After the film "Lanke", director Ramaprasad Dasappa's new film is "Detox".

“ಲಂಕೆ” ಚಿತ್ರದ ಬಳಿಕ ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಹೊಸ ಚಿತ್ರ “ಡೀಟಾಕ್ಸ್” - CineNewsKannada.com

“ಲಂಕೆ” ಚಿತ್ರದ ಬಳಿಕ ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಹೊಸ ಚಿತ್ರ “ಡೀಟಾಕ್ಸ್”

“ಲಂಕೆ” ಚಿತ್ರವನ್ನು ನಿರ್ದೇಶಿಸಿದ್ದ, “ಬಣ್ಣಬಣ್ಣದ ಲೋಕ” ಚಿತ್ರದಲ್ಲಿ ನಟನೆಯನ್ನೂ ಮಾಡಿದ್ದ ರಾಮಪ್ರಸಾದ್ ದಾಸಪ್ಪ ನಿರ್ದೇಶನದ ಎರಡನೇ ಚಿತ್ರ “ಡೀಟಾಕ್ಸ್”. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಚಿತ್ರದ ಪ್ರಮುಖಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕುಮಾರ್ ಅಭಿನಯಿಸುತ್ತಿದ್ದಾರೆ.

ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಮಾತನಾಡಿ ಚಿತ್ರದ ಚಿತ್ರೀಕರಣ ಕೂಡ ಈಗ ಮುಕ್ತಾಯ ಹಂತ ತಲುಪಿದೆ. ಸೆಪ್ಟೆಂಬರ್ ಕೊನೆಯಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ “ಡೀಟಾಕ್ಸ್” ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಏಳರಿಂದ ಎಪ್ಪತ್ತರ ವಯಸ್ಸಿನ ಹೆಣ್ಣುಮಕ್ಕಳ ಮನಸ್ಸಿನಲ್ಲಿ ಯಾವ ರೀತಿ ಹೋರಾಟ ಇರುತ್ತದೆ. ಹೊಡೆದಾಟ ಇರುತ್ತದೆ ಇಂತಹ ವಿಷಯಗಳನ್ನು ಕ್ರೋಢೀಕರಿಸಿ ಈ ಕಥೆ ಬರೆದಿದ್ದೇನೆ. ಸಮಾಜದಲ್ಲಿರುವ ತೊಡಕುಗಳನ್ನು ಸಿನಿಮಾ ಮಾಧ್ಯಮದ ಮೂಲಕ “ಡೀಟಾಕ್ಸ್” ಮಾಡುವ ಪ್ರಯತ್ನ ಮಾಡಿದ್ದೇನೆ ಎಂದರು

ಇದೊಂದು ಸಮಾಜಕ್ಕೆ ಹತ್ತಿರವಾಗುವ ಕಥಾಹಂದರ ಹೊಂದಿರುವ ಚಿತ್ರ. ಕನ್ನಡ ಭಾಷೆಯಲ್ಲಿ ಮಾತ್ರ ಆರಂಭವಾದ ಚಿತ್ರ ಇಂದು ಐದು ಭಾಷೆಗಳಲ್ಲಿ ಬರುತ್ತಿದೆ. ಇದೊಂದು ಯುನಿವರ್ಸಲ್ ಕಂಟೆಂಟ್ ಆಗಿರುವುದರಿಂದ ಈ ಪ್ರಯತ್ನ ಮಾಡಿದ್ದೇವೆ. ಕನ್ನಡ ಸೇರಿದಂತೆ ಹಲವು ಭಾಷೆಗಳ ಅನೇಕ ಕಲಾವಿದರು ನಟಿಸಿರುವ ಚಿತ್ರವಿದು. ಇದೊಂದು ತಂತ್ರಜ್ಞರ ಸಿನಿಮಾ ಕೂಡ ಹೌದು. ಎಂದಿನಂತೆ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದು ಕೇಳಿಕೊಂಡರು

ನಟ ಕಿಶೋರ್ ಕುಮಾರ್ ಮಾತನಾಡಿ ರಾಮಪ್ರಸಾದ್ ಕಥೆ ಹೇಳಿದಾಗ ಇನ್ಸ್‍ಪೆಕ್ಟರ್ ಪಾತ್ರ ಆದರೆ ಬೇಡ ಅಂತ ಹೇಳಿದೆ. ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ರಾಮ್ ಪ್ರಸಾದ್ ಒಂದೊಳ್ಳೆ ಕಥೆ ಮಾಡಿಕೊಂಡಿದ್ದಾರೆ. ಅದು ಜನರಿಗೂ ಮೆಚ್ಚುಗೆಯಾಗುವ ಭರವಸೆ ಇದೆ ಎಂದರು

ನಟ ಸುಚೇಂದ್ರ ಪ್ರಸಾದ್ ಮಾತನಾಡಿ ಎಲ್ಲರೂ ವಶೀಕರಣದ ಸಿನಿಮಾ ಮಾಡುತ್ತಿರುವ ಸಮಯದಲ್ಲಿ ನಿರ್ವಿಶಿಕರಣ ಮಾಡುವ ಸಿನಿಮಾ ಮಾಡಲು ರಾಮಪ್ರಸಾದ್ ಹೊರಟಿದ್ದಾರೆ ಹಿಂದಿನ ಅವರ ಚಿತ್ರದಲ್ಲೂ ನಟಿಸಿದ್ದೆ. ಈ ಚಿತ್ರದಲ್ಲೂ ನಟಿಸಿದ್ದೇನೆ ಎಂದು ಹೇಳಿದರು.

ನಟ ಅದ್ಭುತ್ ಮಾತನಾಡಿ ಈ ಹಿಂದೆ ವರುಣ್ ಎಂಬ ಹೆಸರಿನಲ್ಲಿ ಅಭಿನಯಿಸಿದ್ದೆ.ಅದ್ಭುತ್ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದೇನೆ. ಎಂದು ತಿಳಿಸಿದರು.

ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಕಿರಿಶಾ ತಾರಿಕಾ ದೇವಿ, ತುಮುಲ್ ಬಾಲ್ಯನ್, ವಾಣಿಶ್ರೀ ಕೂಡ ತಮ್ಮ ಪಾತ್ರದ ಕುರಿತು ಮಾತನಾಡಿದರು.

ಈ ಚಿತ್ರದ ಮತ್ತೊಂದು ವಿಶೇಷವೆಂದರೆ ನಾಗೇಂದ್ರ ಅರಸ್, ಗುರುಪ್ರಸಾದ್, ಜಗದೀಶ್ ಕೊಪ್ಪ, ಮಂಜು ದೈವಜ್ಞ ಸೇರಿದಂತೆ ಆರು ಜನ ನಿರ್ದೇಶಕರು ಅಭಿನಯಿಸಿದ್ದಾರೆ. ಅಭಿನಯಿಸಿರುವ ಎಲ್ಲಾ ನಿರ್ದೇಶಕರು, ವೆಂಕಟ್ ರಾಜು ಮುಂತಾದ ಕಲಾವಿದರು ಹಾಗೂ ಸಂಗೀತ ನಿರ್ದೇಶಕ ಎಲ್ವಿನ್ ಜೋಶ್ವ ಸೇರಿದಂತೆ ಅನೇಕ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದರು.

ನಿರ್ಮಾಪಕಿ ಸುರೇಖ ರಾಮಪ್ರಸಾದ್, ಛಾಯಾಗ್ರಾಹಕ ಹಾಲೇಶ್ ಇದ್ದರು

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin