"Chatushpatha" is a story revolving around four main characters - directed by Krishnaji Rao

ನಾಲ್ಕು ಪ್ರಮುಖ ಪಾತ್ರಗಳ ಸುತ್ತ ಕಥೆ ಸಾಗುವ ಕಥನ “ಚತುಷ್ಪಥ-ನಿರ್ದೇಶಕ ಕೃಷ್ಣೋಜಿ ರಾವ್ - CineNewsKannada.com

ನಾಲ್ಕು ಪ್ರಮುಖ ಪಾತ್ರಗಳ ಸುತ್ತ ಕಥೆ ಸಾಗುವ ಕಥನ “ಚತುಷ್ಪಥ-ನಿರ್ದೇಶಕ ಕೃಷ್ಣೋಜಿ ರಾವ್

“ಚತುಷ್ಪಥ” ಎಂದರೆ ನಾಲ್ಕು ದಾರಿಗಳು. ಹೆದ್ದಾರಿಗಳಲ್ಲಿ ನೋಡಬಹುದು.ಚಿತ್ರದಲ್ಲಿ ಬಡ ಜನರ ವರ್ಗ, ಮಧ್ಯಮ ವರ್ಗ, ಶ್ರೀಮಂತರ ವರ್ಗ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಈ ನಾಲ್ಕು ಅಂಶಗಳನಿಟ್ಟುಕೊಂಡು “ಚತುಷ್ಪಥ” ಚಿತ್ರ ಮಾಡಿದ್ದೇವೆ ಎಂದರು ನಿರ್ದೇಶಕ -ನಿರ್ದೇಶಕ ಕೃಷ್ಣೋಜಿ ರಾವ್

ಚಿತ್ರದಲ್ಲಿ ನಾಲ್ಕು ಜನರ ದಾರಿ ಬೇರೆ ಆಗಿರುತ್ತದೆ. ಆ ದಾರಿಗಳು ಎಲ್ಲಿ ತಲುಪತ್ತದೆ. ಎಂಬುದನ್ನು ಸಿನಿಮಾದಲ್ಲಿ ನೋಡಬೇಕು. ವಿಭಿನ್ನ ಕಂಟೆಂಟ್ ಹೊಂದಿರುವ ಚಿತ್ರದಲ್ಲಿ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಮೊದಲ ಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದರು

ರೂಪ ಬಾಯಿ ಹಾಗೂ ಕೃಷ್ಣೋಜಿ ರಾವ್ ನಿರ್ಮಿಸಿರುವ ಹಾಗೂ ಕೃಷ್ಣೋಜಿ ರಾವ್ ಅವರೆ ನಿರ್ದೇಶಿಸಿರುವ ಹಾಗೂ ಮಿಲನ ನಾಗರಾಜ್, ಜಗನ್, ಕಿರಣ್ ರಾಜ್ , ಶಿಲ್ಪ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ” ಚತುಷ್ಪಥ ” ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ಮಾಹಿತಿ ನೀಡಿದರು

ನಟ ಜಗನ್ ಮಾತನಾಡಿ ನಿರ್ದೇಶಕರು ನನಗೆ ಕಥೆ ಹೇಳಿದಾಗ ಪಾತ್ರದ ಬಗ್ಗೆ ಕೇಳಿ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ನಾಲ್ಕು ಜನರ ದಾರಿ ನಾಲ್ಕು ಕಡೆ ಹೋಗಿ ಮುಟ್ಟುತ್ತದೆ. ಅದರಲ್ಲಿ ನನ್ನದು ಒಂದು ದಾರಿ. ನಾಲ್ಕು ದಾರಿ ಎಲ್ಲಿ ಹೋಗಿ ಮುಟ್ಟುತ್ತದೆ ಎನ್ನುವುದೆ “ಚತುಷ್ಪಥ”. ಎಂದು ಪ್ರಮುಖ ಪಾತ್ರದಲ್ಲಿ ಎಂದು ಹೇಳಿದರು

ಚಿತ್ರದಲ್ಲಿ ನಟಿಸಿರುವ ನಟಿ ಶಿಲ್ಪ, ಕಲಾವಿದ ಸುಂದರ್ ವೀಣಾ, ನಟಿ ಸವಿತ, ಸಂಭಾಷಣೆ ಬರೆದಿರುವ ರಘು ನಿಡುವಳ್ಳಿ ಹಾಗೂ ಛಾಯಾಗ್ರಾಹಕ ಉದಯ್ ಬಲ್ಲಾಳ್ “ಚತುಷ್ಪಥ” ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಮಡರು

ಸಂಗೀತ ನಿರ್ದೇಶಕ ವೀರ ಸಮರ್ಥ್ ಮಾಹಿತಿ ನೀಡಿ ಚಿತ್ರದಲ್ಲಿ ಎರಡು ಹಾಡುಗಳು ಹಾಗೂ ಒಂದು ಬಿಟ್ ಇದೆ. ಹಾಡುಗಳು ಚೆನ್ನಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ವಿಜಯ್ ಪ್ರಕಾಶ್ ಸೇರಿದಂತೆ ಹೆಸರಾಂತ ಗಾಯಕರು ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ ಎಂದು ತಿಳಿಸಿದರು.

ಚಿತ್ರದಲ್ಲಿ ಜಗನ್, ಕಿರಣ್ ರಾಜ್, ಮಿಲನ ನಾಗರಾಜ್, ಶಿಲ್ಪ, ಹನುಮಂತೇ ಗೌಡ, ಶ್ರೀಧರ್, ಸುಂದರ್, ಆಕರ್ಶ್, ತರಂಗ ವಿಶ್ವ, ಸವಿತ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin