"Kulali Keelyavudo" song from the film "Nam Paiki obba Hogbutta" released

“ಕುಲದಲ್ಲಿ ಕೀಳ್ಯಾವುದೋ”” ಚಿತ್ರದ “ನಮ್ ಪೈಕಿ ಒಬ್ಬ ಹೋಗ್ಬುಟ” ಹಾಡು ಬಿಡುಗಡೆ - CineNewsKannada.com

“ಕುಲದಲ್ಲಿ ಕೀಳ್ಯಾವುದೋ”” ಚಿತ್ರದ “ನಮ್ ಪೈಕಿ ಒಬ್ಬ ಹೋಗ್ಬುಟ” ಹಾಡು ಬಿಡುಗಡೆ

ದಿನ ಆಡುವ ಮಾತುಗಳನ್ನೆ ಯೋಗರಾಜ್ ಭಟ್ ಹಾಡುಗಳ ರೂಪಕ್ಕೆ ತಂದು ಎಲ್ಲರೂ ಗುನುಗುವ ಹಾಗೆ ಮಾಡುತ್ತಾರೆ. “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೊ” ಚಿತ್ರಕ್ಕೆ “ನಮ್ ಪೈಕಿ ಒಬ್ಬ ಹೋಗ್ಬುಟ” ಎಂಬ ಹಾಡನ್ನು ಬರೆದಿದ್ದಾರೆ

ಮನೋಮೂರ್ತಿ ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ಆಂಥೋನಿ ದಾಸ್ ಕಂಠಸಿರಿಯಲ್ಲಿ‌ ಈ ಹಾಡು ಮೂಡಿಬಂದಿದೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ನಡೆಯಿತು.

ನಾಯಕ ನಟ ಮನು ಬ್ಯಾಂಡ್ ಬಾರಿಸಿಕೊಂಡು ಬ್ಯಾಂಡ್ ಸೆಟ್ ಹಾಗೂ ಅರ್ಕೆಸ್ಟ್ರಾ ಕಲಾವಿದರ ಜೊತೆಗೆ ವೇದಿಕೆಗೆ ಬಂದು ಈ‌ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು.

ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ. ರಾಮ್ ನಾರಾಯಣ್ ನಿರ್ದೇಶಿಸುತ್ತಿದ್ದಾರೆ. ಮನೋಮೂರ್ತಿ ಸಂಗೀತ ನೀಡಿದ್ದಾರೆ

ಯೋಗರಾಜ್ ಭಟ್ ಮಾತನಾಡಿ
“ಕಾಮಿಡಿ ಕಿಲಾಡಿಗಳು” ಸಮಯದಲ್ಲಿ ಮನು ನಟನೆ ನೋಡಿ ನೀನು ಇಲ್ಲಿ ಮಾತ್ರ ಅಲ್ಲ. ಸಿನಿಮಾಗೂ ಸಲ್ಲುವವನು ಅಂತ ಹೇಳಿದ್ದೆ. ಚಿತ್ರದ ಕಥೆ ನಾನು ಹಾಗೂ ಇಸ್ಲಾಮುದ್ದೀನ್ ಸೇರಿ ಬರೆದಿದ್ದೇವೆ‌. ಕಥೆಗೆ ಮನು ಸೂಕ್ತ ನಾಯಕ. ಹಾಡನ್ನು ನಾನು ಬರೆಯಲು ಮನೋಮೂರ್ತಿ ಕಾರು ಚಾಲಕ ಸ್ಪೂರ್ತಿ‌. ಆತ ಇಂದು ನಮ್ಮೊಂದಿಗಿಲ್ಲ. ಆತನ ಸಾವು ಹಾಗೂ ಆನಂತರ ನಡೆದ ಸನ್ನಿವೇಶಗಳೆ ಹಾಡು ಬರೆಯಲು ಕಾರಣ ಎಂದರು.

ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ ನನ್ನ ಜಾನಾರ್ ಹೊರತು ಪಡಿಸಿ ಸಂಗೀತ ನೀಡಿರುವ ಎರಡನೇ ಚಿತ್ರ ಇದು. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಯೋಗರಾಜ್ ಭಟ್ ಮನಮುಟ್ಟುವ ಹಾಗೆ ಬರೆದಿದ್ದಾರೆ ಎಂದು ಹೇಳಿದರು.

ನಿರ್ದೇಶಕ ರಾಮ್ ನಾರಾಯಣ್ ಮಾತನಾಡಿ ತಾವೇ ಒಬ್ಬ‌ ನಿರ್ದೇಶಕನಾಗಿದರೂ ನನಗೆ ಸಿನಿಮಾ ನಿರ್ದೇಶನಕ್ಕೆ ಅವಕಾಶ ಕೊಟ್ಟಿದ್ದು ಅವರ ದೊಡ್ಡ ಗುಣ. ಇನ್ನೂ ಮನೋಮೂರ್ತಿ ಅವರ ಸಂಗೀತ ನಿರ್ದೇಶನದಲ್ಲಿ ಈ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿ ಬಂದಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ ಎಂದರು

ನಿರ್ಮಾಪಕ ಸಂತೋಷ್ ಮಾತನಾಡಿ ಸಿನಿಮಾ ಆರಂಭಿಸಿದ್ದು ಮನುಗೋಸ್ಕರ. ಆದರೆ, ಟೇಕ್ ಆಫ್ ಆಗಿದ್ದು ಯೋಗರಾಜ್ ಭಟ್ ಅವರಿಂದ ಇಡೀ ತಂಡದ ಶ್ರಮದಿಂದ ಒಂದೊಳ್ಳೆ ಸಿನಿಮಾ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು.

ನಾಯಕ ಮಡೇನೂರು ಮನು ಮಾತನಾಡಿ ದೊಡ್ದ ಬ್ಯಾನರ್ ನಲ್ಲಿ ನಟಿಸುವ ಆಸೆ ಇತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ಯೋಗರಾಜ್ ಭಟ್ ಅವರಿಗೆ ಧನ್ಯವಾದ. ನಾನು ಮೂಲತಃ ಆರ್ಕೇಸ್ಟ್ರಾ ಕಲಾವಿದ. ಈ ಚಿತ್ರದಲ್ಲೂ ನನ್ನದು ಅದೇ ಪಾತ್ರ. ಸಾವಿನ ಬಗ್ಗೆ ಎಲ್ಲರಿಗೂ ಅರ್ಥವಾಗುವ ಹಾಗೆ ಅರ್ಥಗರ್ಭಿತ ಹಾಡೊಂದನ್ನು ಯೋಗರಾಜ್ ಭಟ್ ಅವರು ಬರೆದಿದ್ದಾರೆ. ಮನೋಮೂರ್ತಿ ಸಂಗೀತ ನೀಡಿದ್ದಾರೆ ಹಾಗೂ ಅವರದೆ ಆಡಿಯೋ ಕಂಪನಿ ಮೂಲಕ ಬಿಡುಗಡೆ ಮಾಡಿದ್ದಾರೆ ಎಂದರು.

ತಬಲ ನಾಣಿ ಮಾತನಾಡಿ ನಾನು ಕೂಡ ಆರ್ಕೆಸ್ಟ್ರಾ ಕಲಾವಿದ. ಇಂದು ಬಿಡುಗಡೆಯಾಗಿರುವ ಈ ಹಾಡು ಈ ಬಾರಿಯ ರಾಜ್ಯೋತ್ಸವಕ್ಕೆ ಎಲ್ಲಾ ಕಡೆ ರಾರಾಜಿಸಲಿದೆ. ಈ ಚಿತ್ರದಲ್ಲಿ ನನ್ನ ಪಾತ್ರದ ‌ಹೆಸರು ತಮಟೆ. ಸದಾ ನಾಯಕನ ಜೊತೆಗಿರುತ್ತೇನೆ‌ ಎಂದು ತಿಳಿಸಿದರು.

ಮಡೆನೂರ್ ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin