” ತಾಯವ್ವ ” ಚಿತ್ರಕ್ಕೆ ಯಶಸ್ವಿ 25 ದಿನಗಳ ಸಂಭ್ರಮ: ಚಿತ್ರತಂಡದಲ್ಲಿ ಸಂತಸ
ಕನ್ನಡದಲ್ಲಿ ಇತ್ತೀಚೆಗೆ ಚಿತ್ರಗಳು ಐವತ್ತು ,ನೂರುದಿನ ಓಡುವುದೇ ಕಡಿಮೆಯಾಗಿದೆ. ಅಂತಹುದರಲ್ಲಿ ವಿಭಿನ್ನ ಕಥಾ ಕಂದರದ ” ತಾಯವ್ವ” ಚಿತ್ರ 25 ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದು ಚಿತ್ರತಂಡದ ಮುಖದಲ್ಲ ನಗುವಿನ ಹೊನಲು ಮೂಡಿದಿದೆ

ಮೇ 30 ರಂದು ತೆರೆಕಂಡ ‘ತಾಯವ್ವ’ ಚಿತ್ರ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರೈಸಿದೆ. ಗೀತಪ್ರಿಯಾ ನಿರ್ಮಿಸಿ, ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ತಾಯವ್ವ’ ಮಹಿಳಾ ಪ್ರದಾನ ಕಥಾಹಂದರವನ್ನು ಹೊಂದಿದ ಗ್ರಾಮೀಣ ಭಾಗದ ಸೂಲಗಿತ್ತಿ ಮಹಿಳೆಯ ಬದುಕನ್ನು ಅನಾವರಣ ಮಾಡಲಾಗಿದೆ.
ತಾಯವ್ವ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಖುಷಿ ಹಂಚಿಕೊಳ್ಳುವ ಸಲುವಾಗಿ ಚಿತ್ರತಂಡ, ‘ಯಶಸ್ವಿ ಪತ್ರಿಕಾಗೋಷ್ಟಿ ಆಯೋಜಿಸಿತ್ತು. ಹಿರಿಯ ನಟ ಸುರೇಶ್ ಹೆಬ್ಳೀಕರ್, ಸಂಗೀತ ನಿರ್ದೇಶಕ ಕೆ. ಕಲ್ಯಾಣ್, ಲಹರಿ ವೇಲು, ನಿರ್ದೇಶಕರಾದ ಯೋಗರಾಜ್ ಭಟ್, ಹರಿಪ್ರಸಾದ್ ಜಯಣ್ಣ, ನಿರ್ಮಾಪಕ ಸಿಲ್ಕ್ ಮಂಜು, ‘ಕೃಪಾನಿಧಿ ಸಮೂಹ ಶಿಕ್ಷಣ ಸಂಸ್ಥೆ’ಗಳ ಅಧ್ಯಕ್ಷ ಸುರೇಶ್ ನಾಗಪಾಲ್, ನಟ ನಿರಂಜನ್ ಶೆಟ್ಟಿ, ನಟಿ ಸಿಂಧೂ ಲೋಕನಾಥ್ ಸೇರಿದಂತೆ ಚಿತ್ರರಂಗ ಮತ್ತು ವಿವಿಧ ಕ್ಷೇತ್ರಗಳ ಅನೇಕ ಗಣ್ಯರು ಹಾಜರಿದ್ದರು.
ನಿರ್ಮಾಪಕಿ ಮತ್ತು ನಟಿ ಗೀತಪ್ರಿಯಾ ಮಾತನಾಡಿ ‘ಸೂಲಗಿತ್ತಿಯೊಬ್ಬಳ ಬದುಕಿನ ಅನಾವರಣ ‘ತಾಯವ್ವ’ ಸಿನಿಮಾದ ಮೂಲಕ ಮಾಡಿದ್ದೇವೆ. ಸೂಲಗಿತ್ತಿ ನರಸಮ್ಮ ಅವರಂಥಗ್ರಾಮೀಣ ಭಾಗದ ಅನೇಕ ಸೂಲಗಿತ್ತಿ ಮಹಿಳೆಯರನ್ನು ಪ್ರೇರಣೆಯಾಗಿ ತೆಗೆದುಕೊಂಡು ಸಿನಿಮಾ ಮಾಡಿದ್ದೇವೆ. ಸಿನಿಮಾ ಬಿಡುಗಡೆಯಾದ ನಂತರ ಪ್ರೇಕ್ಷಕರು ಮತ್ತು ಮಾಧ್ಯಮಗಳಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ‘ತಾಯವ್ವ’ ಸಿನಿಮಾವನ್ನು ನೋಡಿದ ಪ್ರತಿಯೊಬ್ಬರೂ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಬೆಳಿಸಿ ಎಂಬ ಸಂದೇಶ ಸಿನಿಮಾ ನೋಡಿದ ಪ್ರತಿಯೊಬ್ಬರ ಮನಮುಟ್ಟಿದೆ’ ಎಂದರು.

ಮೊದಲ ಸಿನಿಮಾಕ್ಕೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ಸಿಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ‘ತಾಯವ್ವ’ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡು ಮಾತನಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಮುಂದೆಯೂ ಇಂಥದ್ದೇ ಸಾಮಾಜಿಕ ಕಥಾಹಂದರದ ಕಥೆಗಳನ್ನು ಸಿನಿಮಾ ಮಾಡಿ ತೆರೆಮೇಲೆ ತರಲು ಇದು ನಮಗೆ ಪ್ರೋತ್ಸಾಹಿಸಿದಂತಾಗಿದೆ’ ಎಂದರು.
‘ತಾಯವ್ವ’ ಚಿತ್ರದ ಯಶಸ್ಸಿನ ಸಂಭ್ರಮದಲ್ಲಿ ಹಾಜರಿದ್ದ ಅನೇಕ ಗಣ್ಯರು ಚಿತ್ರದ ಬಗ್ಗೆ ಮತ್ತು ನಟಿ, ನಿರ್ಮಾಪಕಿ ಗೀತಪ್ರಿಯಾ ಅವರ ಬಗ್ಗೆ ನೆಚ್ಚುಗೆಯ ಮಾತುಗಳನ್ನಾಡಿದರು.

