"Thank you for visiting Kuppalli's Kavimane and Kavishaila: Actor Saikumar

” ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಭೇಟಿ ನೀಡಿ ಧನ್ಯನಾದೆ : ನಟ ಸಾಯಿಕುಮಾರ್ - CineNewsKannada.com

” ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಭೇಟಿ ನೀಡಿ ಧನ್ಯನಾದೆ : ನಟ ಸಾಯಿಕುಮಾರ್

ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನಗೆದ್ದಿರುವ ದಕ್ಷಿಣ ಭಾರತದ ಖ್ಯಾತ ನಟ ಸಾಯಿಕುಮಾರ್ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಭೇಟಿ ನೀಡಿದ್ದಾರೆ. ಆ ಸುಂದರ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಸಾಯಿಕುಮಾರ್ ಹಂಚಿಕೊಂಡಿದ್ದಾರೆ.

“ನಾನು ಹಾಗೂ ನನ್ನ ಕೆಲವು ಸ್ನೇಹಿತರು ಇತ್ತೀಚಿಗೆ ತೀರ್ಥಹಳ್ಳಿಯಿಂದ ರಾಷ್ಟ್ರಕವಿ ಕುವೆಂಪು ಅವರ ಮನೆ ಹಾಗು ಕವಿಶೈಲಕ್ಕೆ ಭೇಟಿ ನೀಡಿದ್ದೆ. ಅಬ್ಬಾ ಆ ಸ್ಥಳವನ್ನು ಬಣಿಸಲು ಪದಗಳೆ ಸಿಗುತ್ತಿಲ್ಲ. ನಾನು ನನ್ನ ಸಿನಿಮಾಗಳಲ್ಲಿ ಕುವೆಂಪು ಅವರ “ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು”, “ಕನ್ನಡಕ್ಕೆ ಹೋರಾಡು ಕನ್ನಡದ ಕಂದ” ,”ಬಾರಿಸು ಕನ್ನಡ ಡಿಂಡಿಮವ” ಮುಂತಾದ ಕವನಗಳನ್ನು ಹಾಗೂ “ಜಯ ಭಾರತ ಜನನಿಯ ತನುಜಾತೆ” ನಾಡಗೀತೆಯನ್ನು ಹಾಡುತ್ತಿರುತ್ತೇನೆ.

ಈವರೆಗೂ ಕುಪ್ಳಳ್ಳಿಗೆ ಹೋಗಿರಲಿಲ್ಲ. ಇತ್ತೀಚಿಗೆ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಹೋಗಿದ್ದೆ. ಪ್ರಕೃತಿಯ ಮಡಿಲಲ್ಲಿರುವ ಆ ಪುಣ್ಯಸ್ಥಳವನ್ನು ನೋಡಿ ಪುಳಕಿತನಾದೆ. ಅವರು ಬಳಸುತ್ತಿದ್ದ ಲೇಖನಿ ಹಾಗೂ ಪುಸ್ತಕ ಮುಂತಾದವುಗಳನ್ನು ಕಂಡು ಧನ್ಯನಾದೆ.

ನಾನು ಸುಮಾರು ಮೂವತ್ತು ವರ್ಷಗಳಿಂದ ಕರ್ನಾಟಕದಲ್ಲಿ ಕನ್ನಡ ಚಿತಗಳನ್ನು ಮಾಡುತ್ತಾ ಬಂದಿದ್ದರೂ ಕುಪ್ಪಳ್ಳಿಯನ್ನು ನೋಡುವ ಯೋಗ ಬಂದಿರಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಾಗೂ ಯುವಕರು ಕುಪ್ಪಳ್ಳಿಗೆ ಭೇಟಿ ನೀಡಿ. ಅಲ್ಲಿನ ಸೊಬಗನ್ನ ಕಣ್ತುಂಬಿಕೊಳ್ಳ ಎನ್ನುತ್ತಾರೆ ನಟ ಸಾಯಿಕುಮಾರ್.

Editor

Leave a Reply

Your email address will not be published. Required fields are marked *

error: Our contents are protected!! We discourage piracy of our website articles and contents. Thanks -Admin