Director Nari Srinivas who became the hero with the movie "Mandela".

“ಮಂಡೇಲಾ” ಚಿತ್ರದ ಮೂಲಕ ನಾಯಕನಾದ ನಿರ್ದೇಶಕ ನಾರಿ ಶ್ರೀನಿವಾಸ್ - CineNewsKannada.com

“ಮಂಡೇಲಾ” ಚಿತ್ರದ ಮೂಲಕ ನಾಯಕನಾದ ನಿರ್ದೇಶಕ ನಾರಿ ಶ್ರೀನಿವಾಸ್

ಯಶಸ್ವೀ ಚಿತ್ರಗಳಾದ ಓ ಮೈ ಲವ್, 18 ಟು 25 ಬಳ್ಳಾರಿ ದರ್ಬಾರ್ ಅಲ್ಲದೆ ತೆಲುಗಿನಲ್ಲೂ ಪ್ರತಿಭಾವಂತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು)

ನಿರ್ದೇಶಕರು ಕಥೆ ತುಂಬಾ ಅದ್ಭುತವಾಗಿ ಮಾಡಿಕೊಂಡಿದ್ದಾರೆ ಎಲ್ಲಾ ಪಾತ್ರಗಳ ಜೊತೆ ನಾಯಕನ ಪಾತ್ರ ತುಂಬಾ ಚೆನ್ನಾಗಿದೆ ನಟನಾಗಿ ಈ ಒಂದು ಪಾತ್ರ ಮಾಡಿದರೆ ಸಾಕು ಅನ್ನುವ ಹಾಗೆ ಈ ನಾಯಕನ ಪಾತ್ರ ಇದೆ, ಒಬ್ಬ ನಟನಾಗಿ ನಿರೂಪಿಸಲು ಏನೆಲ್ಲಾ ಭಾವನೆಗಳು ಬೇಕೋ ಅದೆಲ್ಲವೂ ಈ ಚಿತ್ರದಲ್ಲಿದೆ ಹಾಗಾಗಿ ನಟಿಸಲು ಒಪ್ಪಿಕೊಂಡೆ.

ಶ್ರೀಧರ್ ಪೂರ್ವಜಿತ್ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು. ಆ ಚಿತ್ರದ ಹೆಸರು ಮಂಡೇಲಾ.ಇದೊಂದು ವಿಭಿನ್ನ ಪ್ರಯೋಗದ ಚಿತ್ರ ಎಂದೂ ಹೇಳಬಹುದು. ಸಿನಿಮಾ ಎಂದಮೇಲೆ ಹಲವಾರು ಪಾತ್ರಗಳಿರಬೇಕಲ್ಲವೆ, ಈ ಚಿತ್ರದಲ್ಲೂ ಒಂದಷ್ಟು ಪಾತ್ರಗಳಿವೆ. ಆದರೆ ಪ್ರಮುಖವಾಗಿ ಮೂರು ಪಾತ್ರಗಳ ಮೂಲಕ ನಿರ್ದೇಶಕರು ಕಥೆಯನ್ನು ಹೇಳಹೊರಟಿದ್ದಾರೆ.

1980- 90ರ ದಶಕದಲ್ಲಿನ ಸೂಕ್ಷ್ಮ ಹಾಗೂ ಸುಂದರವಾದ ಭಾವನೆಗಳ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿರುತ್ತದೆ. ಶ್ರೀಲಕ್ಷ್ಮಿ ನರಸಿಂಹ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಈ ಚಿತ್ರದಲ್ಲಿ ನಾಯಕನಾಗಿ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ನಟಿಸುತ್ತಿದ್ದಾರೆ. ಅಲ್ಲದೆ ಚಿತ್ರದಲ್ಲಿ ಇಬ್ಬರು ನಾಯಕಿಯರು ನಟಿಸುತ್ತಿದ್ದು, ಅವರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಕನ್ನಡದಲ್ಲಿ ಈಗಾಗಲೇ ಬಾ ನಲ್ಲೆ ಮಧುಚಂದ್ರಕೆ, ಬೆಳದಿಂಗಳ ಬಾಲೆಯಂಥ ಚಿತ್ರಗಳು ಬಂದು ಹೋಗಿವೆ. ಆಗಿನಿಂದಲೂ ಹೊಸಥರದ ಕಂಟೆಂಟ್ ಇರುವ ಕಥೆಗಳನ್ನು ನಮ್ಮ ಜನ ಪೆÇ್ರೀತ್ಸಾಹಿಸುತ್ತಲೇ ಬಂದಿದ್ದಾರೆ. ಅದೇರೀತಿ ನಮ್ಮ ಹೊಸ ಈ ಪ್ರಯತ್ನವನ್ನೂ ಪ್ರೇಕ್ಷಕರು ಕೈ ಹಿಡಿಯುತ್ತಾರೆ ಎಂಬ ಭರವಸೆಯನ್ನು ಚಿತ್ರದ ನಾಯಕ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ವ್ಯಕ್ತಪಡಿಸುತ್ತಾರೆ.

ಕನ್ನಡ, ತೆಲುಗು, ತಮಿಳು ಸೇರಿ ಮೂರು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಪಕ್ಕಾ ಕಂಟೆಂಟ್ ಬೇಸ್ ಸಿನಿಮಾ ಇದಾಗಲಿದ್ದು, ಇತ್ತೀಚೆಗೆ ಜನ ಥೇಟರಿಗೆ ಬರ್ತಿಲ್ಲ ಅಂತಿದಾರೆ, ಅಂಥವರಿಗೆ ಒಂದು ನಿಮಿಷವೂ ಬೋರ್ ಹೊಡೆಸದಂಥ ಸಿನಿಮಾ ಇದಾಗಲಿದೆ ಎಂದೂ ಅವರು ಹೇಳುತ್ತಾರೆ.ಬರುವ ಜುಲೈ 2 ಅಥವಾ 3ನೇ ವಾರ ಈ ಚಿತ್ರವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಹೇಳಿದರು.

ನಮಗೆ ಫೇಮಸ್ ಆಗಿರೋ ಮ್ಯೂಸಿಕ್ ಡೈರೆಕ್ಟರ್ ಬೇಡ ಫೇಮಸ್ ಆಗೋವಂಥ ಮ್ಯೂಸಿಕ್ ಕಂಪೆÇೀಜ್ ಮಾಡುವ ಸಂಗೀತ ನಿರ್ದೇಶಕರನ್ನ ಹುಡುಕುತ್ತಿದ್ದೇವೆ.ಸಂಬಂಧಗಳ ವ್ಯಾಲ್ಯೂ ಚೆನ್ನಾಗಿರಬೇಕು, ಇಲ್ಲಿ ಯಾರೂ ಶತೃಗಳಿಲ್ಲ ಅಂತ ಹೇಳಹೊರಟಿದ್ದಾರೆ.ನಾವು ತಪ್ಪು ಮಾಡಿದಾಗ ಪ್ರಪಂಚ ನಮ್ಮನ್ನು ಹೇಗೆ ನೋಡುತ್ತೆ ಅಂತ ಸಮಯದಲ್ಲಿ ಸಮಾಜ ನಮ್ಮ ಜೊತೆ ಹೇಗೆ ನೆಡೆದುಕೊಳ್ಳುತ್ತೆ ಇನ್ನೂ ಹಲವಾರು ಸೂಕ್ಷ್ಮ ವಿಷಯಗಳನ್ನು ಈ ಚಿತ್ರದಲ್ಲಿ ಹೇಳಲಿದ್ದೇವೆಂದು ನಿರ್ದೇಶಕ ಶ್ರೀಧರ್ ಪೂರ್ವಜಿತ್ ಅವರು ತಿಳಿಸಿದರು.

ಇತ್ತೀಚೆಗೆ ಕನ್ನಡದ ಕಂಟೆಂಟ್‍ಗಳಿಗೆ ಬೇಡಿಕೆ ಹೆಚ್ಚಿದೆ. ಹಾಗೆಯೇ ಕನ್ನಡದ ತಂತ್ರಜ್ಞರು, ನಿರ್ದೇಶಕರು ಪರಭಾಷೆಯಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಅಂಥವರಲ್ಲಿ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಕೂಡ ಒಬ್ಬರೆನ್ನಬಹುದು.

ಮಂಡೇಲಾದ ಸ್ಕ್ರಿಪ್ಟ್ ಅಂತಿಮ ಹಂತದಲ್ಲಿದೆ. ಹಂತ ಹಂತವಾಗಿ ಎಲ್ಲವನ್ನೂ ತಿಳಿಸುತ್ತೇವೆ’ ಎನ್ನುತ್ತಾರೆ ನಿರ್ದೇಶಕ ಶ್ರೀಧರ್ ಪೂರ್ವಜಿತ್ .

ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು). ಇದನ್ನು ಹೊರತುಪಡಿಸಿ ಇನ್ನೂ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಲು ಒಪ್ಪಿಕೊಂಡಿದ್ದೇನೆ ಹಾಗೆ ಎರೆಡು ಚಿತ್ರಗಳನ್ನು ನಿರ್ದೇಶನ ಮಾಡುತ್ತಿದ್ದೇನೆ ಮುಂದಿನ ದಿನಗಳಲ್ಲಿ ನಿಮಗೆ ವಿವರಣೆ ನೀಡುತ್ತೇನೆ ಎಂದು ಸ್ಮೈಲ್ ಮಾಡುತ್ತಾರೆ ನಟ ನಿರ್ದೇಶಕ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು)

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin