ಸಸ್ಪೆನ್ಸ್, ಥ್ರಿಲ್ಲರ್ “ಉಜ್ಜಯಿನಿ ಮಹಾಕಾಲ” ಚಿತ್ರ ,ಶೀಷಿಕೆ, ಮೋಷನ್ ಪೋಸ್ಟರ್ ಬಿಡುಗಡೆ
ದ್ವಾದಶ ಜ್ಯೋತಿರ್ಲಿಂಗಗಳಲ್ಲಿ “ಉಜ್ಜಯಿನಿ ಮಹಾಕಾಲ” ಕೂಡ ಒಂದು. ಈಗ ಅದೇ ಶೀರ್ಷಿಕೆಯಲ್ಲಿ ಕನ್ನಡ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಹರಿಪ್ರಸಾದ್ ಎಂ ಮಂಡ್ಯ ನಿರ್ಮಾಣ – ನಿರ್ದೇಶನದಲ್ಲಿ ವಿನಯ್ ನಾಯಕನಾಗಿ ನಟಿಸುತ್ತಿರುವ “ಉಜ್ಜಯಿನಿ ಮಹಕಾಲ” ಪೌರಾಣಿಕ ಚಿತ್ರವಲ್ಲ.
ಚಿತ್ರದ ಶೀರ್ಷಿಕೆ ಹಾಗು ಮೋಷನ್ ಪೋಸ್ಟರ್ ಅನ್ನು ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಬಿಡುಗಡೆ ಮಾಡಿದರು. ನಿರ್ಮಾಪಕ ನಾಗೇಶ್ ಕುಮಾರ್, ನಿರ್ದೇಶಕ ಜೆ.ಜಿ.ಶ್ರೀನಿವಾಸ್ ಲ್ಲಿ ಉಪಸ್ಥಿತರಿದ್ದರು.
ನಿರ್ದೇಶಕ ಹರಿಪ್ರಸಾದ್ ಮಾತನಾಡಿ ನಿರ್ದೇಶಕನಾಗಿ ಮೊದಲ ಚಿತ್ರ. ಈ ಚಿತ್ರದ ಚಿತ್ರೀಕರಣ ಆರಂಭವಾಗಿ ಒಂದು ತಿಂಗಳಾಗಿದೆ. ಅರ್ಧದಷ್ಟು ಚಿತ್ರೀಕರಣ ಮುಗಿದಿದೆ. “ಉಜ್ಜಯಿನಿ ಮಹಾಕಾಲ” ಪೌರಾಣಿಕ ಚಿತ್ರವಲ್ಲ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. “ಉಜ್ಜಯಿನಿ ಮಹಾಕಾಲ” ಎಂದು ಶೀರ್ಷಿಕೆಯಿಡಲು ಕಾರಣವಿದೆ. ಶೀರ್ಷಿಕೆಗೂ ಚಿತ್ರಕ್ಕೂ ಸಂಬಂಧವಿದೆ. ಮುಂದಿನ ಹಂತದಲ್ಲಿ ಉಜ್ಜಯಿನಿಯಲ್ಲೂ ಚಿತ್ರೀಕರಣ ನಡೆಯಲಿದೆ ಎಂದರು

ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇನ್ನೂ ಎಲ್ಲರ ಜೀವನದಲ್ಲೂ ಮಹಾಕಾಲ ಅಂತ ಒಂದು ಬರುತ್ತದೆ. ಅದು ನಮ್ಮ ನಾಯಕನ ಜೀವನದಲ್ಲೂ ಬಂದಾಗ ಏನಾಗಬಹುದು? ಎಂಬುದನ್ನು ಸಹ ತೋರಿಸುತ್ತಿದ್ದೇವೆ. ನಾನೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡುತ್ತಿದ್ದೇನೆ. ನಿರ್ಮಾಣಕ್ಕೆ ರತ್ನಾಕರ್ ಹಾಗೂ ಮೋಹನ್ ಅವರು ಸಾಥ್ ನೀಡಿದ್ದಾರೆ ಎಂದರು
ನಾಯಕ ವಿನಯ್ ಮಾತನಾಡಿ ಹಿಂದೆ ಸಹ ಕಲಾವಿದನಾಗಿ ಅಭಿನಯಿಸುತ್ತಿದ್ದೆ. ನಾಯಕನಾಗಿ ಇದು ಮೊದಲ ಚಿತ್ರ. ನಾನು ಈ ಚಿತ್ರದಲ್ಲಿ ಅನಾಥ. ಸೂರ್ಯ ನನ್ನ ಪಾತ್ರದ ಹೆಸರು ಎಂದರು
ಅಶ್ವಿನಿ ಬೇಲೂರು ಮಾತನಾಡಿ ಚಿತ್ರದಲ್ಲಿ ನಾಯಕನ ಪ್ರೇಯಸಿ. ಪ್ರಿಯ ನನ್ನ ಪಾತ್ರದ ಹೆಸರು ಎಂದು ತಿಳಿಸಿದರು.

ಮತ್ತೊಬ್ಬ ನಾಯಕಿ ಡಯಾನ ಜೆಸಿಕಾ ಮಾತನಾಡಿ ಕೀರ್ತಿ ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ ಎಂದರು
ಚಿತ್ರದಲ್ಲಿ ಅಭಿನಯಿಸುತ್ತಿರುವ ಮೋಹನ್ ಚನ್ನಪಟ್ಟಣ ಹಾಗೂ ರಮಣ್ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ರಘು ಅ ರೂಗಿ ಛಾಯಾಗ್ರಹಣ, ಕಲ್ಕಿ ಅಭಿಷೇಕ್ ಸಂಗೀತ ನಿರ್ದೇಶನ ಹಾಗೂ ಗಣಿ ಲಚ್ಚು & ರಘು ಅ ರೂಗಿ ಅವರ ಸಂಕಲನ “ಉಜ್ಜಯಿನಿ ಮಹಾಕಾಲ” ಚಿತ್ರಕ್ಕಿದೆ.

