Ravi Shankar Guruji releases the song "Shiva Shiva Shankara" from the movie "Kannappa"

ರವಿಶಂಕರ್ ಗುರೂಜಿ ಅವರಿಂದ “ಕಣ್ಣಪ್ಪ” ಚಿತ್ರದ “ಶಿವಶಿವ ಶಂಕರ” ಹಾಡಿನ ಬಿಡುಗಡೆ - CineNewsKannada.com

ರವಿಶಂಕರ್ ಗುರೂಜಿ ಅವರಿಂದ “ಕಣ್ಣಪ್ಪ” ಚಿತ್ರದ “ಶಿವಶಿವ ಶಂಕರ” ಹಾಡಿನ ಬಿಡುಗಡೆ

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಖ್ಯಾತ ನಟ ಮೋಹನ್ ಬಾಬು ನಿರ್ಮಾಣದ, ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಹಾಗೂ ವಿಷ್ಣು ಮಂಚು ಮುಖ್ಯಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ “ಶಿವಶಿವ ಶಂಕರ” ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಮೋಹನ್ ಬಾಬು, ವಿಷ್ಣು ಮಂಚು, ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್ ಮುಂತಾದ ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತಿ ವಿಷ್ಣುವರ್ಧನ್ ಸುಮಲತ ಅಂಬರೀಶ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿದ್ದರು.

ನಟ,ನಿರ್ಮಾಪಕ ಮೋಹನ್ ಬಾಬು ಮಾತನಾಡಿ ನನಗೆ “ಕಣ್ಣಪ್ಪ ಅಂದಕೂಡಲೆ ನೆನಪಿಗೆ ಬರುವುದು ಡಾ.ರಾಜಕುಮಾರ್ ಶ್ರೀರವಿಶಂಕರ್ ಗುರೂಜಿ ಅವರು ನನ್ನ ಮಗ ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಆಶೀರ್ವದಿಸಿದ್ದಾರೆ. ಆತ್ಮೀಯ ಗೆಳೆಯರಾದ ವಿಷ್ಣುವರ್ಧನ್ ಹಾಗು ಅಂಬರೀಶ್ ಅವರ ಪತ್ನಿಯರಾದ ಭಾರತಿ ವಿಷ್ಣುವರ್ಧನ್ ಹಾಗೂ ಸುಮಲತ ಅಂಬರೀಶ್ ಅವರು ಬಂದಿರುವುದು ಬಹಳ ಖುಷಿಯಾಗಿದೆ. ರಾಕ್ ಲೈನ್ ವೆಂಕಟೇಶ್ ಕರ್ನಾಟಕದಲ್ಲಿ “ಕಣ್ಣಪ್ಪ” ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ. ಭಾರತೀಯ ಚಿತ್ರರಂಗದ ಪ್ರಸಿದ್ಧ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪೆÇ್ರೀತ್ಸಾಹವಿರಲಿ ಎಂದರು.

ನಟ ವಿಷ್ಣು ಮಂಚು ಮಾತನಾಡಿ ಸೋಮವಾರದ ದಿನ ನಮ್ಮ ಚಿತ್ರದ “ಶಿವಶಿವ ಶಂಕರ” ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಗುರೂಜಿ ಅವರಿಗೆ, ಭಾರತಿ ವಿಷ್ಣುವರ್ಧನ್, ಸುಮಲತ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಿಗೆ ಧನ್ಯವಾದ. ನಮ್ಮ ಚಿತ್ರ ಏಪ್ರಿಲ್ 25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರು ನೋಡಿ ಪ್ರೋತ್ಸಾಹ ನೀಡಿ ಎಂದರು

ನಟಿ ಭಾರತಿ ವಿಷ್ಣುವರ್ಧನ್ ಮಾತನಾಡಿ ಬಿಡುಗಡೆಯಾದ ಹಾಡು ತುಂಬಾ ಚೆನ್ನಾಗಿದೆ. ಚಿತ್ರ ನೋಡುವ ಕಾತುರ ಹೆಚ್ಚಾಗಿದೆ. ನಮ್ಮ ಯಜಮಾನರಿಗೆ ಮೋಹನ್ ಬಾಬು ಎಂದರೆ ಬಹಳ ಪ್ರೀತಿ. ಅವರಿಗೂ ನಮ್ಮ ಯಜಮಾನರೆಂದರೆ ಅಷ್ಟೇ ಪ್ರೀತಿ. ಹಾಗಾಗಿ ಮೋಹನ್ ಬಾಬು, ಅವರ ಮಗನಿಗೆ ನಮ್ಮ ಯಜಮಾನರ ಹೆಸರನ್ನೇ ಇಟ್ಟಿದ್ದಾರೆ ಒಳ್ಳೆಯದಾಗಲಿ ಎಂದು ಹಾರೈಸಿದರು

ಸುಮಲತ ಅಂಬರೀಶ್ ಮಾತನಾಡಿ ಅಂಬರೀಶ್ ಅವರಿಗೆ ಮೋಹನ್ ಬಾಬು ಬಹಳ ಆತ್ಮೀಯರು. ಅವರ ಮಗ ವಿಷ್ಣು ಅವರನ್ನು ಸಹ ನಾವು ಚಿಕ್ಕವಯಸ್ಸಿನಿಂದ ನೋಡಿಕೊಂಡು ಬಂದಿದ್ದೇವೆ. ಮೋಹನ್ ಬಾಬು ನಿರ್ಮಾಣದ ಹಾಗೂ ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರದ ಹಾಡನ್ನು ನೋಡಿ ಬಹಳ ಖುಷಿಯಾಯಿತು. ಚಿತ್ರ ಯಶಸ್ವಿಯಾಗಲೆಂದು ಶುಭಕೋರಿದರು

ರಾಕ್ ಲೈನ್ ವೆಂಕಟೇಶ್ ಮಾತನಾಡಿ “ಕಣ್ಣಪ್ಪ” ಚಿತ್ರವನ್ನು ಈಗಾಗಲೇ ನೋಡಿದ್ದೇನೆ. ಬಹಳ ಚೆನ್ನಾಗಿದೆ. ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸಂತೋಷವಾಗುತ್ತಿದೆ ಎಂದು ಕರ್ನಾಟಕದ ವಿತರಣೆ ಹಕ್ಕು ಪಡೆದುಕೊಂಡಿರುವ
ತಿಳಿಸಿದರು.

ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್, ಹಾಡು ಬರೆದಿರುವ ರಾಮಜೋಗಿ ಶಾಸ್ತ್ರಿ ಹಾಗೂ ಸಂಗೀತ ನಿರ್ದೇಶಕ ಸ್ಟೀಫನ್ ದೇವಸ್ಸಿ “ಕಣ್ಣಪ್ಪ” ಚಿತ್ರದ ಕುರಿತು ಮಾತನಾಡಿದರು. ಹೆಸಾರಾಂತ ಗಾಯಕ ವಿಜಯ್ ಪ್ರಕಾಶ್ ಈ ಹಾಡನ್ನು ಹಾಡಿದ್ದಾರೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin