳಿ ಮನಸಾಗಿದೆ” ಚಿತ್ರಕ್ಕಾಗಿ ಹೆಸರಾಂತ ಸಾಹಿತಿ ಕೆ.ಕಲ್ಯಾಣ್ ಅವರು ಬರೆದಿರುವ “ಓಡುವ ನದಿಗೆ” ಎಂಬ ಹಾಡನ್ನು ಇತ್ತೀಚೆಗೆ ಕನ್ನಡದ ಜನಪ್ರಿಯ ನಟಿ ಪ್ರೇಮ ಅವರು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ.

ಅನುರಾಧ ಭಟ್ ಸಮಧುರ ಗೀತೆ ಹಾಡಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. ಚಿತ್ರದ ನಾಲ್ಕನೇ ಹಾಗೂ ಕೊನೆಯ ಹಾಡಾಗಿದೆ. ಈವರೆಗೂ ಬಿಡುಗಡೆಯಾಗಿರುವ ಚಿತ್ರದ ಮೂರು ಹಾಡುಗಳು ಕೂಡ ಜನಮನಸೂರೆಗೊಂಡಿದೆ. “ಓಡುವ ನದಿ” ಹಾಡಿಗೂ ಸಹ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಚಿತ್ರದ ನಾಲ್ಕು ಹಾಡುಗಳು ಮೂಲಕ ಬಿಡುಗಡೆಯಾಗಿದೆ.

iÀುುವಜನತೆಗೆ ಹತ್ತಿರವಾದ ಚಿತ್ರದ ಜೊತೆಗೆ ಸಂಬಂಧಗಳ ಮೌಲ್ಯಗಳನ್ನು ತಿಳಿಸುವ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೆÇೀಸ್ಟ್ ಪೆÇ್ರಡಕ್ಷನ್ ವರ್ಕ್ ಅಂತಿಮ ಹಂತದಲ್ಲಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ.

ನಿರ್ದೇಶಕ ನಾಗರಾಜ್ ಶಂಕರ್ ಚಿತ್ರಕ್ಕೆ ಕಥೆ, ಚಿತ್ರಕಥೆ ಸಂಭಾಷಣೆ ಬರೆದಿದ್ದು, ವಿನು ಮನಸು ಸಂಗೀತ ನೀಡಿದ್ದಾರೆ. ಹಾಲೇಶ್ ಎಸ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಅಲ್ಟಿಮೇಟ್ ಶಿವು ಸಾಹಸ ನಿರ್ದೇಶನ, ಆಶಿತ್ ಸುಬ್ರಹ್ಮಣ್ಯ ಸಹ ನಿರ್ದೇಶನ ಹಾಗೂ ವಿಜಯ್ ಕುಮಾರ್ ನಿರ್ಮಾಣ ಮೇಲ್ವಿಚಾರಣೆ “ಮರಳಿ ಮನಸಾಗಿದೆ” ಚಿತ್ರಕ್ಕಿದೆ.

ಅರ್ಜುನ್ ವೇದಾಂತ್, ನಿರೀಕ್ಷಾ ಶೆಟ್ಟಿ, ಸ್ಮೃತಿ ವೆಂಕಟೇಶ್, ಟಿ. ಎಸ್. ನಾಗಭರಣ, ಸ್ವಾತಿ, ಸಂಗೀತ, ಮಾನಸಿ ಸುಧೀರ್, ಭೋಜರಾಜ್ ವಾಮಂಜೂರ್, ಸೀರುಂಡೆ ರಘು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin