‘ಫಾದರ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ಕಿಚ್ಚ ಸುದೀಪ್
ಕನ್ನಡ ಚಿತ್ರರಂಗದ ಸದಭಿರುಚಿಯ ನಿರ್ದೇಶಕ, ನಿರ್ಮಾಪಕಜ, ಸ್ಟಾರ್ ಕ್ರಿಯೇಟರ್ ಆರ್. ಚಂದ್ರ ಸಾರಥ್ಯದ ಪ್ಯಾನ್ ಇಂಡಿಯಾ ಸಂಸ್ಥೆ “ಆರ್ ಸಿ ಸ್ಟುಡಿಯೋಸ್” ಅಡಿ ಚೊಚ್ಚಲ ನಿರ್ಮಾಣದ “ಪಾಧರ್” ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ
ಮಾಜಿ ಸಚಿವ ಹೆಚ್ ಎಂ ರೇವಣ್ಣ, ನಟ ಅನೂಪ್ ರೇವಣ್ಣ, ಆನಂದ್ ಆಡಿಯೋ ಶ್ಯಾಮ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು ಆರ್. ಚಂದ್ರು ಅವರ ಕೆಲಸವನ್ನು ಮುಕ್ತಕಂಠದಿಂದ ಪ್ರಶಂಶಿಸಿ ಒಳ್ಳೆಯದಾಗಲಿ ಎಂದು ಶುಭಹಾರೈಸಿದ್ದಾರೆ.
ಅಪ್ಪ – ಮಗನ ಕುರಿತಾದ ಚಿತ್ರದ ಪ್ರಮುಖಪಾತ್ರದಲ್ಲಿ ಪ್ರಕಾಶ್ ರೈ ಹಾಗೂ ಡಾರ್ಲಿಂಗ್ ಕೃಷ್ಣ ಅಭಿನಯಿಸಿದ್ದಾರೆ. ರಾಜ್ ಮೋಹನ್ ನಿರ್ದೇಶನ ಮಾಡಿದ್ದಾರೆ.
ನಿರ್ಮಾಪಕ ಆರ್ ಚಂದ್ರು ಮಾತನಾಡಿ 22 ವರ್ಷಗಳ ಹಿಂದೆ 100 ರೂಪಾಯಿ ಇಟ್ಟುಕೊಂಡು ಬೆಂಗಳೂರಿಗೆ ಬಂದ ನಾನು, ಈಗ “ಕಬ್ಜ”ದಂತಹ 100 ಕೋಟಿ ಸಿನಿಮಾ ಮಾಡಿದ್ದೇನೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಆಬಾರಿ. ಈ ಹಿಂದೆ ಸಿದ್ದೇಶ್ವರ ಎಂಟರ್ ಪ್ರೈಸಸ್ ಬ್ಯಾನರ್ನಲ್ಲಿ 12 ಚಿತ್ರಗಳನ್ನು ನಿರ್ಮಿಸಿದ್ದೇನೆ. ಈಗ ಆರ್ ಸಿ ಸ್ಟುಡಿಯೋಸ್ ಎಂಬ ಬೃಹತ್ ನಿರ್ಮಾಣ ಸಂಸ್ಥೆ ಆರಂಭಿಸಿ ಅದರ ಮೂಲಕ ಮೊದಲ ಚಿತ್ರ “ಫಾದರ್”. ಅಪ್ಪ – ಮಗನ ಬಂಧವ್ಯದ ಕುರಿತಾದ ಸಿನುಮಾವಿದು.
ನಿರ್ದೇಶಕ ರಾಜ್ ಮೋಹನ್ ಈ ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಅಪ್ಪನ ಪಾತ್ರದಲ್ಲಿ ಖ್ಯಾತ ನಟ ಪ್ರಕಾಶ್ ರೈ ಹಾಗೂ ಮಗನಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸಿದ್ದಾರೆ. ಎರಡು ಹಾಡುಗಳ ಚಿತ್ರೀಕರಣ ಮುಗಿದರೆ, ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗುತ್ತದೆ. ಕನ್ನಡ ಚಿತ್ರ ವಿಶ್ವಮಟ್ಟದಲ್ಲಿ ವಿಜೃಂಭಿಸಬೇಕು ಎಂಬ ಆಸೆ ಇರುವವನು ನಾನು. ಹಾಗಾಗಿ ಆರ್ ಸಿ ಸ್ಟುಡಿಯೋಸ್ ಆರಂಭಿಸಿರುವುದು. ನಮ್ಮ ಸಂಸ್ಥೆಯ ಜೊತೆಗೆ ಬೇರೆಬೇರೆ ಭಾಷೆಗಳ ಹೆಸರಾಂತ ಸಂಸ್ಥೆಗಳ ಸಹಯೋಗವಿದೆ. ಎಲ್ಲಾ ಭಾಷೆಗೂ ಸಲ್ಲುವ ಕಥಾಹಂದರ ಹೊಂದಿರುವ “ಫಾದರ್” ಚಿತ್ರ ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಡುಗಡೆಯಾಗಲಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದರು.
ಡಾರ್ಲಿಂಗ್' ಕೃಷ್ಣ ಮಾತನಾಡಿ,
ಈ ಕಥೆ ಕೇಳಿದಾಗ ನನಗಿಂತ ಮೊದಲು ಇಷ್ಟವಾಗಿದ್ದು ಮಿಲನಾ ಅವರಿಗೆ. ಈ ಚಿತ್ರವನ್ನು ನೀವು ಮಾಡಲೇಬೇಕೆಂದು ಅವರು ಹುರಿದುಂಬಿಸಿದರು. ಪ್ರಕಾಶ್ ರೈ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ. `ಫಾದರ್’ ತುಂಬಾ ದಿನಗಳವರೆಗೆ ಜನರ ಮನಸಿನಲ್ಲಿ ಉಳಿಯುವಂತ ಚಿತ್ರವಾಗುತ್ತದೆ’. ಸುದೀಪ್ ಅವರು ಬಂದು ಹಾರೈಸಿರುವ ನನ್ನ ಎಲ್ಲಾ ಸಿನಿಮಾಗಳು ಗೆದ್ದಿದೆ. ಈ ಚಿತ್ರ ಕೂಡ ಗೆಲ್ಲುತ್ತದೆ ಎಂಬ ನಂಬಿಕೆಯಿದೆ. ಸುದೀಪ್ ಅವರಿಗೆ ಧನ್ಯವಾದ ಎಂದರು.
ನಿರ್ದೇಶಕ ರಾಜ್ ಮೋಹನ್ ಮಾತನಾಡಿ ಅಪ್ಪ – ಮಗನ ಬಾಂಧವ್ಯದ ಚಿತ್ರಗಳು ಸಾಕಷ್ಟು ಬಂದಿದೆಯಾದರೂ, ಇದು ವಿಭಿನ್ನ. ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕನಿಗೆ ನಿರಾಸೆ ಮಾಡದ ಚಿತ್ರವಿದು ಎಂದು ತಿಳಿಸಿದರು.
ನಾಯಕಿ ಅಮೃತ ಅಯ್ಯಂಗಾರ್ ಮಾತನಾಡಿ “ಫಾದರ್” ಚಿತ್ರದಲ್ಲಿ ನನ್ನದು ಒಂದೊಳ್ಳೆಯ ಪಾತ್ರ. ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಹೇಳಿದರು.
ನಟ ನಾಗಭೂಷಣ್ ಮಾತನಾಡಿ ಆರ್ ಚಂದ್ರು ಅವರು ಸಿನಿಮಾವನ್ನು ಪ್ರೀತಿಸುವ ರೀತಿ ನನಗೆ ಇಷ್ಟ. ಈ ಚಿತ್ರದಲ್ಲಿ ನನ್ನ ಪಾತ್ರವೂ ಚೆನ್ನಾಗಿದೆ ಎಂದರು.
ಈ ವೇಳೆ ಚಿತ್ರಕ್ಕಾಗಿ ಕೆಲಸ ಮಾಡಿದ ತಂಡ ಸೇರಿದಂತೆ ಹಲವು ಗಣ್ಯರು ಉಪಸ್ಥತರಿದ್ದು ಆರ್. ಚಂದ್ರು ಅವರ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತಿದ್ದರು.
ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯ, ಛಾಯಾಗ್ರಾಹಕ ಸುಜ್ಞಾನ್, ಸಾಹಿತಿ ಮಂಜುನಾಥ್ ಮಾಗೋದಿ ಮುಂತಾದವರು “ಫಾದರ್” ಚಿತ್ರದ ಕುರಿತು ಮಾತನಾಡಿದರು. ಪ್ರೊಡಕ್ಷನ್ಸ್ ಹೆಡ್ ಯಮುನಾ ಚಂದ್ರಶೇಖರ್, ಕಾರ್ಯಕಾರಿ ನಿರ್ಮಾಪಕ ಮೌರ್ಯ ಮಂಜು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.