"Tequila" with a different storyline to hit the screens on May 16th

ವಿಭಿನ್ನ ಕಥಾಹಂದರ “ಟಕೀಲಾ’ ಮೇ 16ಕ್ಕೆ ತೆರೆಗೆ - CineNewsKannada.com

ವಿಭಿನ್ನ ಕಥಾಹಂದರ “ಟಕೀಲಾ’ ಮೇ 16ಕ್ಕೆ ತೆರೆಗೆ

ನಿರ್ದೇಶಕ ಮರಡಿಹಳ್ಳಿ ನಾಗಚಂದ್ರ ನಿರ್ಮಾಣ ಮಾಡಿರುವ ವಿಭಿನ್ನ ಕಥಾಹಂದರದ ಚಿತ್ರ” ಟಕೀಲಾ” ಇದೇ ಮೇ 16 ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.

‘ಟಕೀಲಾ’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿರುವುದು ಕೆ.ಪ್ರವೀಣ್‍ನಾಯಕ್. ಈ ಹಿಂದೆ ‘ಜಡ್’ ‘ಹೂ ಅಂತಿಯಾ ಉಹೂ ಅಂತೀಯ’ ಹಾಗೂ ‘ಮೀಸೆ ಚಿಗುರಿದಾಗ’ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದರು.

‘ವಿದ್ಯಾರ್ಥಿ’ ‘ಮುನಿಯ’ ‘ಜನ್‍ಧನ್’ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಮರಡಿಹಳ್ಳಿ ನಾಗಚಂದ್ರ ಹೊಸ ಅನುಭವ ಎನ್ನುವಂತೆ, ಈ ಬಾರಿ ಶ್ರೀ ಸಿದ್ದಿವಿನಾಯಕ ಫಿಲಂಸ್ ಮುಖಾಂತರ ನಿರ್ಮಾಣ ಮಾಡುತ್ತಿದ್ದಾರೆ. ಶಂಕರ್ ರಾಮರೆಡ್ಡಿ ಸಹ ನಿರ್ಮಾಪಕರು.

ಧರ್ಮಕೀರ್ತಿರಾಜ್ ನಾಯಕ, ನಿಖಿತಾಸ್ವಾಮಿ ನಾಯಕಿ. ತಾರಗಣದಲ್ಲಿ ನಾಗೇಂದ್ರಅರಸ್, ಕೋಟೆಪ್ರಭಾಕರ್, ಸುಮನ್‍ಶರ್ಮ, ಅರುಣ್ ಮೇಸ್ಟ್ರು ಮುಂತಾದವರು ನಟಿಸಿದ್ದಾರೆ.

ಛಾಯಾಗ್ರಹಣ ಪಿ.ಕೆ.ಹೆಚ್.ದಾಸ್, ಸಂಗೀತ ಟಾಪ್‍ಸ್ಟಾರ್ ರೇಣು, ಸಂಕಲನ ಕೆ.ಗಿರೀಶ್‍ಕುಮಾರ್, ಸಾಹಸ ಜಾಗ್ವರ್ ಸಣ್ಣಪ್ಪ-ರಮೇಶ್, ನೃತ್ಯ ಸ್ಟಾರ್ ನಾಗಿ, ಕಲೆ ಪ್ರಶಾಂತ್, ಕಾರ್ಯಕಾರಿ ನಿರ್ಮಾಪಕರು ಆರ್.ತ್ಯಾಗರಾಜು ಅವರದು. ಬೆಂಗಳೂರು, ದೇವರಾಯನದುರ್ಗ, ಸಕಲೇಶಪುರದಲ್ಲಿ ಶೂಟಿಂಗ್ ನಡೆದಿದೆ. ಅಂದಹಾಗೆ ಚಿತ್ರ ಇದೇ ಮೇ 16ರಂದು ರಾಜ್ಯದ್ಯಂತ ತೆರೆ ಕಾಣುತ್ತಿದೆ.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin