“ಪೌಡರ್” ಗೆಲುವಿಗಾಗಿ ಚಿತ್ರತಂಡದಿಂದ ಟೆಂಪಲ್ ರೌಂಡ್ಸ್

ಕೆಆರ್ ಜಿ ಸ್ಟುಡಿಯೋ ಮೂಲಕ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಾಣ ಮಾಡಿರುವ ಕಾಮಿಡಿ ಕಥಾಹಂದರ ಹೊಂದಿರುವ “ ಪೌಡರ್” ಚಿತ್ರ ಇದೇ 23ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಯಶಸ್ಸಿಗಾಗಿ ಚಿತ್ರತಂಡ ಟೆಂಪಲ್ ರನ್ ಮಾಡಿ ಆಶೀರ್ವಾದ ಪಡೆದಿದೆ.

ನಿರ್ಮಾಪಕರಾದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್, ನಾಯಕ ದಿಗಂತ್ ಹಾಗೂ ಇಡೀ ತಂಡದಿಂದ ಟೆಂಪಲ್ ರನ್ ಮಾಡಿ ಪೌಡರ್ ಚಿತ್ರಕ್ಕೆ ಉತ್ತಮ ಬೆಂಬಲ ಸಿಗಲಿ ಜೊತೆಗೆ ಚಿತ್ರ ಯಶಸ್ವಿಯಾಗುವಂತೆ ದೇವರಲ್ಲಿ ಪ್ರಾರ್ಥಿಸಿದರು.

ನಾಡಿನ ಅದಿ ದೇವತೆ ಚಾಮುಂಡೇಶ್ವರಿ ಅಮ್ಮನ ದರ್ಶನ ಪಡೆದು ಆಶೀರ್ವಚನ ಪಡೆದ ನಂತರ ಶ್ರೀರಂಗಪಟ್ಟಣದ ನಿಮಿಷಾಂಬ ದೇವಿ ಹಾಗೂ ಕಾರ್ತಿಕ್ ಗೌಡ ಹುಟ್ಟೂರು ಕೊಡಗಳ್ಳಿ ರಾಮಗಿರಿ ಅಮ್ಮನ ದರ್ಶನ ಪಡೆದಿದೆ ಇಡೀ ಚಿತ್ರತಂಡ

ಇದೇ ವಾರ ರಾಜ್ಯಾದ್ಯಂತ ಚಿತ್ರ ತೆರೆಗೆ ಬರುತ್ತಿರುವ ಹಿನ್ನೆಯಲ್ಲಿ ಪೌಡರ್ ಸಿನಿಮಾಗೆ ಒಳ್ಳೆದಾಗಲಿ ಎಂದು ಬೇಡಿಕೊಂಡ ಚಿತ್ರತಂಡ ಕೇಳಿಕೊಂಡಿದೆ.

ಚಿತ್ರಕ್ಕೆ ಜನಾರ್ದನ್ ಚಿಕ್ಕಣ್ಣ ನಿರ್ದೇಶನ ಮಾಡಿದ್ದು ಕಾರ್ತಿಕ್ ಗೌಡ, ಯೋಗಿ ಜಿ. ರಾಜ್, ವಿಜಯ್ ಸುಬ್ರಹ್ಮಣ್ಯಂ ನಿರ್ಮಾಣದಲ್ಲಿ ಭಾಗಿಯಾಗಿದ್ಧಾರೆ. ಚಿತ್ರದಲ್ಲಿ ದಿಗಂತ್, ಶರ್ಮಿಳಾ ಮಾಂಡ್ರೆ, ಧನ್ಯ ರಾಮ್ಕುಮಾರ್, ಅನಿರುದ್ದ ಆಚಾರ್ಯ, ರಂಗಾಯಣ ರಘು, ಗೋಪಾಲ ಕೃಷ್ಣ ದೇಶಪಾಂಡೆ ಮತ್ತಿತರರು ಚಿತ್ರದಲ್ಲಿ ನಟಿಸಿದ್ದಾರೆ.