ನೈಜ ಘಟನೆಯ ಆಧಾರಿತ “ ಮೈ ಹಿರೋ” ಆಗಸ್ಟ್ 30ಕ್ಕೆ ತೆರೆಗೆ

ಹಿಂದುಳಿದವರ ಮೇಲೆ ನಡೆಯುವ ಶೋಷಣೆ ಕುರಿತ ಕಥಾ ಹಂದರ ಹೊಂದಿರುವ “ ಮೈ ಹೀರೋ” ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಉತ್ತರ ಕರ್ನಾಟಕದಲ್ಲಿ ನಡೆದ ಘಟನೆ ಆಧರಿಸಿ ಚಿತ್ರ ನಿರ್ದೇಶನ ಮಾಡಿದ್ದಾರೆ ಅವಿನಾಶ್ ವಿಜಯ್ ಕುಮಾರ್. ಜೊತೆಗೆ ನಿರ್ಮಾಣವೂ ಅವರದೆ. ಇದೇ ತಿಂಗಳ 30 ರಂದು ಚಿತ್ರ ತೆರೆಗೆ ಬರಲಿದೆ.

ಹಾಲಿವುಡ್ ಕಲಾವಿದರಾದ ಜಿಲಾಲಿ ರಜ್ ಕಲ್ಲಹ್, ಎರಿಕ್ ರಾಬರ್ಟ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಮೈ ಹೀರೋ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಕಾಶ್ ಬೆಳವಾಡಿ ಅವರು ಜಿಲ್ಲಾಧಿಕಾರಿಯಾಗಿ, ಹಿರಿಯನಟ ದತ್ತಣ್ಣ ಅವರು ಪುರೋಹಿತರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಟಿ ಅಂಕಿತ ಅಮರ್ ಮಧ್ಯಪ್ರದೇಶದ ಯುವತಿಯಾಗಿ ನಟಿಸಿದ್ದಾರೆ.

ಚಿತ್ರ ಬಿಡುಗಡೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ ಟ್ರೈಲರ್ ಬಿಡುಗಡೆ ಇತ್ತು. ಈ ವೇಳೆ ಮಾತಿಗಿಳಿದ ನಿರ್ದೇಶಕ ಅವಿನಾಶ್ ವಿಜಯ್ ಕುಮಾರ್, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳಲ್ಲಿ ಸಂಭಾಷಣೆ ಇರುತ್ತದೆ. ಹಳ್ಳಿಗಳಲ್ಲಿ ಈಗಲೂ ಜಾತಿ ಪದ್ದತಿ ಇದೆ, ಬೇರೆ ಬೇರೆ ದೇಶಗಳಲ್ಲೂ ಸಹ ಇದೆ. ಇದನ್ನೇ ಪ್ರಮುಖವಾಗಿಟ್ಟಿಕೊಂಡು ಸಿನಿಮಾ ಮಾಡಿದ್ದೇನೆ. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ನಿರ್ಮಾಣವಾಗಿದೆ ಇದೊಂದು ಕಂಟೆಂಟ್ ಓರಿಯಂಟೆಡ್ ಚಿತ್ರ ಎಂದರು.

ನಾಯಕಿ ಅಂಕಿತ ಅಮರ್ ಮಾತನಾಡಿ ಚಿತ್ರದಲ್ಲಿ ಮಧ್ಯಪ್ರದೇಶದ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. “ಮೈ ಹೀರೋ” ಚಿತ್ರದಲ್ಲಿ ಎನ್ ಜಿ ಓ ಪಾತ್ರ ನನ್ನದು. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲಿ ವಾರಣಾಸಿಯಲ್ಲಿರುವಂತೆ ಅನೇಕ ಘಾಟ್ಗಳಿದೆ. ಅಹಿಲ್ಯ ಬಾಯಿ ಎಂಬ ಮಹಾರಾಣಿ ಈ ಘಾಟ್ಗಳನ್ನು ನಿರ್ಮಿಸಿದ್ದರು. ಅಲ್ಲಿ ಅವರ ಪ್ರತಿಮೆ ಕೂಡ ಇದೆ. ಈ ಚಿತ್ರದಲ್ಲಿ ನಟಿಸುವುದಕ್ಕೆ ಮುಂಚೆ ನಾನು ಅಲ್ಲಿನ ವಿಷಯಗಳನ್ನು ತಿಳಿದುಕೊಂಡಿರುವದಾಗಿ ಮಾಹಿತಿ ನೀಡಿದರು
ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಗಗನ್ ಭಡೇರಿಯಾ ಮಾತನಾಡಿದರು.