Sahasa Simha Dr. Vishnuvardhan Amrutha Mahotsava is expected to be a part of the events of the Indian cinema industry

ಸಾಹಸ ಸಿಂಹ ಡಾ, ವಿಷ್ಣುವರ್ಧನ್ ಅಮೃತ ಮಹೋತ್ಸವದಲ್ಲಿ ಭಾರತೀಯ ಚಿತ್ರರಂಗದ ಘಟಾನುಘಟಿಗಳ ಭಾಗಿ ನಿರೀಕ್ಷೆ - CineNewsKannada.com

ಸಾಹಸ ಸಿಂಹ ಡಾ, ವಿಷ್ಣುವರ್ಧನ್ ಅಮೃತ ಮಹೋತ್ಸವದಲ್ಲಿ ಭಾರತೀಯ ಚಿತ್ರರಂಗದ ಘಟಾನುಘಟಿಗಳ ಭಾಗಿ ನಿರೀಕ್ಷೆ

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು ‘ಯಜಮಾನರ ಅಮೃತ ಮಹೋತ್ಸವ’ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿ ನಿರ್ಧರಿಸಿದೆ. ಅಮೃತ ಮಹೋತ್ಸವದ ನೇತೃತ್ವವನ್ನು ಹಿರಿಯ ನಿರ್ದೇಶಕರು ಮತ್ತು ಡಾ. ವಿಷ್ಣುವರ್ಧನ್ ಅವರ ಆಪ್ತರೂ ಆದ ಎಸ್. ನಾರಾಯಣ್ ವಹಿಸಿಕೊಂಡಿದ್ದು, ಮಾರ್ಗದರ್ಶಕರಾಗಿ ಎಸ್. ವಿ. ರಾಜೇಂದ್ರಸಿಂಗ್ ಬಾಬು ಜೊತೆಯಾಗಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಮತ್ತೊಬ್ಬ ನಿರ್ಮಾಪಕರಾದ ರಮೇಶ್ ಯಾದವ್, ಎಸ್ ನಾರಾಯಣ್, ರಾಜೇಂದ್ರಸಿಂಗ್ ಬಾಬು ಈ ವೇಳೆ ಉಪಸ್ಥಿತರಿದ್ದರು

ರಾಕ್ ಲೈನ್ ವೆಂಕಟೇಶ್ ಅವರು ಅನಿವಾರ್ಯ ಕಾರಣಗಳಿಂದ ಅನುಪಸ್ಥಿತರಾಗಿದ್ದು ಶುಭ ಹಾರೈಸಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ಈಹೊತ್ತಿನ ಅಗತ್ಯವಾಗಿದ್ದು, ಎಲ್ಲ ನಟರಿಗೂ ಅಂಥದ್ದೊಂದು ಗೌರವ ಸಂದಿದ್ದರೂ, ವಿಷ್ಣುವರ್ಧನ್ ಅವರಿಗೆ ಅಂಥಹ ಗೌರವ ಸಿಕ್ಕಿಲ್ಲವಾದ್ದರಿಂದ, ಕನ್ನಡ ಚಲನಚಿತ್ರರಂಗದಲ್ಲಿ ಇಂಥದ್ದೊಂದು ದೊಡ್ಡ ಕಾರ್ಯಕ್ರಮ ಆಯೋಜಿಸುವ ತುರ್ತು ಇರುವುದರಿಂದ ಸಮಸ್ತ ಕಲಾವಿದರ ಸಂಘ ಮತ್ತು ಕಲಾವಿದರು ಭಾಗವಹಿಸುವುದಾಗಿ ತಿಳಿಸಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ವಾಣಿಜ್ಯ ಮಂಡಳಿಯು ಕಾರ್ಯಕ್ರಮಕ್ಕೆ ಕೇವಲ ಸಹಕಾರವನ್ನಲ್ಲದೆ ಸಹಭಾಗಿತ್ವ ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದರು. ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ಕೂಡ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.

ಹಿರಿಯ ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಮಾತನಾಡಿ, ಅಮೃತ ಮಹೋತ್ಸವಕ್ಕೆ ಭಾರತೀಯ ಚಿತ್ರರಂಗದ ವಿಷ್ಣುವರ್ಧನ್ ಅವರ ಆಪ್ತರನ್ನೆಲ್ಲ ಆಹ್ವಾನಿಸುವ ಜವಾಬ್ದಾರಿ ವಹಿಸಿಕೊಳ್ಳುವುದಾಗಿ ಜೊತೆಗೆ ಹಿಂದಿ, ತಮಿಳು, ಮಲಯಾಳಂ, ತೆಲುಗು ಚಿತ್ರರಂಗದ ಖ್ಯಾತ ನಟರನ್ನು ಅಮೃತ ಮಹೋತ್ಸವಕ್ಕೆ ಹಾಜರಾಗುವಂತೆ ನೋಡಿಕೊಳ್ಳುವುದಾಗಿ ತಿಳಿಸಿದರು.

ಇನ್ನೋರ್ವ ಹಿರಿಯ ನಿರ್ದೇಶಕ ಎಸ್. ನಾರಾಯಣ್ ಮಾತನಾಡಿ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಿ, ಇದಕ್ಕೆ ಕನ್ನಡದ ಸಮಸ್ತ ಚಿತ್ರರಂಗ ಭಾಗವಹಾಸಲಿದೆ ಎಂಬ ಭರವಸೆಯ ಜೊತೆಗೆ, ಈಗಾಗಲೇ ಅಮರನಟ ಎಂಬ ಕಾರ್ಯಕ್ರಮವನ್ನು ಡಾ. ರಾಜ್ ಕುಮಾರ್ ಅವರ ಹೆಸರಲ್ಲಿ , ಅಂಬಿ ಸಂಭ್ರಮ ಎನ್ನುವ ಕಾರ್ಯಕ್ರಮವನ್ನು ಡಾ. ಅಂಬರೀಷ್ ಅವರ ಹೆಸರಲ್ಲಿ ಆಯೋಜಿಸಿದ ಅನುಭವ ತನಗಿರುವುದರಿಂದ, ಕನ್ನಡ ಚಿತ್ರರಂಗದ ತ್ರಿಮೂರ್ತಿಗಳಲ್ಲೊಬ್ಬರದ ಡಾ. ವಿಷ್ಣುವರ್ಧನ್ ಅವರ ಕಾರ್ಯಕ್ರಮದಲ್ಲೂ ಭಾಗಿಯಾಗುವ ಭಾಗ್ಯ ನನಗೆ ದಕ್ಕಿರುವುದು ತಮ್ಮ ಪುಣ್ಯ ಎಂದರು

ಡಾ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮಾತನಾಡಿ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಕನ್ನಡ ಚಿತ್ರರಂಗದ ಮಟ್ಟಿಗೆ ಇದು ಬೂಸ್ಟರ್ ಡೋಸ್ ಕಾರ್ಯಕ್ರಮವಾಗಿ ಕೆಲಸ ಮಾಡಲಿದೆ ಮತ್ತು ಡಾ. ವಿಷ್ಣುವರ್ಧನ್ ಅವರಿಗೆ ಆದ ಅನೇಕ ನೋವುಗಳಿಗೆ ಉತ್ತರವಾಗಿ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ ಎಂದು, ಮತ್ತು ಇಡೀ ರಾಜ್ಯಾದ್ಯಂತ ದಸರಾ ರೀತಿಯಲ್ಲಿ ಈ ಉತ್ಸವವನ್ನು ಆಯೋಜಿಸಬೇಕೆಂದು ಕರೆ ನೀಡಿದರು.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin