ಆಕ್ಷನ್,ಥ್ರಿಲ್ಲರ್ ಚಿತ್ರ ‘ಎಫ್.ಐ.ಆರ್. 6 ಟು 6’ ಟ್ರೈಲರ್ ಬಿಡುಗಡೆ: ಕುತೂಹಲ ಹೆಚ್ಚಳ

ಪ್ರತಿಭಾನ್ವಿತ ನಟ ವಿಜಯ ರಾಘವೇಂದ್ರ ಅಭಿನಯದ ಕುತೂಹಲಕಾರಿ ಥ್ರಿಲ್ಲರ್ ಚಿತ್ರ ‘ಎಫ್.ಐ.ಆರ್. 6 ಟು 6’ ಬಿಡುಗಡೆಗೆ ಸಿದ್ದವಾಗಿದೆ. ಈ ಹಿಂದೆ ಪಟ್ಟಾಭಿಷೇಕ ಚಿತ್ರ ನಿರ್ಮಿಸಿದ್ದ ಭಾಗ್ಯರಮೇಶ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಕೆ.ವಿ.ರಮಣರಾಜ್ ಆಕ್ಷ£ ಕಟ್ ಹೇಳಿದ್ದಾರೆ.

ಸತೀಶ್ ಬಾಬು ಹಾಗೂ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿರುವ ಈಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಶಿಲ್ಪಾ ಶ್ರೀನಿವಾಸ್, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ಮತ್ತಿತರು ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು
ನಾಯಕ ವಿಜಯ ರಾಘವೇಂದ್ರ ಮಾತನಾಡಿ, ‘ಎಫ್.ಐ.ಆರ್. 6 ಟು 6’ ಚಿತ್ರ ಭಾಗ್ಯ ರಮೇಶ್, ರಮಣರಾಜ್ಕನಸು. ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾ. ಚಿತ್ರವನ್ನು ನೈಟ್ ಎಫೆಕ್ಟ್ನಲ್ಲೇ ಶೂಟ್ ಮಾಡಿದ್ದೇವೆ. ಸುಮಾರು ರಾತ್ರಿ ಸಿನಿಮಾಗಾಗಿ ಕಷ್ಟಪಟ್ಟಿದ್ದೇವೆ. ನಿರ್ದೇಶಕರು ತುಂಬಾ ಎಫರ್ಟ್ ಹಾಕಿದ್ದಾರೆ. ಕಥೆಯಲ್ಲಿ ಮೇಜರ್ ಆಗಿರುವುದೇ ಆಕ್ಷನ್. ಒಮ್ಮೊಮ್ಮೆ ಬೆಳಗಿನಜಾವ ನಾಲ್ಕರವರೆಗೆ ಶೂಟ್ ಮಾಡಿದ್ದೇವೆ. ಥ್ರಿಲ್ಲರ್ ಮಂಜು ಜೊತೆ ಆಕ್ಷನ್ ಮಾಡುವುದು ತುಂಬಾ ಸುಲಭ ಎಂದು ಮಾಹಿತಿ ಹಂಚಿಕೊಂಡರು
ನಿರ್ದೇಶಕ ರಮಣರಾಜ್ ಮಾತನಾಡಿ ಈ ಹಿಂದೆ ತೆಲುಗಿನ ಜೆಡಿ ಚಕ್ರವರ್ತಿ ಜೊತೆ ಚಿತ್ರ ಮಾಡಿದದೇನೆ. ‘ಎಫ್.ಐ.ಆರ್. 6 ಟು 6’ ಎರಡನೇ ಚಿತ್ರ. ಜೆಡಿ ಅವರ ಸಿನಿಮಾ ಮಾಡುವಾಗ ಹೊಳೆದ ಕಾನ್ಸೆಪ್ಟ್ ಇದು. ಯುವಕನೊಬ್ಬ ಒಂದು ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡು ನಂತರ ಆಸಂದರ್ಭವನ್ನು ಹೇಗೆ ಫೇಸ್ ಮಾಡುತ್ತಾನೆ ಅನ್ನೋದನ್ನು ಸಂಜೆ ಆರರಿಂದ ಬೆಳಗಿನ ಜಾವ ಆರರವರೆಗೆ ನಡೆಯುವ ಕಥೆಯ ಮೂಲಕ ಥ್ರಿಲ್ಲಿಂಗ್ ಆಗಿ ಹೇಳಲು ಪ್ರಯತ್ನಿಸಲಾಗಿದೆ. ನಟ ವಿಜಯ ರಾಘವೇಂದ್ರ ಅವರ ಜತೆ ಕೆಲಸ ಮಾಡಿದ್ದು ಒಳ್ಳೇ ಅನುಭವ. 35 ದಿನ ಪೂರ್ತಿ ರಾತ್ರಿ ವೇಳೆಯಲ್ಲೇ ಶೂಟ್ ಮಾಡಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ ಎಂದು ಹೇಳಿದರು.

ನಿರ್ಮಾಪಕಿ ಭಾಗ್ಯ ರಮೇಶ್ ಮಾತನಾಡಿ ಈ ಹಿಂದೆ ಪಟ್ಟಾಭಿಷೇಕ ಎಂಬ ಚಿತ್ರ ಮಾಡಿದ್ದೆವು. ರಮಣರಾಜ್ ತಂದ ಕಥೆ ತುಂಬಾ ಕುತೂಹಲವವಾಗಿತ್ತು. ಚಿತ್ರ ನಿರ್ಮಾಣಕ್ಕೆ ಮುಂದಾದೆವು. ವಿಜಯ ರಾಘವೇಂದ್ರ ತುಂಬಾ ಚೆನ್ನಾಗಿ ಆಭಿನಯಿಸಿದ್ದಾರೆ ಎಂದು ಹೇಳಿದರು.
ಶಿಲ್ಪಾ ಶ್ರೀನಿವಾಸ್ ಮಾತನಾಡಿ,ಎಸ್.ರಮೇಶ್ ಜತೆ 4 ಸಿನಿಮಾ ಮಾಡಿದ್ದೇನೆ. ಆ ನಾಲ್ಕೂ ಸಿನಿಮಾಗಳು ಲಾಭ ತಂದುಕೊಟ್ಟಿದ್ದವು. ಪರ್ವ ಮಾಡಿದಾಗ ಗರ್ವ ಹೋಗಿತ್ತು. ಆಗ ವಿಜಯ ರಾಘವೇಂದ್ರ ಹಾಕಿಕೊಂಡು ರೋಮಿಯೋ ಜೂಲಿಯೆಟ್ ಮಾಡಿದೆ. ಆ ಸಿನಿಮಾ ಕೈ ಹಿಡಿಯಿತು. ಇವರಿಬ್ಬರೂ ಸೇರಿ ಮಾಡಿರೋ ಚಿತ್ರ ಚೆನ್ನಾಗಿಯೇ ಇರುತ್ತದೆ ಎಂದು ಹೇಳಿದರು.

ಸಿರಿರಾಜ್ ಮಾತನಾಡಿ ಭಯದಲ್ಲೇ ಬದುಕುವ ಹುಡುಗಿಯಾಗಿ ನಾನೀ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪಾತ್ರ ತುಂಬಾ ಚೆನ್ನಾಗಿದೆ ಎಂದರು.
ಉಳಿದಿಬ್ಬರು ನಾಯಕಿಯರಾದ ಸ್ವಾತಿ ಹಾಗೂ ಯಶ ಶೆಟ್ಟಿ ಮಾತನಾಡಿ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

ಸಂಕಲನಕಾರ ನಾಗೇಂದ್ರ ಅರಸ್, ನಟ ವಿದ್ಯಾಭರಣ, ಸಂಗೀತ ನಿರ್ದೇಶಕ ಎಂ.ಎಸ್.ತ್ಯಾಗರಾಜ್ ಚಿತ್ರದ ವಿಶೇಷತೆಗಳ ಕುರಿತಂತೆ ಮಾಹಿತಿ ಹಂಚಿಕೊಂಡರು