ವಿಭಿನ್ನತೆ, ವಿಶೇಷತೆಯ “ಖಾಲಿ ಡಬ್ಬ” ಸೆಪ್ಟಂಬರ್ 19ರಂದು ಬಿಡುಗಡೆ
ಕನ್ನಡದಲ್ಲಿ ಇತ್ತೀಚೆಗೆ ಯುವ ಪ್ರತಿಭೆಗಳು ಹೊಸ ಹೊಸ ಕಥೆ ಮತ್ತು ವಿಷಯಗಳನ್ನು ಮುಂದಿಟ್ಟುಕೊಂಡು ಸಿನಿಮಾವನ್ನು ಜನರ ಮುಂದೆ ತರುತ್ತಿದ್ದಾರೆ.ಅದರಲ್ಲಿ ವಿಭಿನ್ನತೆ ಮತ್ತು ವಿಶೇಷತೆಯಿಂದ ಕೂಡಿರುವ “ಖಾಲಿ ಡಬ್ಬ” ಕೂಡ ಒಂದು ಇದೇ ಸೆಪ್ಟಂಬರ್ 19 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.
ನಿರ್ದೇಶಕ ಪ್ರಕಾಶ್ ಕೆ ಅಂಬ್ಳೆ ಮಾತನಾಡಿ, ಪಾತ್ರದೊಳಗಿನ ಪಾತ್ರಧಾರಿ ಅಂದರೆ ಅದು ಖಾಲಿ ಡಬ್ಬ. ಖಾಲಿ ಡಬ್ಬದಲ್ಲಿ ಒಂದಷ್ಟು ವಿಶೇಷ ಇರುತ್ತದೆ.ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಸಿನಿಮಾ ರಿಲೀಸ್ ವರೆಗೂ ಬರಲು ಕಾರಣ ನಿರ್ಮಾಪಕ ಮಂಜು ಗುರಪ್ಪ. ಸಾಹಿತ್ಯ, ಸಂಗೀತ ವಿ ನಾಗೇಂದ್ರ ಪ್ರಸಾದ್ ಸರ್ ಬರೆದಿದ್ದಾರೆ. ನಾಯಕ ರಾಮ್ ಗುಡಿ ಅದ್ಭುತವಾಗಿ ಅಭಿನಯಿಸಿದ್ದಾರೆ ಎಂದು ಹೇಳಿದರು.
ನಟ ರಾಮ್ ಗುಡಿ ಮಾತನಾಡಿ, ಖಾಲಿ ಡಬ್ಬದಲ್ಲಿ ತುಂಬಾ ವಿಷಯಗಳನ್ನು ಹೇಳಲಾಗಿದೆ. ನಿಮಗೆಲ್ಲಾ ಅಜ್ಜಿ ನೆನಪು ತಂದುಕೊಡುತ್ತದೆ. ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡರೆ ಜೀವನ ಡಬ್ಬ ತುಂಬುತ್ತದೆ ಎಂಬ ಎಳೆ ಇಟ್ಕೊಂಡು ಮಾಡಲಾಗಿದೆ. ಹೊಸಬರ ಸಿನಿಮಾ ರಿಲೀಸ್ ಮಾಡುವುದೇ ದೊಡ್ಡ ಚಾಲೆಂಜ್. ಅದಕ್ಕೆ ನಿಮ್ಮ ಸಪೋರ್ಟ್ ಇರಲಿ ಎಂದರು.
ವಿ. ನಾಗೇಂದ್ರ ಪ್ರಸಾದ್ ಮಾತನಾಡಿ, ಈ ಸಿನಿಮಾದಲ್ಲಿ ನಾಗೇಂದ್ರ ಪ್ರಸಾದ್ ಆಗಿಯೇ ನಟಿಸಿದ್ದೇನೆ. ಕನ್ನಡ, ಸಾಹಿತ್ಯದ ಬಗ್ಗೆ ಮಾತನಾಡುತ್ತೇನೆ. ಸಿನಿಮಾ ನೋಡ್ತಾ ನೋಡ್ತಾ ಟೈಟಲ್ ಮರೆತು ಹೋಗುತ್ತದೆ. ಈ ಚಿತ್ರ ಎಲ್ಲಿಯೂ ಬೇಸರ ತರಿಸಲ್ಲ. ನಿರೂಪಣೆ ಹೊಸದಾಗಿದೆ ಎಂದರು.

ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್ ಹಾಗೂ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಪ್ರಕಾಶ್ ಕೆ ಅಂಬ್ಳೆ ಚೊಚ್ಚಲ ಪ್ರಯತ್ನದ ಖಾಲಿ ಡಬ್ಬ ಸಿನಿಮಾದಲ್ಲಿ ರಾಮ್ ಗುಡಿ ನಾಯಕನಾಗಿ ನಟಿಸಿದ್ದಾರೆ.
ಆದ್ಯಾ ಪ್ರಿಯಾ, ಹರಿತಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಕುರಿ ಪ್ರತಾಪ್, ಮಜಾಭಾರತ ಸೀತಾರಾಮ್, ಸುಧಾ, ಹನುಮಕ್ಕ ಹಾಗೂ ವಿ. ನಾಗೇಂದ್ರ ಪ್ರಸಾದ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಾಗೇಂದ್ರ ಪ್ರಸಾದ್, ವಿಶೇಷ ಪಾತ್ರದ ಜೊತೆಗೆ ಈ ಚಿತ್ರಕ್ಕೆ ಸಾಹಿತ್ಯ ಬರೆದು, ಹಾಡುಗಳಿಗೆ ಸಂಗೀತ ಒದಗಿಸಿದ್ದಾರೆ.
ಮಂಜು ಗುರಪ್ಪ ನಿರ್ಮಾಣ ಮಾಡಿದ್ದು, ಅಪ್ಪಾಜಿ, ಸೌಮ್ಯಾ ರಾಮ್, ಲಕ್ಷ್ಮೀ ಮಹೇಂದ್ರ, ಚಿಕ್ಕೇಗೌಡ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಲಕ್ಕಿ ಕ್ಯಾಮರಾ ಹಿಡಿದಿದ್ದು, ವೆಂಕಟ್ ಯುಡಿವಿ ಸಂಕಲನ ನಿರ್ವಹಿಸಿದ್ದಾರೆ. ಗಿರೀಶ್ ನೃತ್ಯ ಸಂಯೋಜನೆ ಚಿತ್ರಕ್ಕಿದೆ. ಇದೇ ವಾರ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.


