“ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ
![“ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಕ್ಕೆ ಕಲಾ ರಸಿಕರು ಫಿದಾ](https://www.cininewskannada.com/wp-content/uploads/2024/09/Screenshot_2024_0922_191448.jpg?v=1727012906)
ವಿಹಾನ್, ಅಂಕಿತ ಅಮರ್, ಮಯೂರಿ ನಟರಾಜ್ ಅಭಿನಯದ ಸುಮಧುರ ಪ್ರೇಮಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಮೂರನೇ ವಾರದಲ್ಲಿಯೂ ಗೆಲುವಿನ ಓಟ ಮುಂದುವರಿಸಿದೆ.
![](https://www.cininewskannada.com/wp-content/uploads/2024/09/1000700761.jpg?v=1727012973)
ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ” ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಈ ತಿಂಗಳ 5 ರಂದು ಬಿಡುಗಡೆಯಾದ ಚಿತ್ರಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಕ್ಲಿದೆ.. ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದ್ದ ಈ ಚಿತ್ರ, ಬಿಡುಗಡೆಯಾದ ಮೇಲೂ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
![](https://www.cininewskannada.com/wp-content/uploads/2024/09/1000700753.jpg?v=1727012982)
ಬಿಡುಗಡೆಯ ಸಮಯದಲ್ಲಿ ಕಡಿಮೆ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆ ಕಂಡಿತ್ತು. ಆನಂತರ ಜನರೇ ಈ ಚಿತ್ರವನ್ನು ಹಾಡಿಹೊಗಳಿ ಹೆಚ್ಚು ಪ್ರಚಾರ ಮಾಡಲು ಆರಂಭಿಸಿದರು. ಕುಟುಂಬ ಸಮೇತ ಚಿತ್ರಮಂದಿರಗಳಿಗೆ ಬರಲು ಆರಂಭಿಸಿದರು. ವಾರದ ಕೊನೆಯಲಂತೂ ಚಿತ್ರಮಂದಿರಗಳು ಕೌಟುಂಬಿಕ ಪ್ರೇಕ್ಷಕರಿಂದ ತುಂಬಿ ತುಳುಕುತ್ತಿದೆ.
![](https://www.cininewskannada.com/wp-content/uploads/2024/09/1000700765.jpg?v=1727012988)
ವಿಹಾನ್, ಅಂಕಿತ, ಮಯೂರಿ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಜನರು ಚಿತ್ರಕ್ಕೆ ತೋರುತ್ತಿರುವ ಪ್ರೀತಿಗೆ ಚಿತ್ರತಂಡದ ಮನತುಂಬಿ ಬಂದಿದೆ. ಮೊದಲವಾರ ಐವತ್ತರ ಆಸುಪಾಸಿನ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಮೂರನೇ ವಾರದಲ್ಲಿ ಕರ್ನಾಟಕದಾದ್ಯಂತ ಇನ್ನೂರು ಸ್ಕ್ರೀನ್ ಗಳಲ್ಲಿ ಪ್ರದರ್ಶನವಾಗುತ್ತಿದೆ. ಜನರು “ಇಬ್ಬನಿಯನ್ನು ತಬ್ಬುತ್ತಿರುವ” ಪ್ರೀತಿಗೆ ಇದೊಂದು ಉತ್ತಮ ನಿದರ್ಶನವಾಗಿದೆ.
![](https://www.cininewskannada.com/wp-content/uploads/2024/09/1000700767.jpg?v=1727012996)
ಜನರಷ್ಟೇ ಅಲ್ಲದೇ ನಿರ್ದೇಶಕರಾದ ರಿಷಭ್ ಶೆಟ್ಟಿ, ಶಶಾಂಕ್, ಪವನ್ ಒಡೆಯರ್ ಮುಂತಾದ ಸ್ಯಾಂಡಲ್ ವುಡ್ ಗಣ್ಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಕುರಿತು ಮೆಚ್ಚುಗೆ ಮಾತುಗಳನ್ನು ಬರೆದು ಸಹಕಾರ ನೀಡಿದ್ದಾರೆ.
![](https://www.cininewskannada.com/wp-content/uploads/2024/09/1000700771-1024x576.jpg?v=1727013033)
ಚಿತ್ರಮಂದಿರಕ್ಕೆ ಜನರು ಬರುತ್ತಿಲ್ಲ ಎಂಬ ಮಾತನ್ನು “ಕೃಷ್ಣಂ ಪ್ರಣಯ ಸಖಿ” ಹಾಗೂ “ಭೀಮ” ಚಿತ್ರಗಳು ದೂರ ಮಾಡಿದ್ದವು. ಈಗ ಆ ಸಾಲಿಗೆ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಸಹ ಸೇರ್ಪಡೆಯಾಗಿದೆ.