Real star Upendra's son Ayush is debuting in Kannada cinema as a hero

ರಿಯಲ್ ಸ್ಟಾರ್ ಉಪೇಂದ್ರ ಪುತ್ರ ಆಯುಷ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ - CineNewsKannada.com

ರಿಯಲ್ ಸ್ಟಾರ್ ಉಪೇಂದ್ರ ಪುತ್ರ ಆಯುಷ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ

ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಪುತ್ರ ಆಯುಷ್ ಉಪೇಂದ್ರ ನಾಯಕನಾಗಿ ನಟಿಸುತ್ತಿರುವ ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಈ ಮೂಲಕ ಆಯಷ್ ಉಪೇಂದ್ರ ಸ್ಯಾಂಡಲ್ ವುಡ್ ಗೆ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಆಯುಷ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೆ ಕಾಶ್ಮೀರದಲ್ಲೇ ಮುಹೂರ್ತ ನೆರವೇರಿದ್ದು, 25 ದಿನಗಳ ಮೊದಲ ಹಂತದ ಚಿತ್ರೀಕರಣ ಕೂಡ ನಡೆದಿದೆ. ನಾಯಕನಾಗಲೂ ಬೇಕಾಗಿರುವ ಪೂರ್ವ ತಯಾರಿಗಳನ್ನೆಲ್ಲಾ ಮಾಡಿಕೊಂಡಿರುವ ಆಯುಷ್ ಮಾಡಿಕೊಂಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಮೊದಲಾಸಲ” ಚಿತ್ರ ನಿರ್ದೇಶಿಸಿದ್ದ ಪುರುಷೋತ್ತಮ ಸೂರಿ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅಭಿಷೇಕ್ ಎನ್ ಸಿರಿವಂತ್ ಚಿತ್ರ ನಿರ್ಮಿಸುತ್ತಿದ್ದಾರೆ. ಅಭಿಷೇಕ್ ಎನ್ ಸಿರಿವಂತ್ ಚೊಚ್ಚಲ ನಿರ್ಮಾಣದ ಚಿತ್ರ. ಖ್ಯಾತ ಛಾಯಾಗ್ರಾಹಕ ಎಚ್ ಸಿ ವೇಣು ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಉಳಿದ ತಾರಾಬಳಗ ಮತ್ತು ತಂತ್ರಜ್ಞರ ಕುರಿತು ಮಾಹಿತಿ ನೀಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

ಕಾಶ್ಮೀರದಲ್ಲಿ ಮಗನ ಮೊದಲ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಉಪಸ್ಥಿತರಿದ್ದು, ಆಯುಷ್ ಗೆ ಮಾರ್ಗದರ್ಶನ ನೀಡಿದ್ದಾರೆ. ವಿಶೇಷವಾಗಿ ಪ್ರಿಯಾಂಕ ಉಪೇಂದ್ರ ನಿರ್ಮಾಣದ ಅಂಶಗಳ ಕುರಿತು ಗಮನ ಹರಿಸುವುದರ ಜೊತೆಗೆ, ವಿವಿಧ ವಿಭಾಗಗಳಲ್ಲಿ ಸಹಾಯ ಮಾಡುತ್ತಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin