“ಯುಐ”” ಪ್ರೀರೀಲೀಸ್ ಇವೆಂಟ್ನಲ್ಲಿ ಶಿವಣ್ಣ ಸೇರಿದಂತೆ ತಾರೆಯರ ದಂಡು

ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “ಯುಐ” ಚಿತ್ರದ ಪ್ರೀ ರಿಲೀಸ್ ಇವೆಂಟ್ ನೆರವೇರಿತು.

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಡಾಲಿ ಧನಂಜಯ, ಪ್ರಿಯಾಂಕಾ ಉಪೇಂದ್ರ, ನಿರ್ಮಾಪಕರಾದ ಉದಯ್ ಕೆ ಮೆಹ್ತಾ, ರಮೇಶ್ ರೆಡ್ಡಿ, ಕಾರ್ತಿಕ್ ಗೌಡ, ಯೋಗಿ ಜಿ ರಾಜ್, ಜಗದೀಶ್, ನಿರ್ದೇಶಕರಾದ ಪವನ್ ಒಡೆಯರ್, ಡಾ.ಸೂರಿ, ವೀರೇಶ ಚಿತ್ರಮಂದಿರದ ಕುಶಾಲ್ ಮುಂತಾದ ಗಣ್ಯರು ಪ್ರಿ ರಿಲೀಸ್ ಇವೆಂಟ್ ನಲ್ಲಿ ಭಾಗಿಯಾಗಿ “ಯುಐ ಗೆ ಶುಭ ಕೋರಿದರು.
ಹಿರಿಯ ನಟ ಶಿವರಾಜ್ ಕುಮಾರ್ ಮಾತನಾಡಿ “ಶ್” ಚಿತ್ರದ ಪ್ರೀಮಿಯರ್ ಶೋ ಅನ್ನು ಪಲ್ಲವಿ ಚಿತ್ರಮಂದಿರದಲ್ಲಿ ನೋಡಿದ್ದೆ. ಆನಂತರ “ಓಂ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಉಪೇಂದ್ರ ಕಾರ್ಯವೈಖರಿ ನೋಡಿ, ನೀವು ಭಾರತ ಚಿತ್ರರಂಗದ ಮಹಾನ್ ನಿರ್ದೇಶಕರಲ್ಲೊಬ್ಬರಾಗುತ್ತಾರೆ ಎಂದು ಹೇಳಿದ್ದೆ. ಆಗಿನಿಂದಲೂ ನನಗೆ ಉಪೇಂದ್ರ ಅವರ ಕಂಡರೆ ವಿಶೇಷ ಪ್ರೀತಿ. ನಾನು ಕೂಡ ಯುಐ”” ಚಿತ್ರವನ್ನು ನೋಡುವ ಕಾತುರದಲ್ಲಿದ್ದೇನೆ ಎಂದು ತಿಳಿಸಿದರು.

ದುನಿಯಾ ವಿಜಯ್ ಹಾಗೂ ಡಾಲಿ ಧನಂಜಯ್ ಮಾತನಾಡಿ ಉಪೇಂದ್ರ ಅವರ ನಿರ್ದೇಶನಕ್ಕೆ ಅಭಿಮಾನಿಗಳು. ಅವರ ಚಿತ್ರಗಳನ್ನು ನೋಡಿ ಬೆಳೆದವರು ನಾವು. ಒಂಭತ್ತು ವರ್ಷಗಳ ನಂತರ ಉಪೇಂದ್ರ ಅವರು ನಿರ್ದೇಶಿಸಿರುವ ಈ ಚಿತ್ರವನ್ನು ನೋಡಲು ಕಾಯುತ್ತಿರುವುದಾಗಿ ಹೇಳಿದರು.
ನಾಯಕ ಹಾಗೂ ನಿರ್ದೇಶಕ ಉಪೇಂದ್ರ ಮಾತನಾಡಿ ಚಿತ್ರಕ್ಕೆ ಪ್ರೋತ್ಸಾಹ ನೀಡಲು ಬಂದಿರುವ ಶಿವಣ್ಣ, ವಿಜಯ್, ಧನಂಜಯ್ ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದ ಚಿತ್ರ ಆರಂಭವಾಗಲು ಕಾರಣ ಕೆ.ಪಿ.ಶ್ರೀಕಾಂತ್. ಐವತ್ತು ವರ್ಷಗಳ ಇತಿಹಾಸವಿರುವ ಲಹರಿ ಸಂಸ್ಥೆ ಚಿತ್ರ ನಿರ್ಮಾಣ ಮಾಡಿದ್ದು, ಮನೋಹರನ್ ಹಾಗೂ ಶ್ರೀಕಾಂತ್ ನಿರ್ಮಾಪಕರಾಗಿದ್ದಾರೆ. ನವೀನ್, ಲಹರಿ ವೇಲು, ನಾಗೇಂದ್ರ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ ನನ್ನೊಬ್ಬನ ಚಿತ್ರವಲ್ಲ. ತಂಡದ ಚಿತ್ರ. ಚಿತ್ರ ಉತ್ತಮವಾಗಿ ಮೂಡಿಬರಲು ಇವರೆಲ್ಲರ ಸಹಕಾರವೇ ಕಾರಣ. ಈ ಸಮಯದಲ್ಲಿ ಚಿತ್ರತಂಡದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಇದೇ ಡಿಸೆಂಬರ್ 20ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಎಂದರು.
ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಹಾಗೂ ಸಹ ನಿರ್ಮಾಪಕ ನವೀನ್ ಮಾತನಾಡಿ ಇಪ್ಪತ್ತರಂದು ವಿಶ್ವದಾದ್ಯಂತ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ “ಯುಐ”” ಪ್ರೀರೀಲೀಸ್ ಇವೆಂಟ್ನಲ್ಲಿ ಶಿವಣ್ಣ ಸೇರಿದಂತೆ ತಾರೆಯರ ದಂಡು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು, ಆಲ್ ಮೋಸ್ಟ್ ಫುಲ್ ಆಗಿದೆ. ಆರಂಭದಲ್ಲೇ ನಮ್ಮ ಚಿತ್ರಕ್ಕೆ ಸಿಗುತ್ತಿರುವ ಬೆಂಬಲಕ್ಕೆ ಮನ ತುಂಬಿ ಬಂದಿದೆ ಎಂದರು
ಚಿತ್ರದ ನಾಯಕಿ ರೀಷ್ಮಾ ನಾಣಯ್ಯ, ಕಲಾವಿದರಾದ ರವಿಶಂಕರ್, ಕಾಕ್ರೋಜ್ ಸುಧೀ, ನಿಧಿ ಸುಬ್ಬಯ್ಯ, ನೀತು, ಕಾರ್ಯಕಾರಿ ನಿರ್ಮಪಕ ಲಹರಿ ವೇಲು ಹಾಗೂ ವಿತರರಕರಾದ ಕೆ.ವಿ.ಎನ್ ಸಂಸ್ಥೆಯ ಸುಪ್ರೀತ್ ಮುಂತಾದವರು “ಯುಐ ” ಕುರಿತು ಮಾತನಾಡಿದರು.