ಆಸ್ಕರ್ ಅಂಗಳಕ್ಕೆ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಚಿತ್ರಗಳು: ಕನ್ನಡ ಸಿನಿಮಾರಂಗಕ್ಕೆ ಹೆಮ್ಮೆ
ಭಾರತೀಯ ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕನ್ನಡ ಚಿತ್ರರಂಗ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುತ್ತಿದೆ.ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಆಸ್ಕರ್ ಅಂಗಳದಲ್ಲಿ ಛಾಪು ಮೂಡಿಸಲು ಮುಂದಾಗಿದೆ. ಆಸ್ಕರ್ ಪ್ರಶಸ್ತಿ ಪಟ್ಟಿಯಲ್ಲಿ ‘ಅತ್ಯುತ್ತಮ ಚಿತ್ರ’ ವಿಭಾಗದ ಪಟ್ಟಿಯಲ್ಲಿ ‘ಕಾಂತಾರ-1’ ಮತ್ತು ‘ಮಹಾವತಾರ ನರಸಿಂಹ’ ಚಿತ್ರಗಳು ಅಧಿಕೃತ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿವೆ

ಈ ಮೂಲಕ ಹೊಂಬಾಳೆ ಸಂಸ್ಥೆ, , ಜಾಗತಿಕ ವೇದಿಕೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. 2025ರ ಸಾಲಿನ ಜಾಗತಿಕ ಹಿಟ್ ಚಿತ್ರಗಳಾದ ‘ಕಾಂತಾರ: ಚಾಪ್ಟರ್ 1’ ಮತ್ತು ‘ಮಹಾವತಾರ ನರಸಿಂಹ’, ವಿಶ್ವದ ಅತ್ಯುನ್ನತ ಚಲನಚಿತ್ರ ಪ್ರಶಸ್ತಿಯಾದ ಆಸ್ಕರ್ನ ‘ಅತ್ಯುತ್ತಮ ಚಿತ್ರ’ ಸೇರಿದಂತೆ ಪ್ರಮುಖ ವಿಭಾಗಗಳ ಸಾಮಾನ್ಯ ಪ್ರವೇಶ ಪಟ್ಟಿಯಲ್ಲಿ ಅಧಿಕೃತವಾಗಿ ಸ್ಥಾನ ಪಡೆದಿವೆ.
- ಅತ್ಯುತ್ತಮ ಚಿತ್ರ ವಿಭಾಗ: ಈ ಎರಡೂ ಚಿತ್ರಗಳು ಆಸ್ಕರ್ನ ಅತ್ಯಂತ ಪ್ರತಿಷ್ಠಿತ ವಿಭಾಗವಾದ ‘ಅತ್ಯುತ್ತಮ ಚಿತ್ರ’ ಪ್ರಶಸ್ತಿಗೆ ಸ್ಪರ್ಧಿಸಲು ಅರ್ಹತೆ ಪಡೆದಿವೆ. ಇದು ಹೊಂಬಾಳೆ ಫಿಲ್ಮ್ಸ್ ಕಥೆಗಳ ಶಕ್ತಿ ಮತ್ತು ಜಾಗತಿಕ ಗುಣಮಟ್ಟಕ್ಕೆ ಸಂದ ಗೌರವವಾಗಿದೆ.
- ಅನಿಮೇಷನ್ ಲೋಕದ ಕ್ರಾಂತಿ: ‘ಮಹಾವತಾರ ನರಸಿಂಹ’ ಚಿತ್ರ ‘ಅತ್ಯುತ್ತಮ ಚಿತ್ರ’ ಮಾತ್ರವಲ್ಲದೆ, ‘ಅತ್ಯುತ್ತಮ ಅನಿಮೇಟೆಡ್ ಫೀಚರ್ ಫಿಲ್ಮ್’ ವಿಭಾಗದಲ್ಲೂ ಪ್ರಬಲ ಸ್ಪರ್ಧಿಯಾಗಿ ಹೊರಹೊಮ್ಮಿದೆ. ಆ ಮೂಲಕ ಈ ವಿಭಾಗದಲ್ಲಿ ಆಯ್ಕೆಯಾದ ಭಾರತದ ಮೊದಲ ಅನಿಮೇಷನ್ ಚಿತ್ರ ಎಂಬ ಇತಿಹಾಸ ಬರೆದಿದೆ.
- ಹೊಂಬಾಳೆ ಫಿಲ್ಮ್ಸ್ ಸಾಧನೆ: ಈ ವರ್ಷ ಆಸ್ಕರ್ನ ಸಾಮಾನ್ಯ ಪಟ್ಟಿಯಲ್ಲಿರುವ ಭಾರತದ ಕೇವಲ ಐದು ಚಿತ್ರಗಳ ಪೈಕಿ ಎರಡು ಚಿತ್ರಗಳು ಹೊಂಬಾಳೆ ಸಂಸ್ಥೆಯದ್ದಾಗಿರುವುದು ಗಮನಾರ್ಹ.

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ತನ್ನ ಸಾಂಸ್ಕೃತಿಕ ಬೇರುಗಳ ಮೂಲಕ ಜಗತ್ತನ್ನು ಸೆಳೆದಿದ್ದರೆ, ಅಶ್ವಿನ್ ಕುಮಾರ್ ನಿರ್ದೇಶನದ ‘ಮಹಾವತಾರ ನರಸಿಂಹ’ ತನ್ನ ದೃಶ್ಯ ವೈಭವದ ಮೂಲಕ ಹೊಸ ಸಂಚಲನ ಮೂಡಿಸಿದೆ. ಎರಡೂ ಚಿತ್ರಗಳು ಈಗ ಆಸ್ಕರ್ನ ಪ್ರಮುಖ ವಿಭಾಗಗಳಾದ ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ನಟ, ಛಾಯಾಗ್ರಹಣ ಮತ್ತು ಚಿತ್ರಕಥೆ ವಿಭಾಗಗಳಲ್ಲೂ ಸ್ಪರ್ಧೆಗೆ ಇಳಿಯಲಿವೆ.

ಭಾರತೀಯ ಕಥೆಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ಗರಿಷ್ಠ ಗುಣಮಟ್ಟದೊಂದಿಗೆ ಕೊಂಡೊಯ್ಯುತ್ತಿರುವ ವಿಜಯ್ ಕಿರಗಂದೂರು ನೇತೃತ್ವದ ಹೊಂಬಾಳೆ ಫಿಲ್ಮ್ಸ್ಗೆ ಇದು ಅತ್ಯಂತ ಹೆಮ್ಮೆಯ ಕ್ಷಣವಾಗಿದೆ.


