ಯುವನಟ ಸಮರ್ಜಿತ್ ಲಂಕೇಶ್ ಕನ್ನಡ ಚಿತ್ರರಂಗದ ಹೃತಿಕ್ ರೋಷನ್ : ನಟ ಉಪೇಂದ್ರ
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪಿ.ಲಂಕೇಶ್ ಕುಟುಂಬದ ಮೂರನೇ ತಲೆಮಾರು ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ಮೋಡಿ ಮಾಡಲು ಮುಂದಾಗಿದ್ದಾರೆ. ಪಿ.ಲಂಕೇಶ್ ಅವರ ಬಳಿಕ ಇಂದ್ರಜಿತ್ ಲಂಕೇಶ್ ಇದೀಗ ಸಮರ್ಜಿತ್ ಲಂಕೇಶ್ ಚಿತ್ರರಂಗದಲ್ಲಿ ಅದೃಷ್ಠ ಕಂಡುಕೊಳ್ಳಲು ಮುಂದಾಗಿದ್ದಾರೆ.
ಸಮರ್ಜಿತ್ ಲಂಕೇಶ್ ಮತ್ತು ಸಾನ್ಯಾ ಅಯ್ಯರ್ ನಟನೆಯ ಬಹುನಿರೀಕ್ಷಿತ ಚಿತ್ರ “ಗೌರಿ” ಚಿತ್ರ ಇದೇ 15 ರಂದು ರಾಜ್ಯಾದ್ಯಂತ ತೆರೆಗೆ ಬರಲಿದ್ದು ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಭರವಸೆಯ ಪ್ರತಿಭಾನ್ವಿತ ನಟನ್ನು ಸ್ವಾಗತಿಸಲು ಕನ್ನಡ ಚಿತ್ರರಂಗ ಸಜ್ಜಾಗಿದೆ. ಇದಕ್ಕೆ ಪೂರಕ ಎನ್ನುವಂತೆ ನಿರ್ಮಾಪಕ, ನಿರ್ದೇಶಕರೂ ಆಗಿರುವ ಇಂದ್ರಜಿತ್ ಲಂಕೇಶ್ ಪುತ್ರನ ಸಿನಿಮಾವನ್ನು ಚಿತ್ರರಂಗದಲ್ಲಿ ನೆಲೆ ನಿಲ್ಲುವಂತೆ ಮಾಡಿಸಲು ಎಲ್ಲಾ ಅಗತ್ಯ ತಯಾರಿ ಮತ್ತು ಸಿದ್ದತೆ ಮಾಡಿಕೊಂಡಿದ್ದಾರೆ.
ಚಿತ್ರ ಬಿಡುಗಡೆ ಮುನ್ನ ನಡೆದ ಪ್ರೀ ರೀಲೀಸ್ ಕಾರ್ಯಕ್ರಮಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆಗಮಿಸಿ ಹೊಸ ನಾಯಕನ್ನು ಚಿತ್ರರಂಗಕ್ಕೆ ಬರಮಾಡಿಕೊಂಡು, ಚಿತ್ರರಂಗಕ್ಕೆ ದೊಡ್ಡ ಆಸ್ತಿ ಆಗಲಿ, ಬಾಲಿವುಡ್ ಹಾಲಿವುಡ್ ಚಿತ್ರರಂಗಕ್ಕೆ ಹೋಗಲು ಬಿಡದೆ ಕನ್ನಡ ಚಿತ್ರರಂಗದಲ್ಲಿಯೇ ಸಮರ್ಜಿತ್ ಲಂಕೇಶ್ ಅವರನ್ನು ಉಳಿಸಿಕೊಳ್ಳೋಣ ಅದು ನಮ್ಮ ಕೈಯಲ್ಲಿಯೇ ಇದೆ ಎಂದಿದ್ಧಾರೆ
ಇಂದ್ರಜಿತ್ ಅವರದು ಗೋಲ್ಡನ್ ಹ್ಯಾಂಡ್. ನಟಿ ದೀಪಿಕಾ ಪಡುಕೋಣೆ ಅವರನ್ನು ಚಿತ್ರರಂಗಕ್ಕೆ ಪರಿಚಯ ಮಾಡಿದ್ದರು. ಅವರು ಇಂದು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಇವರ ಮಗ ಯಾವುದಾದರೂ ದೃಷ್ಟೀಲಿ ಇಲ್ಲಿ ಇರ್ತಾನೆ ಅನಿಸುತ್ತಾ ಬಾಲಿವುಡ್ಗೊ, ಹಾಲಿವುಡ್ಗೊ ಹೋಗೋ ತರಹ ಇದ್ದಾನೆ. ಅವನನ್ನು ಇಲ್ಲೇ ಇರಿಸಿಕೊಳ್ಳೋಕೆ ನಿಮ್ಮ ಕೈಲಿ ಸಾಧ್ಯ ಇದೆ. ಈ ತರಹ ಹೊಸ ತಲೆಮಾರಿನವರು ನಮ್ಮ ಕನ್ನಡ ಚಿತ್ರರಂಗದಲ್ಲಿ ಉಳಿದುಕೊಳ್ಳಬೇಕು ಅಂದರೆ ನಿಮ್ಮ ಕೈಯಲ್ಲಿ ಮಾತ್ರ ಸಾಧ್ಯ. ಅದಕ್ಕೆ ನೀವೆಲ್ಲಾ ಚಿತ್ರ ನೋಡಬೇಕು ಎಂದರು.
ಈ ಬ್ಯೂಟಿ ಮತ್ತು ಬುದ್ಧಿವಂತಿಕೆ ಮುಗ್ಧತೆಯಿಂದ ಬರುತ್ತದೆ. ಮುಗ್ಧತೆ ಇದೆಯಲ್ಲಾ ಅದೇ ಬ್ಯೂಟಿ. ಇವರ ಮುಖವನ್ನು ನೋಡಿ. ಇವರಿಗೆ ಹಾರೈಸುವುದು ಮುಖ್ಯವಲ್ಲ. ನೀವು ಹಾರೈಸಬೇಕು. ಫಸ್ಟ್ ಡೇ, ಫಸ್ಟ್ ಶೋ ಎಲ್ಲರೂ “ಗೌರಿ” ಸಿನಿಮಾ ನೋಡಿ. ಇವರ ಸಿನಿಮಾ ನೋಡಿದರೆ ನಮಗೂ ಖುಷಿ ಆಗುತ್ತೆ. ಇಂದ್ರಜಿತ್ ಶೋಮ್ಯಾನ್. ಈ ತರಹ ಕಾರ್ಯಕ್ರಮ ಮಾಡೋದಕ್ಕೆ ಅವರಿಂದಲೇ ಸಾಧ್ಯ. ಸಿನಿಮಾ ಸಹ ಅದೇ ರೀತಿ ಮಾಡಿರುತ್ತಾರೆ. ಕಾರ್ಯಕ್ರಮವನ್ನೇ ಹೀಗೆ ಮಾಡಿದ್ದಾರೆ, ಇನ್ನೂ ಸಿನಿಮಾ ಹೇಗೆ ಮಾಡಿರಬಹುದು ಯೋಚಿಸಿ ಎಂದು ಹೇಳಿದರು.
ಸಮರ್ಜಿತ್ ಲವ್ಸ್ಟೋರಿಗಳಿಗೂ ಸೂಟ್ ಆಗುತ್ತಾನೆ, ಆಕ್ಷನ್ ಚಿತ್ರಗಳಿಗೂ ಹೊಂದುತ್ತಾನೆ. ದೇಹವನ್ನೂ ಚೆನ್ನಾಗಿ ಬೆಳೆಸಿದ್ದಾನೆ. ಡ್ಯಾನ್ಸ್ ಸಹ ಮಾಡ್ತಾನೆ. ಜನ ಈಗಾಗಲೇ ಹೃತಿಕ್ ರೋಶನ್ ಅಂತ ಹೇಳೋಕೆ ಶುರು ಮಾಡಿದ್ದಾರೆ. ನೀನು ನಿನ್ನ ಮುಗ್ಧತೆ ಉಳಿಸಿಕೋ ಸಾಕು. ಎಷ್ಟು ಮುಗ್ಧನಪ್ಪಾ ನೀನು. ಇಲ್ಲಿ ಮುಗ್ಧತೆ ಉಳಿಸಿಕೊಳ್ಳೋದು ಬಹಳ ಕಷ್ಟ. ಸ್ವಲ್ಪ ದಿನ ಚಿತ್ರರಂಗದಲ್ಲಿ ಇದ್ದರೆ ಸಾಕು, ನಾವೆಲ್ಲಾ ಬಹಳ ಕಿಲಾಡಿಗಳಾಗಿ ಬಿಡ್ತೀವಿ. ಚಿಕ್ಕವರಾಗಿದ್ದಾಗ ಬಹಳ ಮುಗ್ಧರಾಗಿರುತ್ತೇವೆ. ಕೆಲವರು ವಯಸ್ಸಾದ ಮೇಲೂ ಹಾಗೇ ಇರುತ್ತಾರೆ. ಕೆಲವರು ಮಾತ್ರ ತಮಗೆ ಎಲ್ಲಾ ಗೊತ್ತು ಎಂದು ಕಳೆದುಕೊಂಡುಬಿಡುತ್ತಾರೆ ಎಂದು ಮೆಚ್ಚುಗೆಯ ಮಾತನಾಡಿದರು.
ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ ಸಿನಿಮಾ ಒಂದು ಕ್ರಿಯಾಶೀಲ ಮಾಧ್ಯಮ. ಪ್ರತಿ ಕ್ಷಣ ಯೋಚನೆ ಮಾಡಿ, ಏನಾದರೂ ಹೊಸತನ ತರುತ್ತಾರೆ ಎಂದರೆ ಅದು ಉಪೇಂದ್ರ. ಅವರು ಕನ್ನಡ ಚಿತ್ರರಂಗದಲ್ಲಿರುವುದು ನಮ್ಮ ಅದೃಷ್ಟ. ಉಪ್ಪಿ ಸಾರ್ ಅವರು ತಮ್ಮ ಬುದ್ಧಿವಂತಿಕೆಯಿಂದ ಮತ್ತು ಕ್ರಿಯಾಶೀಲತೆಯಿಂದ ಕನ್ನಡ ಚಿತ್ರರಂಗಕ್ಕೆ ದೊಡ್ಡ ಹೆಸರು ತಂದಿದ್ದಾರೆ. ಇವತ್ತು ಕನ್ನಡ ಚಿತ್ರರಂಗವನ್ನು ಜಗತ್ತಿಗೆ ತೆಗೆದುಕೊಂಡು ಹೋಗಿದ್ದಾರೆ.
ಎ',
ಉಪೇಂದ್ರ’ ಮತ್ತು ಸೂಪರ್' ಚಿತ್ರಗಳನ್ನು ನಾವು ಯೋಚನೆ ಮಾಡೋಕೂ ಸಾಧ್ಯವಿಲ್ಲ. ನನ್ನ ಮಗ
ಉಪೇಂದ್ರ’ ಸಿನಿಮಾ ಕ್ಲೈಮ್ಯಾಕ್ಸ್ ನೋಡಿದೆ, ಅವರು ಆಗಿನ ಕಾಲಕ್ಕೆ ಟೊರೋಂಟಿನೋ ಶೈಲಿಯ ಸಿನಿಮಾ ಮಾಡಿದ್ದರು ಎಂದು ಹೇಳುತ್ತಿದ್ದ. ಆ ರೀತಿಯ ಯೋಚನೆ ಮಾಡೋದು ಅಸಾಧ್ಯ. ಅವರು ನಮ್ಮ ನಡುವೆ ಇದ್ದಾರೆ ಅನ್ನೋದು ನಮ್ಮ ಹೆಮ್ಮೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ “ಗೌರಿ” ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಲ್ಲೇ ನೋಡಿ ಹರಸಿ ಎಂದು ಕೇಳಿಕೊಂಡರು.
ನಾಯಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ತಮ್ಮ ಮೊದಲ ಚಿತ್ರಕ್ಕೆ ಪೆÇ್ರೀತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ನಡೆದ ಫ್ಯಾಶನ್ ಶೋನಲ್ಲಿ ಕನ್ನಡದ ಚಿತ್ರರಂಗದ ಹಲವು ನಟಿಯರು ಹೆಜ್ಜೆ ಹಾಕಿ ಗಮನ ಸೆಳೆದರು.