‘ತ್ಯಾಗರಾಜ’ ನ ಜೊತೆಗೂಡಿದ ‘ಪ್ರೇಮಿಗಳ ರಾಜ” : ರಾಮ್ ಗೆ ಜೈ ಎಂದ ಜೋಡಿ

ಕನ್ನಡ ಚಿತ್ರರಂಗದಲ್ಲಿ ತ್ಯಾಗರಾಜನ ಪಾತ್ರದಿಂದಲೇ ಹೆಂಗೆಳೆಯರ ಮನಗೆದ್ದ ಮಾನವೀಯ ಕಳಕಳಿಯ ವ್ಯಕ್ತಿ, ಬಹುಮುಖ ಪ್ರತಿಭೆ ರಮೇಶ್ ಅರವಿಂದ್, ‘ಚೆಲ್ಲಾಟ’ದ ಮೂಲಕವೇ ಹದಿಹರೆಯದ ಹೃದಯ ಗೆದ್ದ “ಪ್ರೇಮಿಗಳ ರಾಜ’ ಗೋಲ್ಡನ್ ಸ್ಟಾರ್ “ಸುಂದರಾಂಗ ಜಾಣ” ಮೂಲಕ ಮತ್ತೊಮ್ಮೆ Your’s sincerely ರಾಮ್ಗೆ ಜೈ ಎಂದಿದೆ ಈ ಜೋಡಿ. ಈ ಬಾರಿ ಇಬ್ಬರೂ ಜೊತೆಯಾಗಿ ನಟಿಸುತ್ತಿರುವುದು ವಿಶೇಷ.

ಪುಷ್ಪಕ ವಿಮಾನ, ಇನ್ಸ್ಪೆಕ್ಟರ್ ವಿಕ್ರಮ್, ಮಾನ್ಸೂನ್ ರಾಗ ಚಿತ್ರ ನಿರ್ಮಾಣ ಮಾಡಿದ್ದ ವಿಖ್ಯಾತ್ ಎ ಆರ್ ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಮೊದಲ ಚಿತ್ರದಲ್ಲಿಯೇ ಕನ್ನಡದ ಹೆಸರಾಂತ ನಟರಾದ ರಮೇಶ್ ಅರವಿಂದ್ ಹಾಗು ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ.
ದಿ ರಾಯಲ ಸ್ಟುಡಿಯೋಸ್ ಬ್ಯಾನರ್ ನಡಿ ಸತ್ಯ ರಾಯಲ ಯುವರ್ಸ್ ಸಿನ್ಸಿಯರ್ ಲೀ “ರಾಮ್” ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರಕ್ಕೆ ನಟಿ ಕಮ್ ನಿರೂಪಕಿ ಜಾನ್ವಿ ರಾಯಲ ಚಿತ್ರಕ್ಕೆ ಕ್ಲ್ಯಾಪ್ ಮಾಡಿದರೆ, ನಿರ್ದೇಶಕ ವಿಖ್ಯಾತ್ ಪತ್ನಿ ಸ್ವಾತಿ ವಿಖ್ಯಾತ್ ಕ್ಯಾಮೆರಾಗೆ ಚಾಲನೆ ನೀಡಿದರು. ಈ ಮೂಲಕ ಇಬ್ಬರು ತಾರಾ ನಟರ ಸಿನಿಮಾ ಆರಂಭವಾಗಿದೆ.
ರಮೇಶ್ ಅರವಿಂದ್ ಹಾಗೂ ಗಣೇಶ್ ಸಂಗಮದ ಹೊಸ ಚಿತ್ರ Your’s sincerely ರಾಮ್ ಎನ್ನುವ ಕ್ಲಾಸ್ ಶೀರ್ಷಿಕೆ ಮೂಲಕ ಜನರ ಮನಗೆಲ್ಲಲು ಮುಂದಾಗಿದೆ. ಮುಹೂರ್ತದ ವೇಳೆ ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲಾಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚು ಮಾಡಿದೆ.
ಮಹೂರ್ತದ ಬಳಿಕ ಮಾತಿಗಿಳಿದ ನಟ ರಮೇಶ್ ಅರವಿಂದ್ ಮಾತನಾಡಿ, ವಿಖ್ಯಾತ್ ಪರಿಚಯ ಆಗಿದ್ದು 9 ವರ್ಷಗಳ ಹಿಂದೆ. ಪುಷ್ಪಕ ವಿಮಾನ ಕಥೆ ಮೊದಲು ಹೇಳಲು ಬಂದರು. ಅಂದಿನಿಂದ ಇಂದಿನವರೆಗೂ ನೋಡಿಕೊಂಡು ಬರುತ್ತಿದ್ದೇನೆ ಇವನಿಗೆ ಇರುವ ಸೌಂದರ್ಯ ಪ್ರಜ್ಞೆ ತುಂಬ ಚೆನ್ನಾಗಿದೆ ನಿರ್ಮಾಣ ಮಾಡಿದ ಚಿತ್ರಗಳ ಪೆÇೀಸ್ಟರ್, ಟೀಸರ್ ಗಳಲ್ಲಿ ಸೂಕ್ಷ್ಮ ಮನೋಭಾವವಿದೆ. ಇದೀಗ ನಿರ್ದೇಶನ ಮಾಡುತ್ತಿರುವುದು ಖುಷಿ. ಇದು ನಿಮ್ಮ ಮೊದಲ ಪಯಣ. ಸತ್ಯ ವಿಖ್ಯಾತ್.ಇಬ್ಬರಲ್ಲಿ ಬಹಳ ಉತ್ಸವವಿದೆ. ನಟ ಗಣೇಶ್ ಜೊತೆ ಕಾಂಬಿನೇಷನ್ ಖುಷಿ ಕೊಡುತ್ತದೆ ಎಂದು ಹೇಳಿದರು

ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ಗೌರಿ ಹಬ್ಬದ ದಿನ Your’s sincerely ರಾಮ್, ಗಣೇಶ್ ಹಬ್ಬದ ದಿನ ರಾಮ್ ನೆನಪು ಮಾಡಿಕೊಂಡಿದ್ದೇವೆ. ಚಿಕ್ಕ ಗ್ಲಿಂಪ್ಸ್ ನೋಡಿದಿರಿ. ಇಬ್ಬರ ನಡುವಿನ ಸಂಬಂಧ. ಬೇರೆ ರೀತಿ ಫೀಲ್, ಬೇರೆ ಪ್ರಪಂಚಕ್ಕೆ ಕರೆದುಕೊಂಡು ಹೋಗುವಂತಹ ಕಥೆ. ಇದರ ನೂರಷ್ಟು ಸಿನಿಮಾದಲ್ಲಿ ಇರುತ್ತದೆ. ಪ್ರತಿ ಸೀನ್, ಸ್ಕ್ರೀನ್ ಪ್ಲೇ ಎಕ್ಸ್ ಪಿರಿಯನ್ಸ್ ಆಗಿರುತ್ತದೆ. ಬಹಳ ಖುಷಿ ಇದೆ. ರಮೇಶ್ ಸರ್ ಜೊತೆ ಚಿತ್ರ ಮಾಡುತ್ತಿರುವುದು ಖುಷಿ ಕೊಟ್ಟಿದೆ. ಅದ್ಭುತ ನಟ, ಟೆಕ್ನಿಷಿಯನ್ ರಮೇಶ್ ಸರ್. ವಿಖ್ಯಾತ್ ಫ್ಯಾಷನೇಟೆಡ್ ಡೈರೆಕ್ಟರ್. ಸತ್ಯ ಅವರಿಗೆ ಒಳ್ಳೆದಾಗಲಿ ಎಂದರು.

ಸಂಗೀತದ ಮೂಲಕ ಮೋಡಿ ಮಾಡಿರುವ ರಾಗನಿಧಿ ಅನೂಪ್ ಸೀಳಿನ್ Your’s sincerely ರಾಮ್ಗೆ ಸಂಗೀತ ನೀಡುತ್ತಿರುವುದು ಕೂಡ ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲ ಹೆಚ್ಚುವಂತೆ ಮಾಡಿದೆ.

ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಗುಣ ಕಲಾ ನಿರ್ದೇಶನ , ಪ್ರಶಾಂತ್ ರಾಜಪ್ಪ , ಯದುನಂದನ್ ಹಾಗೂ ಸಚಿನ್ ಸಂಭಾಷಣೆ ಚಿತ್ರಕ್ಕಿದೆ. ಆಡಿಯೊ ಹಕ್ಕುಗಳು ಆನಂದ್ ಆಡಿಯೊಗೆ ದಾಖಲೆ ಬೆಲೆಗೆ ಮಾರಾಟವಾಗಿದೆ. ನಾಯಕಿ ಸೇರಿದಂತೆ ಉಳಿದ ಪಾತ್ರವರ್ಗವನ್ನು ಮುಂದಿನ ದಿನಗಳಲ್ಲಿ ಪರಿಚಯಿಸಲು ತಂಡ ಮುಂದಾಗಿದೆ.