ಫೆಬ್ರವರಿ 7 ಕ್ಕೆ “ಅನ್ ಲಾಕ್ ರಾಘವ” ಚಿತ್ರ ಬಿಡುಗಡೆ

ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರ ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ.

ಚಿತ್ರದ ಕುರಿತು ಮಾಹಿತಿ ಹಂಚಿಕೊಂಡ ದೀಪಕ್ ಮಧುವನಹಳ್ಳಿ, ಹಿಂದಿನ ಚಿತ್ರಗಳನ್ನು ನೋಡಿದ್ದ ಗೆಳೆಯರು, ನಿನ್ನ ಚಿತ್ರಗಳಲ್ಲಿ ಗ್ಲಾಮರ್ ನಾಯಕಿಯರು ಇರುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ “ಅನ್ ಲಾಕ್ ರಾಘವ” ಚಿತ್ರದ ಫಸ್ಟ್ಲುಕ್ ನಲ್ಲಿ ರೆಚೆಲ್ ಅವರನ್ನು ನೋಡಿದ ಗೆಳೆಯರು ನೀನೊಬ್ಬ ಕಮರ್ಷಿಯಲ್ ಚಿತ್ರದ ನಿರ್ದೇಶಕ ಎಂದು ಹೇಳುತ್ತಿದ್ದಾರೆ ಎಂದರು.

ನಾಯಕ ಮಿಲಿಂದ್ ಸುರದ್ರೂಪಿ ನಟ ಅಷ್ಟೇ ಅಲ್ಲ. ಭರವಸೆಯ ನಟ ಕೂಡ ಹೌದು. ಇದೊಂದು ಪಕ್ಕಾ ಮನೋರಂಜನೆಯ ರಸದೌತಣ ನೀಡುವ , ಪ್ರೇಕ್ಷಕ ಕೊಟ್ಟ ದುಡ್ಡಿಗೆ ಮೋಸ ಮಾಡದ ಸಿನಿಮಾ. “ರಾಮ ರಾಮ ರೆ” ಖ್ಯಾತಿಯ ಸತ್ಯಪ್ರಕಾಶ್ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿತ್ರದುರ್ಗದಲ್ಲಾಗಿದೆ. ಲವಿತ್ ಛಾಯಾಗ್ರಹಣದಲ್ಲಿ ಚಿತ್ರದುರ್ಗದ ಸೊಬಗನ್ನು ನೋಡುವುದೆ ಚೆಂದ. ಅನೂಪ್ ಸೀಳಿನ್ ಸಂಗೀತ ನೀಡಿರುವ ಚಿತ್ರದ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಚಿತ್ರ ಕೂಡ ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು
ನಾಯಕ ಮಿಲಿಂದ್ ಮಾತನಾಡಿ, ಹೊಸ ನಾಯಕನ ಎಂಟ್ರಿಗೆ ಬೇಕಾದ ಎಲ್ಲಾ ಅಂಶಗಳನ್ನು ಸೇರಿಸಿ ಒಂದು ಚೆಂದವಾದ ಕಥೆಯನ್ನು ಸತ್ಯಪ್ರಕಾಶ್ ಕಟ್ಟಿ ಕೊಟ್ಟಿದ್ದಾರೆ. ಅಷ್ಟೇ ಸುಂದರವಾಗಿ ದೀಪಕ್ ನಿರ್ದೇಶನ ಮಾಡಿದ್ದಾರೆ. ರೆಚೆಲ್ ಅಭಿನಯ ಅದ್ಭುತವಾಗಿದೆ. ನೀವು ಹಿಂದೆ ಯಾವ ಚಿತ್ರಗಳಲ್ಲೂ ನೋಡಿರದ ಸಾಧುಕೋಕಿಲ ಹಾಗೂ ಶೋಭ್ ರಾಜ್ ಅವರನ್ನು ನಮ್ಮ ಚಿತ್ರದಲ್ಲಿ. ನೋಡಬಹುದು. ಅವಿನಾಶ್, ಭೂಮಿ ಶೆಟ್ಟಿ ಮುಂತಾದವರು ಚಿತ್ರದಲ್ಲಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ. ಇತ್ತೀಚಿಗೆ ಟೆಕ್ನಿಕಲ್ ಶೋನಲ್ಲಿ ಚಿತ್ರ ನೋಡಿದಾಗ ಎಲ್ಲರ ಮುಖದಲ್ಲಿ ಭರವಸೆಯ ನಗು ಮೂಡಿತ್ತು. ಆ ನಗು ಪ್ರೇಕ್ಷಕನ ಮುಖದಲ್ಲೂ ಮೂಡಲಿದೆ ಎಂಬ ಭರವಸೆ ಇದೆ ಎಂದರು.

ನಾಯಕಿ ರಚೆಲ್ ಮಾತನಾಡಿ ಚಿತ್ರದ ಕಥೆ ಹೇಳಿದಾಗಲೇ ಚಿತ್ರದಲ್ಲಿ ನಿರ್ಧರಿಸಿದ್ದೆ. ಅಷ್ಟು ಸುಂದರ ಕಥಾನಕವಿದು. ನಡೆಸಬೇಕೆಂದು ಚಿತ್ರದಲ್ಲಿ ಪ್ರಾಚ ಶಾಸ್ತ್ರಗ್ನೆ. ಜಾನಕಿ ಪಾತ್ರದ ಹೆಸರು ಎಂದು ಹೇಳಿದರು
ನಿರ್ಮಾಪಕ ಮಂಜುನಾಥ್ ಮಾತನಾಡಿ ನನ್ನ ನಿರ್ಮಾಣದ ನಾಲ್ಕನೇ ಚಿತ್ರ ಸಾಕಷ್ಟು ಸವಾಲುಗಳನ್ನು ಎದುರಿಸಿ ನಮ್ಮ ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚಿಗೆ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ಚಿತ್ರವನ್ನು ನೋಡಿದಾಗ ಮನಸ್ಸಿಗೆ ಬಹಳ ಖುಷಿಯಾಯಿತು. ಇದೊಂದು ಸೊಗಡಿನ ಚಿತ್ರ. “ಅನ್ ಲಾಕ್ ರಾಘವ” ಚೆನ್ನಾಗಿ ಮೂಡಿಬರಲು ಚಿತ್ರತಂಡದ ಸಹಕಾರವೇ ಕಾರಣ ಎಂದು ಮಾಹಿತಿ ಹಂಚಿಕೊಂಡರು.