Golden Star Ganesh in a different avatar in the guardian heritage film “Pinaka”

ಕಾವಲುಗಾರ ಪರಂಪರೆಯ ಚಿತ್ರ “ ಪಿನಾಕ”: ವಿಭಿನ್ನ ಅವತಾರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ - CineNewsKannada.com

ಕಾವಲುಗಾರ ಪರಂಪರೆಯ ಚಿತ್ರ “ ಪಿನಾಕ”: ವಿಭಿನ್ನ ಅವತಾರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ಚಿತ್ರ “ಪಿನಾಕ” ಚಿತ್ರದ ಚಿತ್ರೀಕರಣ ಭರದಿಂದ ಮುಂದುವರಿದಿದೆ. ಪಿನಾಕ' ಎಂದರೆ ಒಬ್ಬ ರಕ್ಷಕ.ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಮುಂದಿನ ವರ್ಷ ಈ ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ.

ನೃತ್ಯ ನಿರ್ದೇಶಕರಾಗಿ ಹೆಸರು ಮಾಡಿರುವ ಧನಂಜಯ ಇದೇ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿದ್ದು ಮೊದಲ ಪ್ರಯತ್ನದಲ್ಲಿ ನಟ ಗಣೇಶ್ ಅವರನ್ನು ನಿರ್ದೇಶಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ವಿಶ್ವಪ್ರಸಾದ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ

ಪಿನಾಕ ಚಿತ್ರಕ್ಕಾಗಿ ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್ ಹಾಕಲಾಗಿದೆ. ಸೆಟ್ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್. ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ಅರ್ಧನಾರೀಶ್ವರನ ಪ್ರತಿಮೆ ನಿಲ್ಲಿಸಲಾಗಿದೆ. ಚಿತ್ರೀಕರಣ ಸ್ಥಳಕ್ಕೆ ಪತ್ರಕರ್ತರನ್ನು ಕರೆದುಕೊಂಡು ಹೋಗಿದ್ದ ತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿತು

ನಿರ್ದೇಶಕ ಧನಂಜಯ ಮಾತನಾಡಿ ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಇನ್ನೂ 15 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಈ ಸೆಟ್ ಚಿತ್ರದಲ್ಲಿ ಮಹತ್ವದ ಪಾತ್ರ ವಹಿಸುವುದರಿಂದ, ಚಿತ್ರತಂಡ ಸೆಟ್ ಹೇಗಿದೆ ಎಂದು ಗೌಪ್ಯವಾಗಿಟ್ಟಿದೆ. ಚಿತ್ರಂಡದವರು ಮತ್ತು ಚಿತ್ರಕ್ಕೆ ಸಂಬಂಧಪಟ್ಟವರನ್ನು ಹೊರತುಪಡಿಸಿದರೆ, ಇಲ್ಲಿ ಹೊರಗಿನವರಿಗೆ ಸುಲಭವಾಗಿ ಪ್ರವೇಶವಿಲ್ಲ ಎಂದರು

`ಮಳೆ, ಬಿಸಿಲು, ಗಾಳಿಯ ನಡುವೆ ಕಳೆದ ಒಂದು ತಿಂಗಳಿನಿಂದ ಚಿತ್ರೀಕರಣ ಮಾಡುತ್ತಿದ್ದೇವೆ. ಅದಕ್ಕೂ ಮುನ್ನ ಎರಡು ತಿಂಗಳ ಕಾಲ ಸೆಟ್ ನಿರ್ಮಾಣದ ಕೆಲಸ ನಡೆದಿದೆ. ಸಂತೋಷ್ ಪಾಂಚಲ ಮತ್ತು ತಂಡz ಸೆಟ್ ನಿರ್ಮಿಸಿದ್ದಾರೆ. ಯುದ್ಧ ನಡೆದ ನಂತರದ ದೃಶ್ಯಗಳನ್ನು ಚಿತ್ರೀಕರಣ ಮಾಡಿದ್ದೇವೆ. ಕಳೆದ ಒಂದು ತಿಂಗಳಿನಿಂದ ಪ್ರತಿ ದಿನ 800 ಜನ ಕೆಲಸ ಮಾಡುತ್ತಿದ್ದಾರೆ. ಚಿತ್ರೀಕರಣ ಮಾಡಿ, ಹೈದರಾಬಾದ್‍ಗೆ ಫುಟೇಜ್ ಕಳಿಸುತ್ತಿದ್ದೇವೆ. ಗ್ರಾಫಿಕ್ಸ್ ಕೆಲಸ ಸತತವಾಗಿ ನಡೆಯುತ್ತಿದೆ’ ಎಂದು ಹೇಳಿದರು

ಒತ್ತಡದಲ್ಲಿ ಮಾಡುವ ಕೆಲಸವಲ್ಲ. ಒಂದೊಂದು ಸಣ್ಣ ದೃಶ್ಯಕ್ಕೂ ಸಾಕಷ್ಟು ಸಮಯವಾಗುತ್ತಿದೆ. ಗಣೇಶ್ ಜೊತೆಗೆ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಅವರ ಜೊತೆಗೊಂದು ಒಳ್ಳೆಯ ಸಂಬಂಧ ಇದೆ. ಅವರೊಂದಿಗೆ ಕೆಲಸ ಮಾಡುವುದು ಖುಷಿಯ ವಿಚಾರ. ಈ ಚಿತ್ರಕ್ಕೆ ಅವರ ಸಹಕಾರ ದೊಡ್ಡದು. ಇನ್ನು ನಿರ್ಮಾಪಕರು ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿದ್ದಾರೆ, ಇದು ನನ್ನೊಬ್ಬನ ಚಿತ್ರವಲ್ಲ. ತಂಡದ ಚಿತ್ರ ಎಂದು ತಿಳಿಸಿದರು

ನಾಯಕ ಗಣೇಶ್ ಮಾತನಾಡಿ ಬರುವಾಗಲೇ ಏನಾದರೂ ವಿಭಿನ್ನವಾಗಿ ಮಾಡಬೇಕು ಎಂಬ ತೀರ್ಮಾನದೊಂದಿಗೆ ನಿರ್ಮಾಪಕರು ಬಂದಿದ್ದರು `ಈ ತರಹದ ಪಾತ್ರವನ್ನು ನನ್ನಿಂದ ಮಾಡಿಸಬಹುದು ಎಂದು ಮಾಡಿಸುತ್ತಿದ್ದಾರೆ. ಪ್ರತಿ ದೃಶ್ಯದಲ್ಲೂ ನಿರ್ಮಾಪಕರು ತೊಡಗಿಸಿಕೊಂಡಿದ್ದಾರೆ. ಚಿತ್ರೀಕರಣ ಪ್ರಾರಂಭವಾಗಿ ಎರಡು ದಿನಗಳಲ್ಲೇ ನಿರ್ಮಾಪಕಿ ವಿಜಯಮ್ಮ ಕಿರುಚಾಡುತ್ತಿದ್ದರು. ಏನು ಎಂದು ಕೇಳಿದಾಗ, ಬರೀ 600 ಜ್ಯೂನಿಯರ್ ಕಲಾವಿದರು ಮಾತ್ರ ಬಂದಿದ್ದಾರೆ, 800 ಜನ ಬರಬೇಕಿತ್ತು ಎಂದರು. ಕಡಿಮೆಯಾದರೆ ಹಣ ಉಳಿಯುತ್ತದೆ ಎಂದು ಖುಷಿಪಡಬೇಕು. ಆದರೆ, ಅವರು ಹಾಗಲ್ಲ. ಈ ಸೆಟ್ ಈ ಮಟ್ಟಕ್ಕೆ ಬರಬೇಕೆಂದರೆ ಅವರು ಮತ್ತು ನಿರ್ದೇಶಕ ಧನಂಜಯ್ ಕಾರಣ ಎಂದರು

#GoldenstarGanesh

ನಾಲ್ಕೈದು ತಿಂಗಳು ನಿಂತು ಸೆಟ್ ಹಾಕಿಸಿದ್ದಾರೆ. ಧನಂಜಯ ಮೊದಲ ಚಿತ್ರದಲ್ಲೇ ಇಂಥದ್ದೊಂದು ದೊಡ್ಡ ಪ್ರಯತ್ನ ಮಾಡುತ್ತಿದ್ದಾರೆ. ಹೇಗೆ ಮಾಡಬಹುದು ಎಂಬ ಪ್ರಶ್ನೆ ನನಗೂ ಇತ್ತು. ಆದರೆ, ಇಲ್ಲಿ ನೂರಕ್ಕೆ ನೂರು ತೆಗೆದಿದ್ದಾನೆ. ಪ್ರತಿ ದಿನ ಸೆಟ್‍ನಲ್ಲಿ ನಾಲ್ಕು ಕ್ಯಾಮೆರಾಳಿವೆ. 32 ದಿನಗಳಲ್ಲಿ 64 ದಿನಗಳ ಕೆಲಸವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

`ಬಹಳ ಖುಷಿಕೊಟ್ಟ ಪಾತ್ರವಿದು. ನನಗೆ ಖುಷಿಕೊಟ್ಟರೆ ಪ್ರೇಕ್ಷಕರಿಗೂ ಖುಷಿಯಾಗುತ್ತದೆ ಎಂದು ನಂಬಿದವನು ಇದು ಬೇರೆ ತರಹದ ಸಿನಿಮಾ. ನನ್ನ ಚಿತ್ರಜೀವನದಲ್ಲಿ ವಿಭಿನ್ನವಾದ ಸಿನಿಮಾ ಎಂದು ಹೇಳಿದರು. ಅದನ್ನು ನಿಜವಾಗಿಸಲು ಸಂಪೂರ್ಣವಾಗಿ ಪ್ರಯತ್ನ ಮಾಡುತ್ತೇನೆ’. ಇನ್ನೂ, ನನ್ನ ಕನ್ನಡದ ಸಂಭಾಷಣೆ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ವಿಶೇಷವಾಗಿ “ಭೋಜರಾಜ”ರಿಂದ ನನ್ನ ಕನ್ನಡದ ಮಾತಿಗೆ ಮೆಚ್ಚುಗೆ ದೊರಕಿದ್ದು ಖುಷಿಯಾಗಿದೆ ಎಂದರು.

ನಿರ್ಮಾಣದ ಮೇಲ್ವಿಚಾರಣೆ ಹೊತ್ತಿರುವ ವಿಜಯಾ ಮಾತನಾಡಿ, `ಗಣೇಶ್ ಜೊತೆಗೆ ಚಿತ್ರ ಮಾಡಬೇಕು ಎಂಬುದು ನನ್ನ ಸಹೋದರ ವಿಶ್ವಪ್ರಸಾದ್ ಆಸೆಯಾಗಿತ್ತು. ಚಿತ್ರ ಮಾಡಬೇಕು ಎಂದು ನಿರ್ಧಾರವಾದಾಗ, ಕಥೆ ಸಹ ಇರಲಿಲ್ಲ. ಗಣೇಶ್ ಅವರಿಗೆ ಎಂಥಾ ಚಿತ್ರ ಮಾಡಬೇಕು ಎಂದು ಯೋಚಿಸಿ, ವಿಭಿನ್ನ ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.

ಹಿರಿಯ ನಟ ಶ್ರೀನಿವಾಸಮೂರ್ತಿ ಮಾತನಾಡಿ ಚಿತ್ರದಲ್ಲಿ ರಾಜಗುರುವಿನ ಪಾತ್ರಕ್ಕೆ ಶ್ರೀನಿವಾಸಮೂರ್ತಿ ಅವರೇ ಬೇಕು ಎಂದು ಗಣೇಶ್ ಪಟ್ಟುಹಿಡಿದರಂತೆ `’ಕೃಷ್ಣಂ ಪ್ರಣಯ ಸಖಿ’ ಚಿತ್ರದ ನಂತರ ಗಣೇಶ್ ಜೊತೆಗೆ ಬಾಂಧವ್ಯ ಗಟ್ಟಿಯಾಗಿದೆ. ಈ ಚಿತ್ರವನ್ನು ನೀವೇ ಮಾಡಬೇಕು ಎಂದು ಅವರು ಹೇಳಿದರು

ಈ ಸಂದರ್ಭದಲ್ಲಿ ಹಿರಿಯ ನಟಹೊನ್ನವಳ್ಳಿ ಕೃಷ್ಣ, ರವೀಂದ್ರನಾಥ್, ಛಾಯಾಗ್ರಾಹಕ ಕರಮ್ ಚಾವ್ಲಾ ಮುಂತಾದವರು ಹಾಜರಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin