Actor Krishna Ajay Rao's new film muhurat: Yogaraja Bhat-Dinakar launch

ನಟ ಕೃಷ್ಣ ಅಜಯರಾವ್ ಹೊಸ ಚಿತ್ರಕ್ಕೆ ಮುಹೂರ್ತ: ಯೋಗರಾಜ ಭಟ್- ದಿನಕರ್ ಚಾಲನೆ - CineNewsKannada.com

ನಟ ಕೃಷ್ಣ ಅಜಯರಾವ್ ಹೊಸ ಚಿತ್ರಕ್ಕೆ ಮುಹೂರ್ತ: ಯೋಗರಾಜ ಭಟ್- ದಿನಕರ್ ಚಾಲನೆ

” ನನ್ ಮಗಳೇ ಹೀರೋಯಿನ್ ” ಸೇರಿ ಹಲವು ಚಿತ್ರಗಳ ನಿರ್ದೇಶಕ ಎಸ್.ಕೆ. ಬಾಹುಬಲಿ ಇದೀಗ ಕೃಷ್ಣ ಅಜೇಯ್ ರಾವ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದುಬಕಿರಣ್ ಮೊದಲ ಬಾರಿಗೆ ಚಿತ್ರ ನಿರ್ಮಿಸುತ್ತಿರುವ ಇನ್ನೂ ಹೆಸರಿಡದ ಚಿತ್ರದ ಮುಹೂರ್ತ ಸಮಾರಂಭ ಶ್ರೀ ಬಂಡೆ ಮಹಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು

ಚಿತ್ರದ ಪ್ರಥಮ ದೃಶ್ಯಕ್ಕೆ ಯೋಗರಾಜ ಭಟ್ಟರು ಕ್ಲಾಪ್ ಮಾಡಿದರೆ, ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು. ನಿರ್ದೇಶಕ ಎಂ.ಡಿ. ಶ್ರೀಧರ್, ಎಸ್. ನಾರಾಯಣ್, ಶಿವತೇಜಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಲವರ್ ಬಾಯ್, ಆಕ್ಷನ್ ಹೀರೋ, ಭಗ್ನ ಪ್ರೇಮಿಯಾಗಿ ಕಾಣಿಸಿಕೊಂಡಿದ್ದ ಅಜಯ್ ರಾವ್ ಈ ಚಿತ್ರದ ಮೂಲಕ ರಗಡ್ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ನಿರ್ದೇಶಕ ಬಾಬುಬಲಿ ಮಾತನಾಡಿ ಇದೊಂದು ಫ್ಯಾಮಿಲಿ ಥ್ರಿಲ್ಲರ್ ಚಿತ್ರ. ನ್ಯಾಷನಲ್ ಲೆವೆಲ್ ನಲ್ಲಿ ನಡೆಯುವ ಕಥೆ. ಒಂದು ಘಟನೆಯನ್ನು ಇನ್ ಸ್ಪಿರೇಶನ್ ಆಗಿ ತೆಗೆದುಕೊಂಡು ಸ್ಕ್ರಿಪ್ಟ್ ಮಾಡಿದ್ದೇವೆ. ನಾನೀ ಕಥೆ ಮಾಡಿಕೊಂಡಾಗಲೇ ಈ ಕ್ಯಾರೆಕ್ಟರನ್ನು ಅಜಯ್ ರಾವ್ ಕೈಲೇ ಮಾಡಿಸಬೇಕೆಂದುಕೊಂಡೆ. ಅವರು ಫ್ಯಾಮಿಲಿ ಹೀರೋ, ಕಥೆ ಕೇಳಿದ ತಕ್ಷಣ ಅವರೂ ಸಹ ಒಪ್ಪಿದರು. ಅವರ ಪಾತ್ರಕ್ಕೆ 4-5 ಶೇಡ್ಸ್ ಇದೆ ಎಂದು ತಿಳಿಸಿದರು

ಚಿತ್ರದ ಗೆಟಪ್ ನಲ್ಲಿ ಈ ಬೋಳು ತಲೆಯ ಗೆಟಪ್ ಕೂಡ ಒಂದು. ಇದಕ್ಕೆ ಬಾಂಬೆಯಿಂದ ವಿಗ್ ಮೇಕರ್ ಕರೆಸಿದ್ದೆವು‌. ಅವರು ನಾಲ್ಕೈದು ಗಂಟೆ ತೆಗೆದುಕೊಂಡು ಅಜಯ್‌ರಾವ್ ಅವರಿಗೆ ಈ ವಿಗ್ ಕೂರಿಸಿದರು. ಚಿತ್ರದಲ್ಲಿ 2-3 ಸೀನ್ ಮಾತ್ರ ಬರುತ್ತದೆ. ಬೆಂಗಳೂರು, ಮೈಸೂರು, ಪಾಂಡಿಚೇರಿ ಸುತ್ತಮುತ್ತ 60 ರಿಂದ 70 ದಿನ ಶೂಟಿಂಗ್ ನಡೆಸುವ ಪ್ಲಾನಿದೆ. ಉಪಾಧ್ಯಕ್ಷ ಖ್ಯಾತಿಯ ಮಲೈಕಾ ಟಿ.ವಸುಪಾಲ್ ಚಿತ್ರದ ನಾಯಕಿ ಪಾತ್ರ ಮಾಡುತ್ತಿದ್ದಾರೆ ಎಂದರು.

ನಾಯಕ ಅಜೇಯ್ ರಾವ್ ಮಾತನಾಡಿ ಯುದ್ದಕಾಂಡ ಟೈಮಲ್ಲಿ ಬಾಹುಬಲಿ ಬಂದು ಈ ಕಥೆ ಹೇಳಿದರು. ಕೇಳಿದಕೂಡಲೇ ಇಷ್ಟವಾಯ್ತು. ಯೋಗಾನಂದ್ ಅದ್ಭುತವಾದ ಡೈಲಾಗ್ ಬರೆದಿದ್ದಾರೆ.ಫಿಟ್ ನೆಸ್ ಬಗ್ಗೆ ಏನೋ ಒಂದು ಸಾಧನೆ ಮಾಡಬೇಕೆಂದು ಹೊರಟಾಗ ಆತ ಏನೆಲ್ಲಾ ಎದುರಿಸಬೇಕಾಗುತ್ತದೆ ಎಂಬುದನ್ನು ಈ ಸಿನಿಮಾ ಮೂಲಕ ಬಾಹುಬಲಿ ಹೇಳಹೊರಟಿದ್ದಾರೆ.ಪಾತ್ರಕ್ಕೆ ಫಿಸಿಕಲ್ ಟ್ರಾನ್ಸ್ ಫಾರ್ಮೇಶನ್ ತುಂಬಾ ಇರುತ್ತದೆ, ನಿರ್ಮಾಪಕರಿಗೆ ಸಿನಿಮಾ ಬಗ್ಗೆ ತುಂಬಾ ಕಾನ್ಫಿಡೆನ್ಸ್ ಇದೆ ಎಂದು ಮಾಹಿತಿ ಹಂಚಿಕೊಂಡರು

ನಿರ್ಮಾಪಕ ಕಿರಣ್ ಮಾತನಾಡಿ ಬಾಹುಬಲಿ ಬಹಳ ದಿನಗಳಿಂದ ಪರಿಚಯ. ತುಂಬಾ ಕಥೆ ಹೇಳಿದ್ದರು. ಅದರಲ್ಲಿ ಈ ಕಥೆ ಇಷ್ಟವಾಯಿತು ಎಂದು ಹೇಳಿದರು.

ಛಾಯಾಗ್ರಾಹಕ ಸುಜ್ಞಾನ್ ಮಾತನಾಡಿ ನಿರ್ದೇಶಕರು ತುಂಬಾ ಚೆನ್ನಾಗಿ ಸ್ಕ್ರಿಪ್ಟ್ ಮಾಡಿಕೊಂಡಿದ್ದಾರೆ. ಅಜಯರಾವ್ ಅವರಿಗೆ ಬೇರೆ ಬೇರೆ ಗೆಟಪ್ ಇರೋದ್ರಿಂದ ನಾವು ತುಂಬಾಕೆಲಸ ಮಾಡಬೇಕಿದೆ. ತುಂಬಾ ಚಾಲೆಂಜ್ ಇರುತ್ತೆ ಎಂದರು. ಉಳಿದಂತೆ ನಟ ಉಗ್ರಂ ಮಂಜು, ಸಂಭಾಷಣೆಗಾರ ಯೋಗಾನಂದ್ ಮದ್ದಾನ್ ಚಿತ್ರದ ಕುರಿತಂತೆ ಮಾತನಾಡಿದರು.

ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಅಲ್ಲದೆ ಈ ಚಿತ್ರದ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಿದ್ದು ಯೋಗರಾಜ ಭಟ್, ಕವಿರಾಜ್, ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಕೆ.ಎಂ.ಪ್ರಕಾಶ್ ಸಂಕಲನ, ಡಿಫರೆಂಟ್ ಡ್ಯಾನಿ, ರವಿವರ್ಮ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin