“ಗೋಪಿಲೋಲ” ಚಿತ್ರದ ಟ್ರೇಲರ್ ಬಿಡುಗಡೆ: ಅಕ್ಟೋಬರ್ 3ರಂದು ಸಿನಿಮಾ ತೆರೆಗೆ

ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮನಸ್ಸಿಗೂ ಹತ್ತಿರವಾಗಿರುವ “ಗೋಪಿಲೋಲ” ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ಚಿತ್ರ ಅಕ್ಟೋಬರ್ 3ರಂದು ಬಿಡುಗಡೆಯಾಗಲಿದೆ.

ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ “ಗೋಪಿಲೋಲ”ಚಿತ್ರದ ಟ್ರೇಲರ್ ಅನ್ನು ಹಿರಿಯ ನಿರ್ದೇಶಕರಾದ ಎಸ್.ವಿ.ರಾಜೇಂದ್ರಸಿಂಗ್ ಬಾಬು, ಜೋಸೈಮನ್, ದೊಡ್ಡಣ್ಣ, ಶ್ರೀನಗರ ಕಿಟ್ಟಿ, ಕೆ.ಮಂಜು, ಎಂ.ಜಿ.ರಾಮಮೂರ್ತಿ, ಕೃಷ್ಣೇಗೌಡ, ನಿರ್ದೇಶಕ ಪಿ.ಸಿ.ಶೇಖರ್ ಮುಂತಾದ ಗಣ್ಯರು ಬಿಡುಗಡೆ ಮಾಡಿ ಶುಭ ಹಾರೈಸಿದರು

ಈ ವೇಳೆ ಮಾತಿಗಿಳಿದ ನಿರ್ಮಾಪಕ ಎಸ್ ಆರ್ ಸನತ್ ಕುಮಾರ್ ,ಚಿತ್ರ ಎಲ್ಲರಿಗೂ ಮೆಚ್ಚುಗೆಯಾಗಲಿದೆ ಎಂಬ ನಂಬಿಕೆ ಇದೆ. ಉತ್ತಮ ಅಂಶಗಳು ಚಿತ್ರದಲ್ಲಿದೆ. ಕಥೆ ನಾನೇ ಬರೆದಿದ್ದೇನೆ. ನಮ್ಮದು ಹಿಂದೆ ಕೃಷಿ ಕುಟುಂಬ. ನೈಸರ್ಗಿಕ ಕೃಷಿಗೆ ಸಂಬಂಧಿಸಿದ ಚಿತ್ರ ಮಾಡಿದ ಸಂತೋಷವಿದೆ. ಮಿಥುನ್ ಅಶೊಕನ್ ಸಂಗೀತ ಸಂಯೋಜನೆಯಲ್ಲಿ ಆರು ಹಾಡುಗಳು ಸುಂದರವಾಗಿ ಮೂಡಿಬಂದಿದೆ. ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ “ಗೋಪಿಲೋಲ” ಉತ್ತಮ ಚಿತ್ರವಾಗಿ ಹೊರಹೊಮ್ಮಿದೆ ಎಂದರು.

ನಿರ್ದೇಶಕ ಆರ್ ರವೀಂದ್ರ ಮಾತನಾಡಿ ಚಿತ್ರದ ಬಗ್ಗೆ ನಿರ್ಮಾಪಕರು ಚಿತ್ರದ ಬಗ್ಗೆ ಸಾಕಷ್ಟು ಹೇಳಿದ್ದಾರೆ. “ಗೋಪಿಲೋಲ” ನೈಸರ್ಗಿಕ ಕೃಷಿಯ ಕುರಿತಾದ ಹಾಗೂ ಸುಂದರ ಪ್ರೇಮಕಥೆಯುಳ್ಳ ಚಿತ್ರ. ಜನರಿಗೆ ಒಂದೊಳ್ಳೆ ಸಂದೇಶ ಕೂಡ ಇದೆ ಎಂದು ಮಾಹಿತಿ ನೀಡಿದರು

ನಾಯಕ ಹಾಗೂ ಸಹ ನಿರ್ಮಾಪಕ ಮಂಜುನಾಥ್ ಅರಸ್ ಮಾತನಾಡಿ ನಾಯಕನಾಗಿ ನನ್ನ ಮೊದಲ ಚಿತ್ರ. ಸನತ್ ಕುಮಾರ್ ಅವರು ಉತ್ತಮ ಕಥೆ ಬರದಿದ್ದಾರೆ. ಅಷ್ಟೇ ಚೆನ್ನಾಗಿ ರವೀಂದ್ರ ಅವರು ನಿರ್ದೇಶನ ಮಾಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಆಕ್ಷನ್, ಲವ್, ಸಸ್ಪನ್ಸ್ ಹೀಗೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ಒಳ್ಳೆ ಕಂಟೆಂಟ್ ಇದೆ. ಅದೇ ನಮ್ಮ ಚಿತ್ರದ ಹೀರೋ ಎನ್ನಬಹುದು ಎಂದು ತಿಳಿಸಿದರು.

ನಾಯಕಿ ನಿಮಿಷ, ಜಾಹ್ನವಿ ಹಿರಿಯ ನಟಿ ಪದ್ಮಾ ವಾಸಂತಿ, ನಟ ಕೆಂಪೇಗೌಡ ಮುಂತಾದವರು “ಗೋಪಿಲೋಲ” ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು