“ಅಥಣಿ” ಚಿತ್ರದ “ಬಾರೆ ಬಾರೆ” ಹಾಡು ಬಿಡುಗಡೆ
ರೈತಪರ ಕಾಳಜಿ ಹೊಂದಿರುವ ಕ್ರೈಂ..ಲವ್ ..ಸಸ್ಪೆನ್ಸ್.. ಮತ್ತು ಕಾಮಿಡಿ ಕಥಾಹಂದರ ಹೊಂದಿರುವ “ಅಥಣಿ” ಚಿತ್ರದ “ಬಾರೆ ಬಾರೆ” ಎಂಬ ಹಾಡು ತುಮಕೂರಿನ ದಿಬ್ಬೂರಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ.

ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿದ್ದಾರೆ
ಕೆ.ಪಿ.ಸಿ.ಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಹಾಗೂ ನಟ, ಸಂಕಲನಕಾರ ನಾಗೇಂದ್ರ ಅರಸ್ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ರಾಜು ಚಿತ್ರಪುರ ಬರೆದಿರುವ ಹಾಡನ್ನು ಸ್ವಾತಿ ಶಂಕರ್ ಹಾಗೂ ಹರ್ಸಿವ್ ಭಘೀರ ಹಾಡಿದ್ದಾರೆ. ಹರ್ಷ ಕುಗೋಡು ಸಂಗೀತ ನೀಡಿದ್ದಾರೆ. ಅಭಯ ಖುಷಿ ಮ್ಯೂಸಿಕ್ ಚಾನಲ್ ನಲ್ಲೇ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.

ನಿರ್ದೇಶಕರಾಗಿ ಈಗಾಗಲೇ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಸಮರ್ಥ ಈ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಮಧು ಈ ಚಿತ್ರದ ನಾಯಕಿ. ನಾಗೇಂದ್ರ ಅರಸ್, ಶೋಭರಾಜ್, ಭವ್ಯ ಯತಿರಾಜ್, ಬಲರಾಜವಾಡಿ , ರಾಕೇಶ್ ಪೂಜಾರಿ, ಮೂರ್ತಿ, ವಿಷ್ಣುಪ್ರಿಯ, ಶ್ರೀನಿಧಿ, ಇಂದ್ರ ಕುಮಾರ್, ಸಿ ಜಿ ದಿಬ್ಬೂರು ಮುಂತಾದವರು ತಾರಾಗಣದಲ್ಲಿದ್ದಾರೆ.
ಚಿತ್ರದಲ್ಲಿ ಹರ್ಷ ಕೂಗೋಡು ಸಂಗೀತ ನೀಡಿರುವ ಐದು ಹಾಡುಗಳಿದೆ. ಆ ಪೈಕಿ ಮೊದಲ ಹಾಡಾಗಿ “ಬಾರೆ ಬಾರೆ” ಐಟಂ ಸಾಂಗ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಹಾಡುಗಳು ಅನಾವರಣವಾಗಲಿದೆ. ಸಂದೀಪ್ ಹೊನ್ನಾಳಿ ಛಾಯಾಗ್ರಹಣ ಹಾಗೂ ಸುನಯ್ ಜೈನ್ ಸಂಕಲನವಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ.

ಚಿತ್ರವನ್ನು ತುಮಕೂರು, ಬೆಂಗಳೂರು, ರಾಮನಗರ ಹೊನ್ನಾವರ, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡ ಇದೆ. ಊರಿನ ಹೆಸರೆ ಚಿತ್ರದ ಶೀರ್ಷಿಕೆಯಾಗಿರುವ “ಅಥಣಿ” ಚಿತ್ರಕ್ಕೆ ಧರಣಿ ಮಂಡಲ ಮಧ್ಯದೊಳಗೆ ಎಂಬ ಅಡಿಬರಹವಿದೆ.

