Love cum action film 'Om Shivam' songs released; curiosity increases

ಲವ್ ಕಮ್ ಆಕ್ಷನ್ ಚಿತ್ರ ‘ಒಂ ಶಿವಂ’ ಹಾಡುಗಳ ಬಿಡುಗಡೆ; ಕುತೂಹಲ ಹೆಚ್ಚಳ - CineNewsKannada.com

ಲವ್ ಕಮ್ ಆಕ್ಷನ್ ಚಿತ್ರ ‘ಒಂ ಶಿವಂ’ ಹಾಡುಗಳ ಬಿಡುಗಡೆ; ಕುತೂಹಲ ಹೆಚ್ಚಳ

ಚಿತ್ರರಂಗದಲ್ಲಿ ಸುಮಾರು 13 ವರ್ಷಗಳ ಅನುಭವ ಹೊಂದಿರುವ ಅಲ್ವಿನ್ ಮೊದಲಬಾರಿ ನಿರ್ದೇಶನ ಮಾಡಿರುವ ‘ಓಂ ಶಿವಂ’ ಚಿತ್ರದ ಹಾಡುಗಳು ಬಿಡುಗಡೆ ಆಗಿದ್ದು ಗಮನ ಸೆಳೆದಿವೆ

ವಿಜಯ್ ಯಾರ್ಡ್ಲಿ ಸಂಗೀತ ಸಂಯೋಜಿಸಿರುವ ಚಿತ್ರದಲ್ಲಿ ಒಟ್ಟು ನಾಲ್ಕು ಗೀತೆಗಳಿವೆ. ಶಿವನ ಕೂರಿತಾದ ಒಂದು ಗೀತೆಯನ್ನು ಸಂಸ್ಕೃತದಲ್ಲಿ ರಚಿಸಿರುವುದು ವಿಶೇಷ. ಉಳಿದ ಮೂರು ಗೀತೆಗಳಿಗೆ ಕವಿರಾಜ್, ಡಾ. ವಿ. ನಾಗೇಂದ್ರ ಪ್ರಸಾದ್ ಹಾಗೂ ಗೌಸ್ ಪೀರ್ ಸಾಹಿತ್ಯ ಬರೆದಿದ್ದಾರೆ. ಚಿತ್ರವನ್ನು ಕೆ.ಎನ್. ಕೃಷ್ಣ ನಿರ್ಮಾಣ ಮಾಡಿದ್ದಾರೆ. ಇವರ ಮಗ ಭಾರ್ಗವ್ ಕೃಷ್ಣ ಚಿತ್ರದ ನಾಯಕನಾಗಿ ಅಭಿನಯ ಮಾಡಿದ್ದಾರೆ.

ಮೂಲತಃ ರಂಗಭೂಮಿ ಕಲಾವಿದರಾದ ಅಲ್ವಿನ್ ಸುಮಾರು 600ಕ್ಕೂ ಹೆಚ್ಚು ಬಿದಿ ನಾಟಕಗಳನ್ನು ಮಾಡಿದ್ದಾರೆ. ಇದೀಗ ‘ಓಂ ಶಿವಂ’ ಸಿನಿಮಾ ಮೂಲಕ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ.

ನಿರ್ದೇಶಕ ಅಲ್ವಿನ್ ಮಾತನಾಡಿ ಚಿತ್ರದಲ್ಲಿ ನಾಲ್ಕು ಹಾಡುಗಳಿವ. ಸೆಪ್ಟೆಂಬರ್ 5 ರಂದು ಚಿತ್ರ ಬಿಡುಗಡ ಮಾಡುವ ಉದ್ದೇಶವಿದೆ. ಇದೊಂದು ಲವ್ ಮತ್ತು ಆ್ಯಕ್ಷನ್ ಚಿತ್ರ. ಎರಡು ಜಾನರ್‌ನಲ್ಲಿ ಸಿನಿಮಾ ಸಾಗುತ್ತದೆ. ಇಂದಿನ ಹುಡುಗ-ಹುಡುಗಿ ಲವ್ ಉಳಿಸಿಕೊಳ್ಳಲು ಹೇಗೆಲ್ಲಾ ಹೊರಾಡುತ್ತಾರೆ ಎಂಬುದು ಚಿತ್ರದ ಒನ್ ಲೈನ್ ಕಥೆ. ಬೆಂಗಳೂರು, ಮಂಗಳೂರು, ಮಂಡ್ಯ, ಮಡಿಕೇರಿ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ.ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡಿ, ನಂತರ ತಮಿಳು, ತೆಲಗು ಭಾಷೆಗೆ ಹೋಗುವ ಪ್ಲ್ಯಾನ್ ಇದೆ’ ಎಂದು ಹೇಳಿದರು

ನಿರ್ಮಾಪಕ ಕೃಷ್ಣ ಕೆ.ಎನ್ ಮಾತನಾಡಿ, ಕನಸು ಇಟ್ಟುಕೊಂಡು ಸಿನಿಮಾ ಮಾಡಿದ್ದೇನೆ. 20 ವರ್ಷದ ಹಿಂದೆ ಸಿನಿಮಾ ಮಾಡುವ ಆಸೆ ಇತ್ತು. ಆಗಲಿಲ್ಲ. ಈಗ ಮಗನ ಮೂಲಕ ನನ್ನ ಕನಸು ಇಡೇರಿಸಿಕೊಂಡಿದ್ದೇನೆ. ಜೊತೆಗೆ ನಾನು ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದೇನೆ’ ಎಂದರು.

ನಾಯಕ ಭಾರ್ಗವ್ ಕೃಷ್ಣ ಮೊದಲ ಸಿನಿಮಾ. ನಿರ್ದೇಶಕರು ಕಥೆ ಹೇಳಿದಾಗ ತುಂಬಾ ಖುಷಿ ಪಟ್ಟೆ. ಇದರಲ್ಲಿ ಒಳ್ಳೆಯ ಸಾಂಗ್, ಫೈಟ್, ಲವ್ ಕಥೆ ಇದೆ. ನಾನು ನಿರ್ದೇಶಕರ ಜೊತೆಗೆ 5-6 ತಿಂಗಳು ತರಬೇತಿ ಪಡೆದು ನಟಿಸಿದ್ದೇನೆ ನಾನಿಲ್ಲಿ ಶಿವು ಪಾತ್ರ ಮಾಡಿದ್ದು, ಲವ್ವಲ್ಲಿ ಬಿದ್ದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ನನ್ನಿಂದ ತೋರಿಸಲಾಗಿದೆ’ ಎಂದರು.

ನಾಯಕಿ ವಿರಾಣಿಕಾ ಶೆಟ್ಟಿ, ಚಿತ್ರಕ್ಕೆ ಆಡಿಶನ್ ಮೂಲಕ ಆಯ್ಕೆ ಆದೆ. ಇಂದಿನ ಜನರೇಷನ್‌ನ ಲವ್ ಇದರಲ್ಲಿ ಇದೆ’ ಎಂದಷ್ಟೇ ಹೇಳಿದರು. ಇನ್ನು ಚಿತ್ರದ ಸಂಗೀತ ನಿರ್ದೇಶಕ ವಿಜಯ್ ಯಾಟ್ಲೆ ‘ಇದು ನನ್ನ ಕನ್ನಡದ ನಾಲ್ಕನೇ ಸಿನಿಮಾ. ತಮಿಳನಲ್ಲಿ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ಇದೀಗ ವಿಭಿನ್ನ ಜಾನರ್‌ನ ನಾಲ್ಕು ಸಾಂಗ್ ಬಿಡುಗಡೆ ಆಗಿವೆ. ಪ್ರಾರಂಭದಲ್ಲಿ ಶಿವಂ ಸಾಂಗ್ ಇರಲಿಲ್ಲ ನಿರ್ಮಾಪಕರು ಹೇಳಿದ್ದರಿಂದ ಅದನ್ನು ಮಾಡಿದ್ವಿ. ಈ ಹಾಡಿಗೆ ಸಂಸ್ಕೃತದಲ್ಲಿ ಸಾಹಿತ್ಯವಿದೆ’ ಎಂದು ಚಿತ್ರದ ಸಾಹಿತಿಗಳು ಮತ್ತು ಹಾಡುಗಾರ ಬಗ್ಗೆ ಮಾಹಿತಿ ನೀಡಿದರು.

ಸಾಹಿತಿ ಕವಿರಾಜ್, ‘ಈ ಹಾಡು ಬರೆಯಲು ಖುಷಿ ಆಯ್ತು. ಒಳ್ಳೆಯ ಸಾಲುಗಳು ಇದರಲ್ಲಿ ಇವೆ. ಸಿಂಗರ್‌ಗಳು ಕೂಡ ಚನ್ನಾಗಿ ಹಾಡಿದ್ದಾರೆ. ಮೊದಲಿನಂತೆ 100 ದಿನ ಸಿನಿಮಾ ಓಡತಾ ಇಲ್ಲ. ಮೂರು ದಿನ ಓಡಿದ್ರೆ ಹೆಚ್ಚು. ಹಾಗಾಗಿ ಸಿನಿಮಾ ನೋಡಬೇಕು ಅನಿಸಿದರೇ ಪ್ರೇಕ್ಷಕರು ಮೊದಲ ಮೂರು ದಿನ ಬಂದು ನೋಡಿ. ಮೂರು ದಿನ ಚನ್ನಾಗಿ ಹೋದ್ರೆ ನಾಲ್ಕನೇ ದಿನ ಸಿನಿಮಾ ಥಿಯೇಟರ್‌ನಲ್ಲಿ ಇರುತ್ತದೆ. ಆ ಮೂಲಕ ಸಿನಿಮಾ ಗಡಲ್ಲಿಸಬೇಕು’ ಎಂದರು.

ಛಾಯಾಗ್ರಾಹಕ ವಿರೇಶ್ ಎನ್.ಟಿ.ಎ, ಕಲಾವಿದರಾದ ವರ್ಧನ ತೀರ್ಥಹಳ್ಳಿ, ಉಗ್ರಂ ರವಿ ತಮ್ಮ ಅನುಭವ ಹಂಚಿಕೊಂಡರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ನಟರಾದ ಅಭಯ್, ಗೌರಿ ಶಂಕರ್ ಮುಂತಾದವರು ಆಗಮಿಸಿದ್ದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin